<p><strong>ದೇವನಹಳ್ಳಿ</strong>: ತಾಲ್ಲೂಕಿನ ಬೊಮ್ಮಾವಾರ ಗ್ರಾಮದ ಮೀನಾಕ್ಷಿ ಸುಂದರೇಶ್ವರ ದೇವಸ್ಥಾನದ ಪುನಶ್ಚೇತನಗೊಂಡ ಕಲ್ಯಾಣಿಯಲ್ಲಿ ಶಿವರಾತ್ರಿಯ ಅಂಗವಾಗಿ ಭಾನುವಾರ ಗಂಗಾ ಪೂಜೆ ಆಯೋಜಿಸಲಾಗಿತ್ತು.</p>.<p>ಕಲ್ಯಾಣಿ ಸುತ್ತ ಸಾವಿರಾರು ಹಣತೆಗಳನ್ನು ಬೆಳಗಿಸಿ ದೀಪೋತ್ಸವ ನಡೆಸಲಾಯಿತು. ಎರಡು ನೂರಕ್ಕೂ ಹೆಚ್ಚು ಮಹಿಳೆಯರು ಗಂಗಾ ಕಲಶಗಳೊಂದಿಗೆ ಶೋಭಾಯಾತ್ರೆ ನಡೆಸಿದರು.</p>.<p>ಪರಿಸರ ಸಂರಕ್ಷಣ ತಂಡದ ಸದಸ್ಯರು ಸ್ಥಳೀಯರ ಸಹಕಾರದೊಂದಿಗೆ 12 ವಾರ ದೇವಸ್ಥಾನದ ಕಲ್ಯಾಣಿ ಸ್ವಚ್ಛತೆ ಹಾಗೂ ಪುನಶ್ಚೇತನ ಕಾರ್ಯ ಕೈಗೊಂಡಿತ್ತು. ಇದೇ ವೇಳೆ ಪರಿಸರ ಸಂರಕ್ಷಣೆ ಕುರಿತು ಎಲ್ಲರಿಗೂ ಸಂಕಲ್ಪ ಮಾಡಿಸಲಾಯಿತು.</p>.<p>‘ನಮ್ಮ ಸುತ್ತಮುತ್ತ ಇರುವ ಪ್ರತಿಯೊಂದು ಕೆರೆ–ಕಲ್ಯಾಣಿಗಳು ಗಂಗೆಯಷ್ಟೇ ಪವಿತ್ರ. ಸ್ಥಳೀಯ ಜಲಮೂಲಗಳ ಸಂರಕ್ಷಣೆಗೆ ಪ್ರತಿಯೊಬ್ಬರೂ ನೈಜ ಕಾಳಜಿ ವಹಿಸಿದಾಗ ಮಾತ್ರ ಗಂಗಾ ಪೂಜೆಗೆ ಸಾರ್ಥಕತೆ ದೊರೆಯುತ್ತದೆ’ ಎಂದು ಪರಿಸರ ಸಂರಕ್ಷಣ ಗತಿವಿಧಿ ಕರ್ನಾಟಕ ದಕ್ಷಿಣ ಪ್ರಾಂತ ಸಂಯೋಜಕ ವೆಂಕಟೇಶ ಸಂಗನಾಳ ಹೇಳಿದರು.</p>.<p>ಪ್ರತಿ ಮನೆ ಪರಿಸರ ಸ್ನೇಹಿಯಾಗಬೇಕು. ಜಲ ಸಂರಕ್ಷಣೆ, ವೃಕ್ಷ ಸಂರಕ್ಷಣೆ–ಸಂವರ್ಧನೆ ಮತ್ತು ಪಾಲಿಥಿನ್ ಬಳಕೆಯನ್ನು ಕಟ್ಟುನಿಟ್ಟಾಗಿ ನಿಲ್ಲಿಸುವ ಮೂಲಕ ಗ್ರಾಮವನ್ನೇ ಸಂಪೂರ್ಣ ಪರಿಸರ ಸ್ನೇಹಿ ಗ್ರಾಮವನ್ನಾಗಿ ರೂಪಿಸಬೇಕು ಎಂದರು.</p>.<p>ಪ್ರಸಾದ ವಿತರಣೆ ಸೇರಿದಂತೆ ಸಮಗ್ರ ಕಾರ್ಯಕ್ರಮವನ್ನು ಪರಿಸರ ಸ್ನೇಹಿಯಾಗಿ ನಡೆಸಲು ವಿಶೇಷ ಮುತುವರ್ಜಿ ವಹಿಸಲಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಸ್ಥಳೀಯರು ಭಾಗವಹಿಸಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ</strong>: ತಾಲ್ಲೂಕಿನ ಬೊಮ್ಮಾವಾರ ಗ್ರಾಮದ ಮೀನಾಕ್ಷಿ ಸುಂದರೇಶ್ವರ ದೇವಸ್ಥಾನದ ಪುನಶ್ಚೇತನಗೊಂಡ ಕಲ್ಯಾಣಿಯಲ್ಲಿ ಶಿವರಾತ್ರಿಯ ಅಂಗವಾಗಿ ಭಾನುವಾರ ಗಂಗಾ ಪೂಜೆ ಆಯೋಜಿಸಲಾಗಿತ್ತು.