<p><strong>ದೊಡ್ಡಬಳ್ಳಾಪುರ:</strong>ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನಲ್ಲಿ ಆಯೋಜಿಸಿರುವ ಹಾಲುಮತ ಸಂಸ್ಕೃತಿ ವೈಭವದ‘ಸಿದ್ದಶ್ರೀ’ ಪ್ರಶಸ್ತಿಗೆ ಪವಾಡ ಬಯಲು ಕಾರ್ಯಕ್ರಮ ನಡೆಸುವ ಮೂಲಕ ಮೂಢನಂಬಿಕೆ ವಿರುದ್ಧ ಅರಿವು ಮೂಡಿಸುತ್ತಿರುವ ಹುಲಿಕಲ್ ನಟರಾಜ್ ಆಯ್ಕೆಯಾಗಿದ್ದಾರೆ.</p>.<p>ಸಂಸ್ಕೃತಿ ವೈಭವದಲ್ಲಿ ಭಾಗವಹಿಸುವಂತೆ ರಾಜ್ಯ ಕುರುಬರ ಸಂಘದ ನಿರ್ದೇಶಕ ಹಾಗೂ ಕನಕ ಗುರುಪೀಠದ ಧರ್ಮದರ್ಶಿ ಕೆ.ಎಂ. ಕೃಷ್ಣಮೂರ್ತಿ ಅವರು ಸೋಮವಾರ ಹುಲಿಕಲ್ ನಟರಾಜ್ ಅವರ ಮನೆಗೆ ತೆರಳಿ ಅಧಿಕೃತ ಆಹ್ವಾನ ನೀಡಿದರು.</p>.<p>ಈ ಬಗ್ಗೆ ಮಾಹಿತಿ ನೀಡಿದ ಕೃಷ್ಣಮೂರ್ತಿ, ‘ನಮ್ಮ ತಾಲ್ಲೂಕಿನವರಿಗೆ ಈ ಬಾರಿ ಪ್ರಶಸ್ತಿ ಬಂದಿರುವುದು ಸಂತಸ ತಂದಿದೆ. ಸಾಧಕರನ್ನು ಗುರುತಿಸಿ ಗೌರವದಿಂದ ನಡೆಸಿಕೊಳ್ಳುವುದು ಮಠದ ಸಂಸ್ಕೃತಿಯಾಗಿದೆ. ಜ. 13ರಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಸ್ವೀಕರಿಸುವಂತೆ ಆಹ್ವಾನ ನೀಡಲಾಗಿದೆ’ ಎಂದರು.</p>.<p>ಕನ್ನಡ ಪಕ್ಷದ ಪ್ರಧಾನ ಕಾರ್ಯದರ್ಶಿ ಡಿ.ಪಿ. ಆಂಜನೇಯ, ಪರಮೇಶ್, ಪ್ರಾಂಶುಪಾಲ ಎಂ.ಸಿ. ಮಂಜುನಾಥ್, ಶಿಕ್ಷಕ ಗಿರಿರಂಗಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong>ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನಲ್ಲಿ ಆಯೋಜಿಸಿರುವ ಹಾಲುಮತ ಸಂಸ್ಕೃತಿ ವೈಭವದ‘ಸಿದ್ದಶ್ರೀ’ ಪ್ರಶಸ್ತಿಗೆ ಪವಾಡ ಬಯಲು ಕಾರ್ಯಕ್ರಮ ನಡೆಸುವ ಮೂಲಕ ಮೂಢನಂಬಿಕೆ ವಿರುದ್ಧ ಅರಿವು ಮೂಡಿಸುತ್ತಿರುವ ಹುಲಿಕಲ್ ನಟರಾಜ್ ಆಯ್ಕೆಯಾಗಿದ್ದಾರೆ.</p>.<p>ಸಂಸ್ಕೃತಿ ವೈಭವದಲ್ಲಿ ಭಾಗವಹಿಸುವಂತೆ ರಾಜ್ಯ ಕುರುಬರ ಸಂಘದ ನಿರ್ದೇಶಕ ಹಾಗೂ ಕನಕ ಗುರುಪೀಠದ ಧರ್ಮದರ್ಶಿ ಕೆ.ಎಂ. ಕೃಷ್ಣಮೂರ್ತಿ ಅವರು ಸೋಮವಾರ ಹುಲಿಕಲ್ ನಟರಾಜ್ ಅವರ ಮನೆಗೆ ತೆರಳಿ ಅಧಿಕೃತ ಆಹ್ವಾನ ನೀಡಿದರು.</p>.<p>ಈ ಬಗ್ಗೆ ಮಾಹಿತಿ ನೀಡಿದ ಕೃಷ್ಣಮೂರ್ತಿ, ‘ನಮ್ಮ ತಾಲ್ಲೂಕಿನವರಿಗೆ ಈ ಬಾರಿ ಪ್ರಶಸ್ತಿ ಬಂದಿರುವುದು ಸಂತಸ ತಂದಿದೆ. ಸಾಧಕರನ್ನು ಗುರುತಿಸಿ ಗೌರವದಿಂದ ನಡೆಸಿಕೊಳ್ಳುವುದು ಮಠದ ಸಂಸ್ಕೃತಿಯಾಗಿದೆ. ಜ. 13ರಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಸ್ವೀಕರಿಸುವಂತೆ ಆಹ್ವಾನ ನೀಡಲಾಗಿದೆ’ ಎಂದರು.</p>.<p>ಕನ್ನಡ ಪಕ್ಷದ ಪ್ರಧಾನ ಕಾರ್ಯದರ್ಶಿ ಡಿ.ಪಿ. ಆಂಜನೇಯ, ಪರಮೇಶ್, ಪ್ರಾಂಶುಪಾಲ ಎಂ.ಸಿ. ಮಂಜುನಾಥ್, ಶಿಕ್ಷಕ ಗಿರಿರಂಗಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>