<p><strong>ಆನೇಕಲ್ : </strong>ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಬೇಗಿಹಳ್ಳಿ ವಸುಂದರ ಬಡಾವಣೆಯಲ್ಲಿ ಗುರುವಾರ ವ್ಯಕ್ತಿಯೊಬ್ಬರ ಕೊಲೆ ಆಗಿದೆ.</p>.<p>ತಮಿಳುನಾಡು ಮೂಲದ ಗಾರೆ ಮೇಸ್ತ್ರಿ ದಿಲೀಪ್ (27) ಎಂದು ಕೊಲೆಯಾದ ವ್ಯಕ್ತಿ.</p>.<p>ಕಟ್ಟಡ ನಿರ್ಮಾಣದ ಗಾರೆ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದ ದಿಲೀಪ್, ಕೆಲಸಗಾರ ರಾಯಚೂರು ಮೂಲದ ಹೊನ್ನಪ್ಪ ಎಂಬುವವರ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ.</p>.<p>ಗುರುವಾರ ಬೆಳಗ್ಗೆ ನಿರ್ಮಾಣ ಹಂತದ ಕಟ್ಟಡದಲ್ಲಿ ದಿಲೀಪ್ ಮತ್ತು ಹೊನ್ನಪ್ಪನ ಪತ್ನಿ ಇರುವುದನ್ನು ಕಂಡು ಕುಪಿತಗೊಂಡ ಹೊನ್ನಪ್ಪ ದೊಣ್ಣೆಯಿಂದ ಗಾರೆ ಮೇಸ್ತ್ರಿ ದಿಲೀಪ್ನ ತಲೆ ಹೊಡೆದಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡ ದಿಲೀಪ್ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಈ ವೇಳೆ ಮೃತಪಟ್ಟಿದ್ದಾರೆ ಎಂದು ಬನ್ನೇರುಘಟ್ಟ ಸರ್ಕಲ್ ಇನ್ಸ್ಪೆಕ್ಟರ್ ಉಮಾಮಹೇಶ್ ತಿಳಿಸಿದರು.</p>.<p>ಹೊನ್ನಪ್ಪ ಅವರನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ. ಬನ್ನೇರುಘಟ್ಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್ : </strong>ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಬೇಗಿಹಳ್ಳಿ ವಸುಂದರ ಬಡಾವಣೆಯಲ್ಲಿ ಗುರುವಾರ ವ್ಯಕ್ತಿಯೊಬ್ಬರ ಕೊಲೆ ಆಗಿದೆ.</p>.<p>ತಮಿಳುನಾಡು ಮೂಲದ ಗಾರೆ ಮೇಸ್ತ್ರಿ ದಿಲೀಪ್ (27) ಎಂದು ಕೊಲೆಯಾದ ವ್ಯಕ್ತಿ.</p>.<p>ಕಟ್ಟಡ ನಿರ್ಮಾಣದ ಗಾರೆ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದ ದಿಲೀಪ್, ಕೆಲಸಗಾರ ರಾಯಚೂರು ಮೂಲದ ಹೊನ್ನಪ್ಪ ಎಂಬುವವರ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ.</p>.<p>ಗುರುವಾರ ಬೆಳಗ್ಗೆ ನಿರ್ಮಾಣ ಹಂತದ ಕಟ್ಟಡದಲ್ಲಿ ದಿಲೀಪ್ ಮತ್ತು ಹೊನ್ನಪ್ಪನ ಪತ್ನಿ ಇರುವುದನ್ನು ಕಂಡು ಕುಪಿತಗೊಂಡ ಹೊನ್ನಪ್ಪ ದೊಣ್ಣೆಯಿಂದ ಗಾರೆ ಮೇಸ್ತ್ರಿ ದಿಲೀಪ್ನ ತಲೆ ಹೊಡೆದಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡ ದಿಲೀಪ್ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಈ ವೇಳೆ ಮೃತಪಟ್ಟಿದ್ದಾರೆ ಎಂದು ಬನ್ನೇರುಘಟ್ಟ ಸರ್ಕಲ್ ಇನ್ಸ್ಪೆಕ್ಟರ್ ಉಮಾಮಹೇಶ್ ತಿಳಿಸಿದರು.</p>.<p>ಹೊನ್ನಪ್ಪ ಅವರನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ. ಬನ್ನೇರುಘಟ್ಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>