</p>.<p>ಕಲ್ಯಾಣಿ ಸುತ್ತ ಸಾವಿರಾರು ಹಣತೆಗಳನ್ನು ಬೆಳಗಿಸಿ ದೀಪೋತ್ಸವ ನಡೆಸಲಾಯಿತು. ಎರಡು ನೂರಕ್ಕೂ ಹೆಚ್ಚು ಮಹಿಳೆಯರು ಗಂಗಾ ಕಲಶಗಳೊಂದಿಗೆ ಶೋಭಾಯಾತ್ರೆ ನಡೆಸಿದರು.</p>.<p>ಪರಿಸರ ಸಂರಕ್ಷಣ ತಂಡದ ಸದಸ್ಯರು ಸ್ಥಳೀಯರ ಸಹಕಾರದೊಂದಿಗೆ 12 ವಾರ ದೇವಸ್ಥಾನದ ಕಲ್ಯಾಣಿ ಸ್ವಚ್ಛತೆ ಹಾಗೂ ಪುನಶ್ಚೇತನ ಕಾರ್ಯ ಕೈಗೊಂಡಿತ್ತು. ಇದೇ ವೇಳೆ ಪರಿಸರ ಸಂರಕ್ಷಣೆ ಕುರಿತು ಎಲ್ಲರಿಗೂ ಸಂಕಲ್ಪ ಮಾಡಿಸಲಾಯಿತು.</p>.<p>‘ನಮ್ಮ ಸುತ್ತಮುತ್ತ ಇರುವ ಪ್ರತಿಯೊಂದು ಕೆರೆ–ಕಲ್ಯಾಣಿಗಳು ಗಂಗೆಯಷ್ಟೇ ಪವಿತ್ರ. ಸ್ಥಳೀಯ ಜಲಮೂಲಗಳ ಸಂರಕ್ಷಣೆಗೆ ಪ್ರತಿಯೊಬ್ಬರೂ ನೈಜ ಕಾಳಜಿ ವಹಿಸಿದಾಗ ಮಾತ್ರ ಗಂಗಾ ಪೂಜೆಗೆ ಸಾರ್ಥಕತೆ ದೊರೆಯುತ್ತದೆ’ ಎಂದು ಪರಿಸರ ಸಂರಕ್ಷಣ ಗತಿವಿಧಿ ಕರ್ನಾಟಕ ದಕ್ಷಿಣ ಪ್ರಾಂತ ಸಂಯೋಜಕ ವೆಂಕಟೇಶ ಸಂಗನಾಳ ಹೇಳಿದರು.</p>.<p>ಪ್ರತಿ ಮನೆ ಪರಿಸರ ಸ್ನೇಹಿಯಾಗಬೇಕು. ಜಲ ಸಂರಕ್ಷಣೆ, ವೃಕ್ಷ ಸಂರಕ್ಷಣೆ–ಸಂವರ್ಧನೆ ಮತ್ತು ಪಾಲಿಥಿನ್ ಬಳಕೆಯನ್ನು ಕಟ್ಟುನಿಟ್ಟಾಗಿ ನಿಲ್ಲಿಸುವ ಮೂಲಕ ಗ್ರಾಮವನ್ನೇ ಸಂಪೂರ್ಣ ಪರಿಸರ ಸ್ನೇಹಿ ಗ್ರಾಮವನ್ನಾಗಿ ರೂಪಿಸಬೇಕು ಎಂದರು.</p>.<p>ಪ್ರಸಾದ ವಿತರಣೆ ಸೇರಿದಂತೆ ಸಮಗ್ರ ಕಾರ್ಯಕ್ರಮವನ್ನು ಪರಿಸರ ಸ್ನೇಹಿಯಾಗಿ ನಡೆಸಲು ವಿಶೇಷ ಮುತುವರ್ಜಿ ವಹಿಸಲಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಸ್ಥಳೀಯರು ಭಾಗವಹಿಸಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>