<p><strong>ದೊಡ್ಡಬಳ್ಳಾಪುರ: </strong>‘ಹೈನುಗಾರಿಕೆ ರೈತರಿಗೆ ಆರ್ಥಿಕ ಸ್ವಾವಲಂಬನೆ ನೀಡಲಿದೆ’ ಎಂದು ಕೆಎಂಎಫ್ ನಿರ್ದೇಶಕ ಬಿ.ಸಿ. ಆನಂದ್ಕುಮಾರ್ ಹೇಳಿದರು.</p>.<p>ತಾಲ್ಲೂಕಿನ ಲಗುಮೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಕೃಷಿ ಜತೆಗೆ ಹೈನುಗಾರಿಕೆ ಕೂಡ ರೈತರ ಮುಖ್ಯ ಕಸುಬಾಗಿದೆ. ಹೈನುಗಾರಿಕೆಯಿಂದ ರೈತರು ಆರ್ಥಿಕ ಸ್ವಾವಲಂಬನೆ ಸಿಗಲಿದ್ದು ಇಡೀ ಕುಟುಂಬಕ್ಕೆ ಆರ್ಥಿಕ ಭದ್ರತೆ ತಂದುಕೊಡಲಿದೆ. ರೈತರು ಹೈನುಗಾರಿಕೆಯಲ್ಲಿ ಮತ್ತಷ್ಟು ಉತ್ಸಾಹ ತೋರಬೇಕು ಎಂದರು.</p>.<p>ಲಗುಮೇನಹಳ್ಳಿ ಹಾಲು ಉತ್ಪಾದಕರ ಸಂಘ ತೂಬಗೆರೆ ಹೋಬಳಿಯಲ್ಲಿಯೇ ಗುಣಮಟ್ಟದಲ್ಲಿ ಉತ್ತಮ ಹೆಸರು ಪಡೆದಿದೆ ಎಂದು ತಿಳಿಸಿದರು.</p>.<p>2019-20ನೇ ಸಾಲಿನಲ್ಲಿ ಶೇಕಡ 11.2ರಷ್ಟು ವ್ಯಾಪಾರ ಲಾಭ ಹೊಂದಿದೆ. ಶೇಕಡ 7.8ರಷ್ಟು ನಿವ್ವಳ ಲಾಭ ಹೊಂದಿದ್ದು ಹೋಬಳಿಗೆ ಮಾದರಿಯಾಗಿದೆ ಎಂದರು.</p>.<p>ಸಭೆಯಲ್ಲಿ ಬಮೂಲ್ ವಿಸ್ತರಣಾಧಿಕಾರಿ ಎಂ. ಅಶ್ವತ್ಥಪ್ಪ, ಸಂಘದ ಅಧ್ಯಕ್ಷ ಸಿದ್ದರಾಜು, ಕಾರ್ಯದರ್ಶಿ ಶಿವಶಂಕರ್ ಹಾಗೂ ಸಂಘದ ನಿರ್ದೇಶಕರು, ರೈತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>‘ಹೈನುಗಾರಿಕೆ ರೈತರಿಗೆ ಆರ್ಥಿಕ ಸ್ವಾವಲಂಬನೆ ನೀಡಲಿದೆ’ ಎಂದು ಕೆಎಂಎಫ್ ನಿರ್ದೇಶಕ ಬಿ.ಸಿ. ಆನಂದ್ಕುಮಾರ್ ಹೇಳಿದರು.</p>.<p>ತಾಲ್ಲೂಕಿನ ಲಗುಮೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಕೃಷಿ ಜತೆಗೆ ಹೈನುಗಾರಿಕೆ ಕೂಡ ರೈತರ ಮುಖ್ಯ ಕಸುಬಾಗಿದೆ. ಹೈನುಗಾರಿಕೆಯಿಂದ ರೈತರು ಆರ್ಥಿಕ ಸ್ವಾವಲಂಬನೆ ಸಿಗಲಿದ್ದು ಇಡೀ ಕುಟುಂಬಕ್ಕೆ ಆರ್ಥಿಕ ಭದ್ರತೆ ತಂದುಕೊಡಲಿದೆ. ರೈತರು ಹೈನುಗಾರಿಕೆಯಲ್ಲಿ ಮತ್ತಷ್ಟು ಉತ್ಸಾಹ ತೋರಬೇಕು ಎಂದರು.</p>.<p>ಲಗುಮೇನಹಳ್ಳಿ ಹಾಲು ಉತ್ಪಾದಕರ ಸಂಘ ತೂಬಗೆರೆ ಹೋಬಳಿಯಲ್ಲಿಯೇ ಗುಣಮಟ್ಟದಲ್ಲಿ ಉತ್ತಮ ಹೆಸರು ಪಡೆದಿದೆ ಎಂದು ತಿಳಿಸಿದರು.</p>.<p>2019-20ನೇ ಸಾಲಿನಲ್ಲಿ ಶೇಕಡ 11.2ರಷ್ಟು ವ್ಯಾಪಾರ ಲಾಭ ಹೊಂದಿದೆ. ಶೇಕಡ 7.8ರಷ್ಟು ನಿವ್ವಳ ಲಾಭ ಹೊಂದಿದ್ದು ಹೋಬಳಿಗೆ ಮಾದರಿಯಾಗಿದೆ ಎಂದರು.</p>.<p>ಸಭೆಯಲ್ಲಿ ಬಮೂಲ್ ವಿಸ್ತರಣಾಧಿಕಾರಿ ಎಂ. ಅಶ್ವತ್ಥಪ್ಪ, ಸಂಘದ ಅಧ್ಯಕ್ಷ ಸಿದ್ದರಾಜು, ಕಾರ್ಯದರ್ಶಿ ಶಿವಶಂಕರ್ ಹಾಗೂ ಸಂಘದ ನಿರ್ದೇಶಕರು, ರೈತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>