ಇಲ್ಲಿನ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಗ್ರತೆ ಹಾಗೂ ಏಕತೆಯಿಂದ ಒಗ್ಗೂಡುವ ಬಲಿಷ್ಠ ಭಾರತವನ್ನು ನಿರ್ಮಿಸುವ ಸಂಕಲ್ಪ ಡಾ.ಬಿ.ಆರ್.ಅಂಬೇಡ್ಕರ್ ಅವರದಾಗಿತ್ತು. ಮುಸ್ಲಿಂ ಸಮುದಾಯವನ್ನು ಓಲೈಸಿ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಅಂದಿನ ಸರ್ಕಾರ ಅಂಬೇಡ್ಕರ್ ಅವರ ವಿರೋಧವನ್ನು ಲೆಕ್ಕಿಸದೆ ಸಂಸತ್ತಿನಲ್ಲಿ ಅಂಬೇಡ್ಕರ್ ಗೈರಾದ ಸಂದರ್ಭವನ್ನು ಸಮಯೋಚಿತವಾಗಿ ಬಳಸಿಕೊಂಡು 370 ಮತ್ತು 35ಎ ವಿಧಿಗಳನ್ನು ಸಂವಿಧಾನದಲ್ಲಿ ಸೇರ್ಪಡೆ ಮಾಡಿತ್ತು ಎಂದು ದೂರಿದರು.