<p><strong>ದೊಡ್ಡಬಳ್ಳಾಪುರ:</strong>ಕಸಬಾ ಹೋಬಳಿಯ ಮಲ್ಲಾತಹಳ್ಳಿಗೆ ಹೋಗುವ ರಸ್ತೆ ಹದಗೆಟ್ಟು ದಶಕಗಳೇ ಕಳೆದಿದೆ.</p>.<p>ಗ್ರಾಮ ಪಂಚಾಯಿತಿ ಮೊದಲುಗೊಂಡು ಜಿಲ್ಲಾಧಿಕಾರಿವರೆಗೂ ಹಲವಾರು ಬಾರಿ ಮನವಿ ಸಲ್ಲಿಸಿ ರಸ್ತೆ ದುರಸ್ತಿ ಮಾಡಿಕೊಡುವಂತೆ ಕೇಳಿಕೊಳ್ಳಲಾಗಿದೆ. ಆದರೆ, ಗ್ರಾಮಸ್ಥರ ಮನವಿಗೆ ಮಾತ್ರ ಸ್ಪಂದನೆ ಸಿಕ್ಕಿಲ್ಲ.</p>.<p>ದೊಡ್ಡಬಳ್ಳಾಪುರ- ಗೌರಿಬಿದನೂರು ಹೆದ್ದಾರಿ ಕಂಟನಕುಂಟೆ ಬಳಿಯಿಂದ ಮಲ್ಲಾತಹಳ್ಳಿಗೆ ಸುಮಾರು ಒಂದೂವರೆ ಕಿ.ಮೀ. ದೂರವಾಗುತ್ತದೆ. ಕಾಲ್ನಡಿಗೆಯಲ್ಲಿಯೇ ಗ್ರಾಮಕ್ಕೆ ಹೋಗಬೇಕು. 10 ವರ್ಷಗಳ ಹಿಂದೆ ಹಾಕಲಾಗಿದ್ದ ಜೆಲ್ಲಿ ಕಲ್ಲುಗಳು ಕಿತ್ತುಹೋಗಿ ರಸ್ತೆಯಲ್ಲಿ ಗುಂಡಿಗಳು ನಿರ್ಮಾಣವಾಗಿವೆ. ಮಳೆ ಬಂದಾಗ ಹಗಲಿನ ವೇಳೆಯಲ್ಲಿಯೇ ನಡೆದುಕೊಂಡು ಹೋಗಲು ಸಂಕಷ್ಟಪಡಬೇಕಿದೆ.</p>.<p>ಇನ್ನು ರಾತ್ರಿ ವೇಳೆಯಲ್ಲಿ ನಡೆದುಕೊಂಡು ಹೋಗುವವರು ಕೆಸರಿನಲ್ಲಿಯೇ ಹೋಗಬೇಕಾದ ಅನಿವಾರ್ಯತೆ ಉಂಟಾಗಿದೆ. ದ್ವಿಚಕ್ರವಾಹನಗಳು ಇರಲಿ ಕನಿಷ್ಠ ನಡೆದುಕೊಂಡು ಹೋಗುವಂತಹ ರಸ್ತೆಯನ್ನಾದರೂ ನಿರ್ಮಿಸಿಕೊಡಲು ಮನವಿ.<br />-<strong><em>ಚಂದ್ರಶೇಖರ್,ಮಲ್ಲಾತಹಳ್ಳಿ.</em></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong>ಕಸಬಾ ಹೋಬಳಿಯ ಮಲ್ಲಾತಹಳ್ಳಿಗೆ ಹೋಗುವ ರಸ್ತೆ ಹದಗೆಟ್ಟು ದಶಕಗಳೇ ಕಳೆದಿದೆ.</p>.<p>ಗ್ರಾಮ ಪಂಚಾಯಿತಿ ಮೊದಲುಗೊಂಡು ಜಿಲ್ಲಾಧಿಕಾರಿವರೆಗೂ ಹಲವಾರು ಬಾರಿ ಮನವಿ ಸಲ್ಲಿಸಿ ರಸ್ತೆ ದುರಸ್ತಿ ಮಾಡಿಕೊಡುವಂತೆ ಕೇಳಿಕೊಳ್ಳಲಾಗಿದೆ. ಆದರೆ, ಗ್ರಾಮಸ್ಥರ ಮನವಿಗೆ ಮಾತ್ರ ಸ್ಪಂದನೆ ಸಿಕ್ಕಿಲ್ಲ.</p>.<p>ದೊಡ್ಡಬಳ್ಳಾಪುರ- ಗೌರಿಬಿದನೂರು ಹೆದ್ದಾರಿ ಕಂಟನಕುಂಟೆ ಬಳಿಯಿಂದ ಮಲ್ಲಾತಹಳ್ಳಿಗೆ ಸುಮಾರು ಒಂದೂವರೆ ಕಿ.ಮೀ. ದೂರವಾಗುತ್ತದೆ. ಕಾಲ್ನಡಿಗೆಯಲ್ಲಿಯೇ ಗ್ರಾಮಕ್ಕೆ ಹೋಗಬೇಕು. 10 ವರ್ಷಗಳ ಹಿಂದೆ ಹಾಕಲಾಗಿದ್ದ ಜೆಲ್ಲಿ ಕಲ್ಲುಗಳು ಕಿತ್ತುಹೋಗಿ ರಸ್ತೆಯಲ್ಲಿ ಗುಂಡಿಗಳು ನಿರ್ಮಾಣವಾಗಿವೆ. ಮಳೆ ಬಂದಾಗ ಹಗಲಿನ ವೇಳೆಯಲ್ಲಿಯೇ ನಡೆದುಕೊಂಡು ಹೋಗಲು ಸಂಕಷ್ಟಪಡಬೇಕಿದೆ.</p>.<p>ಇನ್ನು ರಾತ್ರಿ ವೇಳೆಯಲ್ಲಿ ನಡೆದುಕೊಂಡು ಹೋಗುವವರು ಕೆಸರಿನಲ್ಲಿಯೇ ಹೋಗಬೇಕಾದ ಅನಿವಾರ್ಯತೆ ಉಂಟಾಗಿದೆ. ದ್ವಿಚಕ್ರವಾಹನಗಳು ಇರಲಿ ಕನಿಷ್ಠ ನಡೆದುಕೊಂಡು ಹೋಗುವಂತಹ ರಸ್ತೆಯನ್ನಾದರೂ ನಿರ್ಮಿಸಿಕೊಡಲು ಮನವಿ.<br />-<strong><em>ಚಂದ್ರಶೇಖರ್,ಮಲ್ಲಾತಹಳ್ಳಿ.</em></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>