<p><strong>ದೊಡ್ಡಬಳ್ಳಾಪುರ:</strong>ತನ್ನ ಖಾತೆಯಲ್ಲಿರುವ ಹಣ ನೀಡಲು ನಿರಾಕರಿಸಿದ ಬ್ಯಾಂಕ್ ಸಿಬ್ಬಂದಿಯ ಮೇಲೆ ಗ್ರಾಹಕನೊಬ್ಬ ಮಚ್ಚಿನಿಂದ ಹಲ್ಲೆ ನಡೆಸಲು ಯತ್ನಿಸಿದ ಘಟನೆ ತಾಲ್ಲೂಕಿನ ತೂಬಗೆರೆಯಲ್ಲಿ ಸೋಮವಾರ ನಡೆದಿದೆ.</p>.<p>ಗ್ರಾಮದಲ್ಲಿರುವಕಾರ್ಪೊರೇಷನ್ ಬ್ಯಾಂಕ್ ಶಾಖೆಯಲ್ಲಿ ಉಳಿತಾಯ ಖಾತೆ ಹೊಂದಿರುವ ದುರ್ಗೇನಹಳ್ಳಿ ಗ್ರಾಮದ ಕುಮಾರ್,ತನ್ನ ಖಾತೆಯಲ್ಲಿದ್ದ ಹಣ ನೀಡಲುಸಿಬ್ಬಂದಿ ನಿರಾಕರಿಸಿದರೆಂದು ಕೊಪಗೊಂಡು ಮಚ್ಚಿನಿಂದ ಹಲ್ಲೆ ನಡೆಸಲು ಯತ್ನಿಸಿದ. ತಕ್ಷಣಎಚ್ಚೆತ್ತ ಸಿಬ್ಬಂದಿ ಮಚ್ಚಿನ ಏಟಿನಿಂದ ಪಾರಾದರು. ಈ ದೃಶ್ಯಾವಳಿ ಬ್ಯಾಂಕಿನಲ್ಲಿರುವ ಸಿಸಿ ಟಿವಿಯಲ್ಲಿ ರೆಕಾರ್ಡ್ ಅಗಿದೆ.</p>.<p>ತನ್ನ ಖಾತೆಯಲ್ಲಿರುವ ₹ 240 ನೀಡಬೇಕೆಂದು ಬ್ಯಾಂಕ್ ಸಿಬ್ಬಂದಿಯನ್ನು ಕೇಳಿದ. ಇದಕ್ಕೆ ಪ್ರತಿಕ್ರಿಯಿಸಿದ ಸಿಬ್ಬಂದಿ ಕಳೆದೊಂದು ವರ್ಷದಿಂದ ಬ್ಯಾಂಕಿನಲ್ಲಿ ವ್ಯವಹಾರ ನಡೆಸದಿರುವ ಕಾರಣ ಖಾತೆ ಸ್ಥಗಿತವಾಗಿದೆ ಎಂದು ತಿಳಿಸಿದರು. ಕೋಪಗೊಂಡ ಆತ ಮಚ್ಚಿನಿಂದ ಹಲ್ಲೆ ಮಾಡಲು ಯತ್ನಿಸಿದ.</p>.<p>ಈ ವೇಳೆ ಶಾಖೆಯಲ್ಲಿದ್ದ ಗ್ರಾಹಕರು ಕುಮಾರ್ನನ್ನು ಹಿಡಿದು ಮಚ್ಚುಕಸಿದುಕೊಂಡು ಥಳಿಸಿದರು. ಬಳಿಕ ಪೊಲೀಸರಿಗೆ ಒಪ್ಪಿಸಿದರು.