ಈ ವಿಷಯ ತಿಳಿದ ನೆಲಮಂಗಲ ತಹಶೀಲ್ದಾರ್ ಶ್ರೀನಿವಾಸಯ್ಯ ಅವರು ಮುಖಂಡರು ಹಾಗೂ ಸಾರ್ವಜನಿಕರ ಜೊತೆ ಮಾತನಾಡಿ ನಾಮಪತ್ರ ಸಲ್ಲಿಸುವಂತೆ ತಿಳಿಸಿದ್ದರು. ಆದರೆ, ಪಟ್ಟಣದ ಜನ ಇದಕ್ಕೂ ಸೊಪ್ಪು ಹಾಕಲಿಲ್ಲ.ಗುರುವಾರ ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಗ್ರಾಮಕ್ಕೆ ಬಂದು ನಾಮಪತ್ರ ಸಲ್ಲಿಸುವಂತೆ ಮನವಿ ಮಾಡಿದರು. ಇದಕ್ಕೂ ಜನರು ಸ್ಪಂದಿಸಲಿಲ್ಲ.