ಮಾರ್ಚ್ ಅಂತ್ಯದೊಳಗೆ ಕೈಗೊಂಡ ಪ್ರಗತಿಯ ವರದಿಯನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ ನೀಡಬೇಕಾಗಿದೆ. ಹಾಗಾಗಿ ಸಣ್ಣ ನೀರಾವರಿ, ಕಂದಾಯ ಇಲಾಖೆ ಮತ್ತು ಚಂದಾಪುರ ಪುರಸಭೆಯ ಮುಖ್ಯಾಧಿಕಾರಿ ಒಗ್ಗೂಡಿ ಈ ಕಾರ್ಯವನ್ನು ತ್ವರಿತವಾಗಿ ಮಾಡುವಂತೆ ಸೂಚಿಸಲಾಗಿದೆ. ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ತ್ವರಿತವಾಗಿ ಕಾಮಗಾರಿ ನಿರ್ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.