<p><strong>ದೊಡ್ಡಬಳ್ಳಾಪುರ:</strong> ತಾಲ್ಲೂಕಿನಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿಪಿಎಸ್ ಆಧಾರಿತ ಮೊಬೈಲ್ ಆ್ಯಪ್ ಬಳಸಿ ನಡೆಸಲಾಗುತ್ತಿದೆ. ಸಮೀಕ್ಷೆ ಮೂಲಕ ಸಂಗ್ರಹಿಸಿದ ಬೆಳೆ ಮಾಹಿತಿಯನ್ನು ಮೇಲ್ವಿಚಾರಕರ ಮೂಲಕ ಅನುಮೋದನೆ ಮಾಡಿದ ನಂತರ ಈ ಮಾಹಿತಿಯನ್ನು ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನಗಳ ಖರೀದಿ, ಬೆಳೆ ವಿಮೆ ಯೋಜನೆ, ಬೆಳೆ ನಷ್ಟ ಪರಿಹಾರ ನೀಡುವ ಸಮಯದಲ್ಲಿ ಹಾಗೂ ಇತರೆ ಸೌಲಭ್ಯ ಪಡೆಯಲು ರೈತರಿಗೆ ಅಗತ್ಯ ಎಂದು ಕೃಷಿ ಇಲಾಖೆ ತಾಲ್ಲೂಕು ಸಹಾಯಕ ನಿರ್ದೇಶಕ ಪಿ.ರಾಘವೇಂದ್ರ ಹೇಳಿದ್ದಾರೆ.</p>.<p>ತಾಲ್ಲೂಕಿನ ಪ್ರತಿ ಗ್ರಾಮಗಳಿಗೆ ಖಾಸಗಿ ನಿವಾಸಿಗಳನ್ನು ಹಾಗೂ ಮೇಲ್ವಿಚಾರಕರನ್ನು ನೇಮಿಸಲಾಗಿದೆ. ರೈತರ ಜಮೀನುಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಆ್ಯಪ್ ಮೂಲಕ ಬೆಳೆಗಳ ಛಾಯಾಚಿತ್ರ ಸೆರೆಹಿಡಿದು ಸಮೀಕ್ಷೆ ಕೈಗೊಂಡಿದ್ದಾರೆ. ಇದುವರೆಗೂ ಶೇ 93.95 ಬೆಳೆ ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ಖಾಸಗಿ ನಿವಾಸಿಗಳು ಬೆಳೆ ಸಮೀಕ್ಷೆ ಆ್ಯಪ್ ಮೂಲಕ ಸೆರೆ ಹಿಡಿದ ಮಾಹಿತಿಯನ್ನು ರೈತರು ಬೆಳೆ ದರ್ಶಕ್ 2025-26 ಎಂಬ ಆ್ಯಪ್ನಲ್ಲಿ ಸರ್ವೆ ನಂಬರ್ ವಾರು ಪರಿಶೀಲಿಸಬಹುದು.</p>.<p>ಮಾಹಿತಿ ತಪ್ಪಾಗಿದ್ದಲ್ಲಿ ಆ್ಯಪ್ನಲ್ಲಿ ಅಕ್ಟೋಬರ್ 30ರ ಒಳಗೆ ಆಕ್ಷೇಪಣೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಆಯಾ ಗ್ರಾಮದ ಖಾಸಗಿ ನಿವಾಸಿ ಮೇಲ್ವಿಚಾರಕರು, ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong> ತಾಲ್ಲೂಕಿನಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿಪಿಎಸ್ ಆಧಾರಿತ ಮೊಬೈಲ್ ಆ್ಯಪ್ ಬಳಸಿ ನಡೆಸಲಾಗುತ್ತಿದೆ. ಸಮೀಕ್ಷೆ ಮೂಲಕ ಸಂಗ್ರಹಿಸಿದ ಬೆಳೆ ಮಾಹಿತಿಯನ್ನು ಮೇಲ್ವಿಚಾರಕರ ಮೂಲಕ ಅನುಮೋದನೆ ಮಾಡಿದ ನಂತರ ಈ ಮಾಹಿತಿಯನ್ನು ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನಗಳ ಖರೀದಿ, ಬೆಳೆ ವಿಮೆ ಯೋಜನೆ, ಬೆಳೆ ನಷ್ಟ ಪರಿಹಾರ ನೀಡುವ ಸಮಯದಲ್ಲಿ ಹಾಗೂ ಇತರೆ ಸೌಲಭ್ಯ ಪಡೆಯಲು ರೈತರಿಗೆ ಅಗತ್ಯ ಎಂದು ಕೃಷಿ ಇಲಾಖೆ ತಾಲ್ಲೂಕು ಸಹಾಯಕ ನಿರ್ದೇಶಕ ಪಿ.ರಾಘವೇಂದ್ರ ಹೇಳಿದ್ದಾರೆ.</p>.<p>ತಾಲ್ಲೂಕಿನ ಪ್ರತಿ ಗ್ರಾಮಗಳಿಗೆ ಖಾಸಗಿ ನಿವಾಸಿಗಳನ್ನು ಹಾಗೂ ಮೇಲ್ವಿಚಾರಕರನ್ನು ನೇಮಿಸಲಾಗಿದೆ. ರೈತರ ಜಮೀನುಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಆ್ಯಪ್ ಮೂಲಕ ಬೆಳೆಗಳ ಛಾಯಾಚಿತ್ರ ಸೆರೆಹಿಡಿದು ಸಮೀಕ್ಷೆ ಕೈಗೊಂಡಿದ್ದಾರೆ. ಇದುವರೆಗೂ ಶೇ 93.95 ಬೆಳೆ ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ಖಾಸಗಿ ನಿವಾಸಿಗಳು ಬೆಳೆ ಸಮೀಕ್ಷೆ ಆ್ಯಪ್ ಮೂಲಕ ಸೆರೆ ಹಿಡಿದ ಮಾಹಿತಿಯನ್ನು ರೈತರು ಬೆಳೆ ದರ್ಶಕ್ 2025-26 ಎಂಬ ಆ್ಯಪ್ನಲ್ಲಿ ಸರ್ವೆ ನಂಬರ್ ವಾರು ಪರಿಶೀಲಿಸಬಹುದು.</p>.<p>ಮಾಹಿತಿ ತಪ್ಪಾಗಿದ್ದಲ್ಲಿ ಆ್ಯಪ್ನಲ್ಲಿ ಅಕ್ಟೋಬರ್ 30ರ ಒಳಗೆ ಆಕ್ಷೇಪಣೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಆಯಾ ಗ್ರಾಮದ ಖಾಸಗಿ ನಿವಾಸಿ ಮೇಲ್ವಿಚಾರಕರು, ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>