ಬೂತಾನಹಳ್ಳಿ ಗ್ರಾಮದ ಕೆರೆಯಲ್ಲಿ ಮೊಸಳೆ ಕಾಣಿಸಿಕೊಂಡಿದ್ದರಿಂದ ರೈತರಿಗೆ ತೀವ್ರ ತೊಂದರೆಯಾಗಿತ್ತು. ಕುರಿ ದನ ಕರುಗಳನ್ನು ತೊಳೆಯಲು ಮತ್ತು ನೀರು ಕುಡಿಸಲು ಗ್ರಾಮದ ಜನರು ಕೆರೆಯನ್ನೇ ಅವಲಂಭಿಸಿದ್ದರು. ಕೆರೆಯಲ್ಲಿ ಮೊಸಳೆ ಕಂಡು ಬಂದಿದ್ದರಿಂದ ಭಯಗೊಂಡಿದ್ದರು. ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಅರಣ್ಯ ಇಲಾಖೆಯ ಸಿಬ್ಬಂದಿ ತ್ವರಿತವಾಗಿ ಮೊಸಳೆ ಹಿಡಿದ್ದರಿಂದ ಗ್ರಾಮಸ್ಥರು ನೆಮ್ಮದಿಯಾಗಿದ್ದಾರೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಬಿ.ರವೀಶ್ ಗೌಡ ತಿಳಿಸಿದರು.