ವಿಜಯಪುರ: ‘ತೀವ್ರ ಬರಗಾಲಕ್ಕೆ ತುತ್ತಾಗಿ ನೀರಿನ ಬವಣೆ ಅನುಭವಿಸುತ್ತಿರುವ ಬಯಲು ಸೀಮೆ ಭಾಗಗಳಿಗೆ ಸರ್ಕಾರ, ನೀರಾವರಿ ಸೌಲಭ್ಯ ಕಲ್ಪಿಸುವ ಸಲುವಾಗಿ ಜಾರಿಗೆ ತಂದಿರುವ ಎಚ್.ಎನ್.ವ್ಯಾಲಿ ಯೋಜನೆಯಡಿ ಈ ಭಾಗಕ್ಕೆ ಹರಿಯುತ್ತಿರುವ ನೀರಿನ ಪ್ರಮಾಣ ತೀರಾ ಕಡಿಮೆಯಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಹರಿಸುವುದಾಗಿ ಹೇಳಿದ್ದ ಅಧಿಕಾರಿಗಳು ಇದುವರೆಗೂ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರಪ್ಪ ಬೇಸರ ವ್ಯಕ್ತಪಡಿಸಿದರು.