<p><strong>ಹೊಸಕೋಟೆ:</strong> ‘ರಾಜ್ಯ ಸರ್ಕಾರವು ಅಡುಗೆ ಕಾರ್ಮಿಕರನ್ನೂ ಸಹ ಇತರ ಅಸಂಘಟಿತ ಕಾರ್ಮಿಕರ ಗುಂಪಿಗೆ ಸೇರಿಸಿ ನಮಗೂ ಎಲ್ಲಾ ಸೌಲಭ್ಯಗಳು ಸಿಗುವಂತೆ ಮಾಡಬೇಕು’ ಎಂದು ಕರ್ನಾಟಕ ಅಡುಗೆ ಕೆಲಸಗಾರರ ಹಾಗೂ ಸಹಾಯಕ ಕಾರ್ಮಿಕರ ಕ್ಷೇಮಾಭಿವೃದ್ಧಿ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ಎಚ್.ವಿ. ನಾಗರಾಜ್ ಆಗ್ರಹಿಸಿದರು.</p>.<p>ನಗರದ ತಾಲ್ಲೂಕು ಕಚೇರಿಯ ಬಳಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿಅವರು ಮಾತನಾಡಿದರು.</p>.<p>‘ಲಾಕ್ಡೌನ್ ನಂತರ ರಾಜ್ಯ ಸರ್ಕಾರವು ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ₹ 5 ಸಾವಿರ ಸಹಾಯಧನ ಘೋಷಿಸಿತು. ಅಡುಗೆ ಕೆಲಸಗಾರರಿಗೂ ಸಹಾಯಧನ ಘೋಷಿಸಿತಾದರೂ ಈವರೆಗೆ ನಮಗೆ ಅದರ ಸೌಲಭ್ಯ ಸಿಗಲಿಲ್ಲ’ ಎಂದರು.</p>.<p>‘ಕಟ್ಟಡ ಮತ್ತು ಇತರ ಕಾರ್ಮಿಕರಿಗೆ ನೀಡುವಂತೆ ಅಡುಗೆ ಕಾರ್ಮಿಕರಿಗೂ ಪಿಂಚಣಿ ಯೋಜನೆ ಜಾರಿಗೆ ತರಬೇಕು. ಹಾಗೂ 40 ವರ್ಷದಿಂದ 55 ವರ್ಷದವರೆಗಿನ ಕಾರ್ಮಿಕರಿಗೂ ನೋಂದಣಿಗೆ ಅವಕಾಶ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ವೈ.ಜೆ. ಮುರಳೀಧರ್ ಮಾತನಾಡಿ, ‘ಅಡುಗೆಯವರ ಕಷ್ಟವನ್ನು ಯಾರೂ ವಿಚಾರಿಸದ ಕಾರಣ ನಾವು ಇಂದು ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿದ್ದೇವೆ’<br />ಎಂದರು.</p>.<p>ಸಂಘದ ಕಾರ್ಯದರ್ಶಿ ರಮೇಶ್ ಬಾಬು, ತಾಲ್ಲೂಕು ಗೌರವಾಧ್ಯಕ್ಷ ಎನ್. ಆನಂದ್, ತಾಲ್ಲೂಕು ಅಧ್ಯಕ್ಷ ಪಿ.ಎನ್. ಮಂಜುನಾಥ್, ಶಿವಕುಮಾರ್, ಶಿವಶಂಕರ್, ರಾಘವೆಂದ್ರ, ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ:</strong> ‘ರಾಜ್ಯ ಸರ್ಕಾರವು ಅಡುಗೆ ಕಾರ್ಮಿಕರನ್ನೂ ಸಹ ಇತರ ಅಸಂಘಟಿತ ಕಾರ್ಮಿಕರ ಗುಂಪಿಗೆ ಸೇರಿಸಿ ನಮಗೂ ಎಲ್ಲಾ ಸೌಲಭ್ಯಗಳು ಸಿಗುವಂತೆ ಮಾಡಬೇಕು’ ಎಂದು ಕರ್ನಾಟಕ ಅಡುಗೆ ಕೆಲಸಗಾರರ ಹಾಗೂ ಸಹಾಯಕ ಕಾರ್ಮಿಕರ ಕ್ಷೇಮಾಭಿವೃದ್ಧಿ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ಎಚ್.ವಿ. ನಾಗರಾಜ್ ಆಗ್ರಹಿಸಿದರು.</p>.<p>ನಗರದ ತಾಲ್ಲೂಕು ಕಚೇರಿಯ ಬಳಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿಅವರು ಮಾತನಾಡಿದರು.</p>.<p>‘ಲಾಕ್ಡೌನ್ ನಂತರ ರಾಜ್ಯ ಸರ್ಕಾರವು ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ₹ 5 ಸಾವಿರ ಸಹಾಯಧನ ಘೋಷಿಸಿತು. ಅಡುಗೆ ಕೆಲಸಗಾರರಿಗೂ ಸಹಾಯಧನ ಘೋಷಿಸಿತಾದರೂ ಈವರೆಗೆ ನಮಗೆ ಅದರ ಸೌಲಭ್ಯ ಸಿಗಲಿಲ್ಲ’ ಎಂದರು.</p>.<p>‘ಕಟ್ಟಡ ಮತ್ತು ಇತರ ಕಾರ್ಮಿಕರಿಗೆ ನೀಡುವಂತೆ ಅಡುಗೆ ಕಾರ್ಮಿಕರಿಗೂ ಪಿಂಚಣಿ ಯೋಜನೆ ಜಾರಿಗೆ ತರಬೇಕು. ಹಾಗೂ 40 ವರ್ಷದಿಂದ 55 ವರ್ಷದವರೆಗಿನ ಕಾರ್ಮಿಕರಿಗೂ ನೋಂದಣಿಗೆ ಅವಕಾಶ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ವೈ.ಜೆ. ಮುರಳೀಧರ್ ಮಾತನಾಡಿ, ‘ಅಡುಗೆಯವರ ಕಷ್ಟವನ್ನು ಯಾರೂ ವಿಚಾರಿಸದ ಕಾರಣ ನಾವು ಇಂದು ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿದ್ದೇವೆ’<br />ಎಂದರು.</p>.<p>ಸಂಘದ ಕಾರ್ಯದರ್ಶಿ ರಮೇಶ್ ಬಾಬು, ತಾಲ್ಲೂಕು ಗೌರವಾಧ್ಯಕ್ಷ ಎನ್. ಆನಂದ್, ತಾಲ್ಲೂಕು ಅಧ್ಯಕ್ಷ ಪಿ.ಎನ್. ಮಂಜುನಾಥ್, ಶಿವಕುಮಾರ್, ಶಿವಶಂಕರ್, ರಾಘವೆಂದ್ರ, ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>