<p><strong>ಆನೇಕಲ್:</strong>ತಮಿಳುನಾಡಿನ ಹೊಸೂರಿನ ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಎಂಟು ಮಂದಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.</p>.<p>ಗಾಯಗೊಂಡವರನ್ನು ಹೊಸೂರಿನ ರಾಮನಗರದ ನಿವಾಸಿಗಳಾದ ಭೀಮ್ಸಿಂಗ್, ಅರವಿಂದ್, ರೂಬಿ, ಚಂದ್ರಾದೇವಿ, ಹೃತಿಕ್, ಸಬೀರ್ ಮತ್ತು ಸಾಧಿಕ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕೃಷ್ಣಗಿರಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.</p>.<p>ಉತ್ತರ ಪ್ರದೇಶ ಮೂಲದ ಈ ಕುಟುಂಬ ಪಾನಿಪುರಿ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿತ್ತು. ಹೊಸೂರಿನ ರಾಮನಗರದಲ್ಲಿ ವಾಸವಾಗಿದ್ದ ಅವರು ಬೆಳಿಗ್ಗೆ ಅಡುಗೆ ಮಾಡಲು ಗ್ಯಾಸ್ ಸ್ಟೌ ಹೊತ್ತಿಸಿದಾಗ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದವರು ಗಾಯಗೊಂಡಿದ್ದಾರೆ.</p>.<p>ಸಿಲಿಂಡರ್ ಸ್ಫೋಟಕ್ಕೆ ಮನೆಯಲ್ಲಿದ್ದ ವಸ್ತುಗಳು ಚಿಲ್ಲಾಪಿಲ್ಲಿಯಾಗಿದ್ದು ಮನೆಯ ಚಾವಣಿ ಕಿತ್ತು ಹೋಗಿದೆ. ಮನೆಯಲ್ಲಿನ ಎಲೆಕ್ಟ್ರಿಕ್ ವಸ್ತುಗಳು ಸುಟ್ಟು ಭಸ್ಮವಾಗಿವೆ.</p>.<p>ಹೊಸೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್:</strong>ತಮಿಳುನಾಡಿನ ಹೊಸೂರಿನ ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಎಂಟು ಮಂದಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.</p>.<p>ಗಾಯಗೊಂಡವರನ್ನು ಹೊಸೂರಿನ ರಾಮನಗರದ ನಿವಾಸಿಗಳಾದ ಭೀಮ್ಸಿಂಗ್, ಅರವಿಂದ್, ರೂಬಿ, ಚಂದ್ರಾದೇವಿ, ಹೃತಿಕ್, ಸಬೀರ್ ಮತ್ತು ಸಾಧಿಕ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕೃಷ್ಣಗಿರಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.</p>.<p>ಉತ್ತರ ಪ್ರದೇಶ ಮೂಲದ ಈ ಕುಟುಂಬ ಪಾನಿಪುರಿ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿತ್ತು. ಹೊಸೂರಿನ ರಾಮನಗರದಲ್ಲಿ ವಾಸವಾಗಿದ್ದ ಅವರು ಬೆಳಿಗ್ಗೆ ಅಡುಗೆ ಮಾಡಲು ಗ್ಯಾಸ್ ಸ್ಟೌ ಹೊತ್ತಿಸಿದಾಗ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದವರು ಗಾಯಗೊಂಡಿದ್ದಾರೆ.</p>.<p>ಸಿಲಿಂಡರ್ ಸ್ಫೋಟಕ್ಕೆ ಮನೆಯಲ್ಲಿದ್ದ ವಸ್ತುಗಳು ಚಿಲ್ಲಾಪಿಲ್ಲಿಯಾಗಿದ್ದು ಮನೆಯ ಚಾವಣಿ ಕಿತ್ತು ಹೋಗಿದೆ. ಮನೆಯಲ್ಲಿನ ಎಲೆಕ್ಟ್ರಿಕ್ ವಸ್ತುಗಳು ಸುಟ್ಟು ಭಸ್ಮವಾಗಿವೆ.</p>.<p>ಹೊಸೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>