ಬಳ್ಳಾರಿ: ಕೂಡ್ಲಿಗಿಯಲ್ಲಿ ಒಮ್ಮೆ ಬಿಜೆಪಿಯಿಂದ ಮತ್ತೊಮ್ಮೆ ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದಿದ್ದ ಬಿ.ನಾಗೇಂದ್ರ, ಏಕಕಾಲಕ್ಕೆ ಪಕ್ಷ ಮತ್ತು ಕ್ಷೇತ್ರವನ್ನು ತೊರೆದು ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಗೆದ್ದಿದ್ದಾರೆ. ಇದು ಅವರ ಸತತ ಮೂರನೇ ಗೆಲುವು. ಪಕ್ಷ ಬಿಟ್ಟರೂ, ಕ್ಷೇತ್ರ ಬಿಟ್ಟರೂ, ಎಲ್ಲಿ ಸ್ಪರ್ಧಿಸಿದರೂ ಗೆಲ್ಲುವೆ’ ಎಂಬ ಸಂದೇಶವನ್ನು ಅವರು ರವಾನಿಸಿದ್ದಾರೆ.