ವ್ಯವಸ್ಥಾಪಕ ಸುರೇಶ್ ನೀಡಿರುವ ದೂರಿನ ಮೇರೆಗೆ ಹಲ್ಲೆಗೆ ಯತ್ನಿಸಿದ ಆರೋಪಿಯನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong>ತನ್ನ ಖಾತೆಯಲ್ಲಿರುವ ಹಣ ನೀಡಲು ನಿರಾಕರಿಸಿದ ಬ್ಯಾಂಕ್ ಸಿಬ್ಬಂದಿಯ ಮೇಲೆ ಗ್ರಾಹಕನೊಬ್ಬ ಮಚ್ಚಿನಿಂದ ಹಲ್ಲೆ ನಡೆಸಲು ಯತ್ನಿಸಿದ ಘಟನೆ ತಾಲ್ಲೂಕಿನ ತೂಬಗೆರೆಯಲ್ಲಿ ಸೋಮವಾರ ನಡೆದಿದೆ.</p>.<p>ಗ್ರಾಮದಲ್ಲಿರುವಕಾರ್ಪೊರೇಷನ್ ಬ್ಯಾಂಕ್ ಶಾಖೆಯಲ್ಲಿ ಉಳಿತಾಯ ಖಾತೆ ಹೊಂದಿರುವ ದುರ್ಗೇನಹಳ್ಳಿ ಗ್ರಾಮದ ಕುಮಾರ್,ತನ್ನ ಖಾತೆಯಲ್ಲಿದ್ದ ಹಣ ನೀಡಲುಸಿಬ್ಬಂದಿ ನಿರಾಕರಿಸಿದರೆಂದು ಕೊಪಗೊಂಡು ಮಚ್ಚಿನಿಂದ ಹಲ್ಲೆ ನಡೆಸಲು ಯತ್ನಿಸಿದ. ತಕ್ಷಣಎಚ್ಚೆತ್ತ ಸಿಬ್ಬಂದಿ ಮಚ್ಚಿನ ಏಟಿನಿಂದ ಪಾರಾದರು. ಈ ದೃಶ್ಯಾವಳಿ ಬ್ಯಾಂಕಿನಲ್ಲಿರುವ ಸಿಸಿ ಟಿವಿಯಲ್ಲಿ ರೆಕಾರ್ಡ್ ಅಗಿದೆ.</p>.<p>ತನ್ನ ಖಾತೆಯಲ್ಲಿರುವ ₹ 240 ನೀಡಬೇಕೆಂದು ಬ್ಯಾಂಕ್ ಸಿಬ್ಬಂದಿಯನ್ನು ಕೇಳಿದ. ಇದಕ್ಕೆ ಪ್ರತಿಕ್ರಿಯಿಸಿದ ಸಿಬ್ಬಂದಿ ಕಳೆದೊಂದು ವರ್ಷದಿಂದ ಬ್ಯಾಂಕಿನಲ್ಲಿ ವ್ಯವಹಾರ ನಡೆಸದಿರುವ ಕಾರಣ ಖಾತೆ ಸ್ಥಗಿತವಾಗಿದೆ ಎಂದು ತಿಳಿಸಿದರು. ಕೋಪಗೊಂಡ ಆತ ಮಚ್ಚಿನಿಂದ ಹಲ್ಲೆ ಮಾಡಲು ಯತ್ನಿಸಿದ.</p>.<p>ಈ ವೇಳೆ ಶಾಖೆಯಲ್ಲಿದ್ದ ಗ್ರಾಹಕರು ಕುಮಾರ್ನನ್ನು ಹಿಡಿದು ಮಚ್ಚುಕಸಿದುಕೊಂಡು ಥಳಿಸಿದರು. ಬಳಿಕ ಪೊಲೀಸರಿಗೆ ಒಪ್ಪಿಸಿದರು.ವ್ಯವಸ್ಥಾಪಕ ಸುರೇಶ್ ನೀಡಿರುವ ದೂರಿನ ಮೇರೆಗೆ ಹಲ್ಲೆಗೆ ಯತ್ನಿಸಿದ ಆರೋಪಿಯನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>