ಹತ್ಯೆಗೆ ಒಳಗಾದ ಯುವಕ ಮಂಜುನಾಥ್ (22) ಎಂಬಾತನ ಮನೆಯಲ್ಲಿ ತಾಯಿ, ಅಕ್ಕ ಮಾತ್ರ ವಾಸವಾಗಿದ್ದರು. ದಾಬಸ್ಪೇಟೆ-ದೊಡ್ಡಬಳ್ಳಾಪುರ ಹೆದ್ದಾರಿ ಪಕ್ಕದ ತೋಟದಲ್ಲಿನ ಮನೆಗೆ ರಾತ್ರಿ ಬಂದ ದುಷ್ಕರ್ಮಿಗಳ ತಂಡ ನೀರು ಕೇಳುವ ನೆಪದಲ್ಲಿ ಮನೆ ಬಾಗಿಲು ತೆಗೆಸಿ ರಾಡು, ಮಾರಕಾಸ್ತ್ರಗಳಿಂದ ಮಂಜುನಾಥ್ ಮೇಲೆ ಹಲ್ಲೆ ನಡೆಸಿದೆ. ಮಂಜುನಾಥ್ ಗಂಭೀರವಾಗಿ ಗಾಯಗೊಳಿಸಿದ್ದಾರೆ. ಚಿಕಿತ್ಸೆಗೆ ತುಮಕೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯದಲ್ಲೆ ಮಂಜುನಾಥ್ ಮೃತಪಟ್ಟಿರುವುದಾಗಿ ಸಂಬಂಧಿಗಳು ಮಾಹಿತಿ ನೀಡಿದ್ದಾರೆ.