ಬೆಂಗಳೂರಿನಿಂದ ಬುಧವರ ನೇರವಾಗಿ ಇಲ್ಲಿಗೆ ಬಂದ ಕಾಂಗ್ರೆಸ್ ‘ಜನಧ್ವನಿ’ ಜಾಥಾದಲ್ಲಿ ಮಾತನಾಡಿದ ಅವರು, ಐದು ವರ್ಷದಲ್ಲಿ 10 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಸುವ ಬದಲು ಜನರ ಉದ್ಯೋಗಳನ್ನು ಕಿತ್ತುಕೊಂಡಿದೆ. ಗುಡಿ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿದ್ದ ಲಕ್ಷಾಂತರ ಕುಶಲಕರ್ಮಿಗಳು, ಜನರು ನೋಟು ರದ್ದತಿಯ ನಂತರ ಕೆಲಸ ಕಳೆದುಕೊಂಡಿದ್ದಾರೆ ಎಂದರು.