ಬಾಶೆಟ್ಟಿಹಳ್ಳಿ (ದೊಡ್ಡಬಳ್ಳಾಪುರ): ಬಾಶೆಟ್ಟಿಹಳ್ಳಿ ಬಳಿ ಶುಕ್ರವಾರ ರಾತ್ರಿ ಗೋಮಾಂಸ ಕೊಂಡೊಯ್ಯುತ್ತಿದ್ದ ದ್ವಿಚಕ್ರ ವಾಹನಕ್ಕೆ ಜನರು ಬೆಂಕಿ ಹಚ್ಚಿದ್ದಾರೆ. ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಾಶೆಟ್ಟಿಹಳ್ಳಿ ರಾಜ್ಯ ಹೆದ್ದಾರಿಯಲ್ಲಿದ್ವಿಚಕ್ರ ವಾಹನ ಸವಾರಆಯತಪ್ಪಿ ಬಿದ್ದ. ಈ ವೇಳೆ ಚೀಲದಲ್ಲಿದ್ದ ಗೋಮಾಂಸ ರಸ್ತೆಯಲ್ಲಿ ಬಿದ್ದಿದೆ. ಇದನ್ನು ಕಂಡ ಸಾರ್ವಜನಿಕರು ಬೈಕ್ಗೆ ಬೆಂಕಿ ಹಚ್ಚಿದ್ದಾರೆ.
ಬಂಧಿತನನ್ನು ಹಿಂದೂಪುರ ಮೂಲದ ಅಸ್ಲಂ ಎಂದು ಗುರುತಿಸಲಾಗಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.