<p><strong>ಸೂಲಿಬೆಲೆ(ಹೊಸಕೋಟೆ):</strong> ಹೋಬಳಿಯ ಗಿಡ್ಡಪ್ಪನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಒಳಗೆರೆಪುರ ಗ್ರಾಮದ ಸರ್ವೆ ನಂ.41 ರಲ್ಲಿ ಅತ್ತಿಬೆಲೆ ಗ್ರಾಮದ ದಲಿತ ಸಮುದಾಯಕ್ಕೆ ಮೀಸಲು ಇಟ್ಟಿರುವ ಜಾಗವನ್ನು ನಿವೇಶನವಾಗಿ ಮಂಜೂರು ಮಾಡಿ ವಿತರಣೆ ಮಾಡಬೇಕಾಗಿ ಅಂಬೇಡ್ಕರ್ ಸೇವಾ ಸಮಿತಿಯ ಆಗ್ರಹಿಸಿದೆ.</p>.<p>ತಾಲ್ಲೂಕಿನ ಸೂಲಿಬೆಲೆ ಹೋಬಳಿ ಒಳಗೆರೆಪುರ ಗ್ರಾಮದ ಸರ್ವೆ ನಂ. 41 ರಲ್ಲಿ 1 ಎಕರೆ 5 ಗುಂಟೆ ಮೀಸಲು ಜಾಗವನ್ನು ಅತ್ತಿಬೆಲೆ ಗ್ರಾಮದ ದಲಿತರಿಗಾಗಿ ನಿವೇಶನ ಹಂಚಿಕೆ ಮಾಡಲು 2002ರಲ್ಲಿ ತಹಶೀಲ್ದಾರ್ ಮತ್ತು ತಾಲ್ಲೂಕು ಪಂಚಾಯಿತಿಯಿಂದ ಮಂಜೂರು ಮಾಡಲಾಗಿತ್ತು. ಆದರೆ ಇದುವರೆವಿಗೂ ಹಂಚಿಕೆ ಮಾಡಿಲ್ಲ. ಇತ್ತೀಚೆಗೆ ಈ ಜಾಗವನ್ನು ಕೆಲವು ಬಲಿಷ್ಟರು ಒತ್ತುವರಿ ಮಾಡಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಹಾಗಾಗಿ ಕೂಡಲೇ ದಲಿತರಿಗೆ ಹಂಚಿಕೆ ಮಾಡಬೇಕೆಂದು ಸಮಿತಿ ಒತ್ತಾಯಿಸಿದೆ.</p>.<p>ಈ ಸಮಸ್ಯೆ ಬಗೆಹರಿಸದಿದ್ದರೆ ತಾಲ್ಲೂಕಿನ ದಲಿತ ಸಂಘಟನೆಗಳ ಸಹಯೋಗದಲ್ಲಿ ಆಹೋರಾತ್ರಿ ಪ್ರತಿಭಟನೆ ಆರಂಭಿಸಲಾಗುವುದು ಎಂದು ಸಮಿತಿ ಎಚ್ಚರಿಸಿದೆ.</p>.<p>‘ನ್ಯಾಯಯುತವಾಗಿ ನಾವು ಬೇಡಿಕೆ ಇಟ್ಟಿದ್ದೆವೆ ದಲಿತರಿಗೆ ಸೇರಬೇಕಾದ ನಿವೇಶನಗಳನ್ನು ಶೀಘ್ರವಾಗಿ ವಿತರಣೆ ಮಾಡಿ ಅನ್ಯಾಯ ಸರಿಪಡಿಸಬೇಕು ಮತ್ತು ಒತ್ತುವರಿ ತೆರವು ಮಾಡಬೇ’ ಎಂದು ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷ ಸಂದೇಶ್ ಆಗ್ರಹಿಸಿದ್ದಾರೆ.</p>.<p>ಅತ್ತಿಬೆಲೆ ಗ್ರಾಮ ಪಂಚಾಯಿತಿ ಸದಸ್ಯ <strong>ಮುನಿಯಲ್ಲಪ್ಪ</strong><strong>, </strong> ಮುನಿವೆಂಕಟಪ್ಪ, ಚಿನ್ನಪ್ಪ, ಬಾಬು, ಮಧು, ಗಂಗಾಧರ್, ಮೋಹನ್, ರವಿಕಿರಣ್, ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೂಲಿಬೆಲೆ(ಹೊಸಕೋಟೆ):</strong> ಹೋಬಳಿಯ ಗಿಡ್ಡಪ್ಪನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಒಳಗೆರೆಪುರ ಗ್ರಾಮದ ಸರ್ವೆ ನಂ.41 ರಲ್ಲಿ ಅತ್ತಿಬೆಲೆ ಗ್ರಾಮದ ದಲಿತ ಸಮುದಾಯಕ್ಕೆ ಮೀಸಲು ಇಟ್ಟಿರುವ ಜಾಗವನ್ನು ನಿವೇಶನವಾಗಿ ಮಂಜೂರು ಮಾಡಿ ವಿತರಣೆ ಮಾಡಬೇಕಾಗಿ ಅಂಬೇಡ್ಕರ್ ಸೇವಾ ಸಮಿತಿಯ ಆಗ್ರಹಿಸಿದೆ.</p>.<p>ತಾಲ್ಲೂಕಿನ ಸೂಲಿಬೆಲೆ ಹೋಬಳಿ ಒಳಗೆರೆಪುರ ಗ್ರಾಮದ ಸರ್ವೆ ನಂ. 41 ರಲ್ಲಿ 1 ಎಕರೆ 5 ಗುಂಟೆ ಮೀಸಲು ಜಾಗವನ್ನು ಅತ್ತಿಬೆಲೆ ಗ್ರಾಮದ ದಲಿತರಿಗಾಗಿ ನಿವೇಶನ ಹಂಚಿಕೆ ಮಾಡಲು 2002ರಲ್ಲಿ ತಹಶೀಲ್ದಾರ್ ಮತ್ತು ತಾಲ್ಲೂಕು ಪಂಚಾಯಿತಿಯಿಂದ ಮಂಜೂರು ಮಾಡಲಾಗಿತ್ತು. ಆದರೆ ಇದುವರೆವಿಗೂ ಹಂಚಿಕೆ ಮಾಡಿಲ್ಲ. ಇತ್ತೀಚೆಗೆ ಈ ಜಾಗವನ್ನು ಕೆಲವು ಬಲಿಷ್ಟರು ಒತ್ತುವರಿ ಮಾಡಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಹಾಗಾಗಿ ಕೂಡಲೇ ದಲಿತರಿಗೆ ಹಂಚಿಕೆ ಮಾಡಬೇಕೆಂದು ಸಮಿತಿ ಒತ್ತಾಯಿಸಿದೆ.</p>.<p>ಈ ಸಮಸ್ಯೆ ಬಗೆಹರಿಸದಿದ್ದರೆ ತಾಲ್ಲೂಕಿನ ದಲಿತ ಸಂಘಟನೆಗಳ ಸಹಯೋಗದಲ್ಲಿ ಆಹೋರಾತ್ರಿ ಪ್ರತಿಭಟನೆ ಆರಂಭಿಸಲಾಗುವುದು ಎಂದು ಸಮಿತಿ ಎಚ್ಚರಿಸಿದೆ.</p>.<p>‘ನ್ಯಾಯಯುತವಾಗಿ ನಾವು ಬೇಡಿಕೆ ಇಟ್ಟಿದ್ದೆವೆ ದಲಿತರಿಗೆ ಸೇರಬೇಕಾದ ನಿವೇಶನಗಳನ್ನು ಶೀಘ್ರವಾಗಿ ವಿತರಣೆ ಮಾಡಿ ಅನ್ಯಾಯ ಸರಿಪಡಿಸಬೇಕು ಮತ್ತು ಒತ್ತುವರಿ ತೆರವು ಮಾಡಬೇ’ ಎಂದು ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷ ಸಂದೇಶ್ ಆಗ್ರಹಿಸಿದ್ದಾರೆ.</p>.<p>ಅತ್ತಿಬೆಲೆ ಗ್ರಾಮ ಪಂಚಾಯಿತಿ ಸದಸ್ಯ <strong>ಮುನಿಯಲ್ಲಪ್ಪ</strong><strong>, </strong> ಮುನಿವೆಂಕಟಪ್ಪ, ಚಿನ್ನಪ್ಪ, ಬಾಬು, ಮಧು, ಗಂಗಾಧರ್, ಮೋಹನ್, ರವಿಕಿರಣ್, ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>