<p><strong>ದೊಡ್ಡಬಳ್ಳಾಪುರ: </strong>ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಮಾನ್ಯತೆ ರದ್ದುಪಡಿಸಿ ಆಡಳಿತ ಮಂಡಳಿ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿ ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ದಲಿತ ವಿಮೋಚನಾ ಶಕ್ತಿ ರಾಜ್ಯ ಘಟಕದ ಅಧ್ಯಕ್ಷ ಎಸ್. ನಾಗೇನಹಳ್ಳಿ ಮಂಜುನಾಥ್ ಒತ್ತಾಯಿಸಿದರು.</p>.<p>ನಗರದ ತಾಲ್ಲೂಕು ಕಚೇರಿ ಮುಂಭಾಗ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.</p>.<p>ಸರ್ವರಿಗೂ ಸಮಪಾಲು, ಸಮಬಾಳು ಎಂಬ ಆಶಯದ ಮೇಲೆ ಬಹು ಸಂಸ್ಕೃತಿಯ ದೇಶಕ್ಕೆ ಇಡೀ ವಿಶ್ವವೇ ಒಪ್ಪಿ ಮೆಚ್ಚುವಂತಹ ಸಂವಿಧಾನವನ್ನು ರಚಿಸಿದ ಕೀರ್ತಿಗೆ ಅಂಬೇಡ್ಕರ್ಗೆ ಸಲ್ಲುತ್ತದೆ. ಇಂತಹ ಮಹಾನ್ ವ್ಯಕ್ತಿಯನ್ನು ಅವಮಾನಿಸಲಾಗಿದೆ ಎಂದು ಹೇಳಿದರು.</p>.<p>ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಗ್ಗೆ ಕೀಳು ಅಭಿರುಚಿಯ ನಾಟಕ ಪ್ರದರ್ಶಿಸಿ ಅಭಿನಯಿಸಿದ ವಿದ್ಯಾರ್ಥಿಗಳು ವಿದ್ಯೆ ಕಲಿಯಲು ಅವಕಾಶ ಮಾಡಿಕೊಟ್ಟ ವ್ಯವಸ್ಥೆ ಬಗ್ಗೆ ಮೊದಲು ಅರಿತುಕೊಳ್ಳಬೇಕಿದೆ. ಕೀಳುಮಟ್ಟದ ನಾಟಕ ಪ್ರದರ್ಶನ ಮೂಲಕ ದೇಶದ್ರೋಹಿ ಕೃತ್ಯಕ್ಕೆ ಪ್ರೊತ್ಸಾಹ ನೀಡಿದ ಜೈನ್ ವಿ.ವಿಗೆ ನೀಡಿರುವ ಮಾನ್ಯತೆಯನ್ನು ಸರ್ಕಾರ ಈ ಕೂಡಲೇ ರದ್ದುಪಡಿಸಬೇಕು. ಆಡಳಿತ ಮಂಡಳಿಯ ಮುಖ್ಯಸ್ಥರ ವಿರುದ್ಧ ದೂರು ದಾಖಲಿಸಿ ಬಂಧಿಸಬೇಕು ಎಂದು ಒತ್ತಾಯಿಸಿದರು.</p>.<p>ತಹಶೀಲ್ದಾರ್ ಮೋಹನಕುಮಾರಿ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಲಾಯಿತು.</p>.<p>ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸದಾನಂದ್, ಮುಖಂಡರಾದ ಅಂಜನಮೂರ್ತಿ, ವೆಂಕಟೇಶ್, ಕಾಂಗ್ರೆಸ್ನ ಬಿ. ಮುನಿರಾಜು, ವೀರಭದ್ರನಪಾಳ್ಯ ಶೇಖರ್, ಭೋವಿ ಸಮುದಾಯದ ಮುಖಂಡ ವೆಂಕಟೇಶ್, ಎಚ್. ಮಂಜುನಾಥ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಮಾನ್ಯತೆ ರದ್ದುಪಡಿಸಿ ಆಡಳಿತ ಮಂಡಳಿ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿ ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ದಲಿತ ವಿಮೋಚನಾ ಶಕ್ತಿ ರಾಜ್ಯ ಘಟಕದ ಅಧ್ಯಕ್ಷ ಎಸ್. ನಾಗೇನಹಳ್ಳಿ ಮಂಜುನಾಥ್ ಒತ್ತಾಯಿಸಿದರು.</p>.<p>ನಗರದ ತಾಲ್ಲೂಕು ಕಚೇರಿ ಮುಂಭಾಗ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.</p>.<p>ಸರ್ವರಿಗೂ ಸಮಪಾಲು, ಸಮಬಾಳು ಎಂಬ ಆಶಯದ ಮೇಲೆ ಬಹು ಸಂಸ್ಕೃತಿಯ ದೇಶಕ್ಕೆ ಇಡೀ ವಿಶ್ವವೇ ಒಪ್ಪಿ ಮೆಚ್ಚುವಂತಹ ಸಂವಿಧಾನವನ್ನು ರಚಿಸಿದ ಕೀರ್ತಿಗೆ ಅಂಬೇಡ್ಕರ್ಗೆ ಸಲ್ಲುತ್ತದೆ. ಇಂತಹ ಮಹಾನ್ ವ್ಯಕ್ತಿಯನ್ನು ಅವಮಾನಿಸಲಾಗಿದೆ ಎಂದು ಹೇಳಿದರು.</p>.<p>ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಗ್ಗೆ ಕೀಳು ಅಭಿರುಚಿಯ ನಾಟಕ ಪ್ರದರ್ಶಿಸಿ ಅಭಿನಯಿಸಿದ ವಿದ್ಯಾರ್ಥಿಗಳು ವಿದ್ಯೆ ಕಲಿಯಲು ಅವಕಾಶ ಮಾಡಿಕೊಟ್ಟ ವ್ಯವಸ್ಥೆ ಬಗ್ಗೆ ಮೊದಲು ಅರಿತುಕೊಳ್ಳಬೇಕಿದೆ. ಕೀಳುಮಟ್ಟದ ನಾಟಕ ಪ್ರದರ್ಶನ ಮೂಲಕ ದೇಶದ್ರೋಹಿ ಕೃತ್ಯಕ್ಕೆ ಪ್ರೊತ್ಸಾಹ ನೀಡಿದ ಜೈನ್ ವಿ.ವಿಗೆ ನೀಡಿರುವ ಮಾನ್ಯತೆಯನ್ನು ಸರ್ಕಾರ ಈ ಕೂಡಲೇ ರದ್ದುಪಡಿಸಬೇಕು. ಆಡಳಿತ ಮಂಡಳಿಯ ಮುಖ್ಯಸ್ಥರ ವಿರುದ್ಧ ದೂರು ದಾಖಲಿಸಿ ಬಂಧಿಸಬೇಕು ಎಂದು ಒತ್ತಾಯಿಸಿದರು.</p>.<p>ತಹಶೀಲ್ದಾರ್ ಮೋಹನಕುಮಾರಿ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಲಾಯಿತು.</p>.<p>ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸದಾನಂದ್, ಮುಖಂಡರಾದ ಅಂಜನಮೂರ್ತಿ, ವೆಂಕಟೇಶ್, ಕಾಂಗ್ರೆಸ್ನ ಬಿ. ಮುನಿರಾಜು, ವೀರಭದ್ರನಪಾಳ್ಯ ಶೇಖರ್, ಭೋವಿ ಸಮುದಾಯದ ಮುಖಂಡ ವೆಂಕಟೇಶ್, ಎಚ್. ಮಂಜುನಾಥ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>