ಆನೇಕಲ್: ತಾಲ್ಲೂಕಿನಲ್ಲಿ 93 ಸಾವಿರ ಖಾತೆದಾರರಿದ್ದು ಈ ಪೈಕಿ ಶೇ 3ರಷ್ಟು ಮಂದಿ ಸಹ ಬೆಳೆ ಸಮೀಕ್ಷೆಯಲ್ಲಿ ಭಾಗಿಯಾಗಿಲ್ಲ. ಹಾಗಾಗಿ ಬೆಳೆ ಸಮೀಕ್ಷೆಯ ವೇಗವನ್ನು ಹೆಚ್ಚಿಸಲು ಮತ್ತು ಪೂರ್ಣಪ್ರಮಾಣದಲ್ಲಿ ರೈತರು ಭಾಗವಹಿಸಲು ಅನುಕೂಲವಾಗುವಂತೆ ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯನಿರ್ವಹಿಸಬೇಕು ಎಂದು ತಹಶೀಲ್ದಾರ್ ಸಿ.ಮಹಾದೇವಯ್ಯ ತಿಳಿಸಿದರು.