ಯಾವ ಕ್ಷಣದಲ್ಲಿ ಮಳೆ ಬಂದು ಅನಾಹುತವಾಗುತ್ತದೆ ಎಂದು ಹೇಳಲಿಕ್ಕೆ ಬರುವುದಿಲ್ಲ. ಉತ್ತರ ಕರ್ನಾಟಕದ ನೆರೆ ಹಾವಳಿಯಂತೆ ಆದರೆ ಇಡಿ ಗ್ರಾಮ ಅಪೋಶನವಾಗಲಿದೆ. ಇಂತಹ ಸಂದಿಗ್ದ ಸ್ಥಿತಿಯಲ್ಲಿ ಗ್ರಾಮದ ಬುಡದಲ್ಲಿರುವ ಕೆರೆಯಲ್ಲಿ ಮಣ್ಣು ಸಾಗಾಣಿಕೆ ಮಾಡುತ್ತಿದ್ದಾರೆ. ಭವಿಷ್ಯದಲ್ಲಿ ಇದು ಅಪಾಯಕಾರಿ ಬೆಳವಣಿಗೆಯಾಗಿದ್ದು, ಸ್ಥಳೀಯ ಕಂದಾಯ ಅಧಿಕಾರಿಗಳು ಮತ್ತು ಜಿಲ್ಲಾಡಳಿತ ಎಚ್ಚೆತ್ತು ಕಡಿವಾಣ ಹಾಕಬೇಕು ಎಂದು ಅವರು ಒತ್ತಾಯಿಸಿದರು.