ಮುಖ್ಯ ಹೆದ್ದಾರಿಗಳಲ್ಲಿ ಸಂಚರಿಸುವ ಬಸ್ನಲ್ಲಿ ಹಲವಾರು ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಅವರ ಜೀವಕ್ಕೆ ಭದ್ರತೆ ಇಲ್ಲದಂತಾಗಿದೆ. ಬಸ್ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದರೂ ಪೊಲೀಸರಾಗಲಿ, ಸಾರಿಗೆ ಇಲಾಖೆ ಅಧಿಕಾರಿಗಳಾಗಲಿ ಇದನ್ನು ಗಮನಿಸದೆ ಇರುವುದು ವಿಪರ್ಯಾಸ ಎಂದು ಸ್ಥಳೀಯ ನಿವಾಸಿ ಮನೋಹರ್ ದೂರಿದರು.