ಬುಧವಾರ, ಮಾರ್ಚ್ 22, 2023
23 °C

ಬನ್ನೇರುಘಟ್ಟ ಜೈವಿಕ ಉದ್ಯಾನ: ಅನಾರೋಗ್ಯದಿಂದ ಆನೆ, ಹುಲಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನೇಕಲ್: ಬನ್ನೇರುಘಟ್ಟ ಜೈವಿಕ ಉದ್ಯಾನದ ಆನೆ ‘ಸುಂದರ್‌’ ಅನಾರೋಗ್ಯದಿಂದ ಶನಿವಾರ ಮೃತಪಟ್ಟಿದೆ.

ಆ. 23ರಿಂದ ಸುಂದರ್‌ಗೆ ಆರೋಗ್ಯ ಸಮಸ್ಯೆ ಉಂಟಾಗಿತ್ತು. ಪಶುವೈದ್ಯ ತಂಡವು ಪರೀಕ್ಷಿಸಿತ್ತು. ಅದು ಉದರ ನೋವು ಮತ್ತು ತೀವ್ರ ಬಾಯಿ ಹುಣ್ಣು ಸಮಸ್ಯೆಯಿಂದ ಬಳಲುತ್ತಿತ್ತು. 

ಮಹಾರಾಷ್ಟ್ರದ ಕೊಲ್ಲಾಪುರ ದೇವಾಲಯದಿಂದ ಪೇಟಾದವರು ರಕ್ಷಿಸಿದ್ದರು. ಬನ್ನೇರುಘಟ್ಟ ಉದ್ಯಾನಕ್ಕೆ 2014ರಲ್ಲಿ ಕರೆ ತರಲಾಗಿತ್ತು. ಆರೋಗ್ಯ ಸಮಸ್ಯೆಯಿಂದ ಸುಂದರ್‌ ಮೃತಪಟ್ಟಿದ್ದು ಪೇಟಾ ಪ್ರತಿನಿಧಿಗಳ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಉದ್ಯಾನದ ನಿರ್ದೇಶಕರು ತಿಳಿಸಿದ್ದಾರೆ.

ಶುಕ್ರವಾರ ಬನ್ನೇರುಘಟ್ಟ ಜೈವಿಕ ಉದ್ಯಾನದದ ಹುಲಿ ‘ಕಿರಣ್‌’ ರಕ್ತದ ಪ್ರೋಟೊಜೋವಾ ಸೋಂಕಿನಿಂದ ಮೃತಪಟ್ಟಿದೆ.

ಕಳೆದ ನಾಲ್ಕು ತಿಂಗಳಿನಿಂದಲೂ ಹುಲಿಯು ದೀರ್ಘಾಕಾಲದ ಅನಾರೋಗ್ಯದಿಂದ ಬಳಲುತ್ತಿತ್ತು. ಉದ್ಯಾನದ ಹುಲಿಗಳಾದ ಅಮರ್‌ ಮತ್ತು ವಿಸ್ಮಯ ಹುಲಿಗೆ ಕಿರಣ್‌ ಜನಿಸಿದ್ದ. ಪಶುವೈದ್ಯಕೀಯ ತಂಡ ನಡೆಸಿದ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು