‘ಗ್ರಾಮೀಣ ಭಾಗದಲ್ಲಿ ಪ್ರಚಲಿತ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸುವುದು ಸಂಘ ಸಂಸ್ಥೆಗಳ ಜವಾಬ್ದಾರಿ. ಈ ನಿಟ್ಟಿನಲ್ಲಿ ಬೃಂದಾವನ ಶಾಲೆಯು ಪರಿಸರ ಸಂರಕ್ಷಣೆ, ಗಿಡ ಮರಗಳನ್ನು ಬೆಳೆಸುವುದು, ಪ್ಲಾಸ್ಟಿಕ್ ಬಳಕೆಯ ನಿಷೇಧ, ಆರೋಗ್ಯ ಮತ್ತಿತರ ಅಂಶಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಗುಡ್ಡಗಾಡು ಓಟ ಆಯೋಜಿಸಲಾಗಿದೆ. 9 ಕಿ.ಮೀ. ಓಟದಲ್ಲಿ 1,400 ವಿದ್ಯಾರ್ಥಿಗಳು ಭಾಗಿಗಳಾಗಿದ್ದರು. ತಮ್ಮನಾಯಕನಹಳ್ಳಿ, ಇಂಡ್ಲವಾಡಿ, ಚಿಕ್ಕನಹಳ್ಳಿ, ನೊಸೇನೂರು, ಸಿದ್ಧನಪಾಳ್ಯ ಗ್ರಾಮಗಳಲ್ಲಿ ಓಟ ನಡೆಯಿತು. ಈ ಗ್ರಾಮದ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗಿದೆ’ ಎಂದರು.