ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಪ್ರಭು ಚವಾಣ್ ರಾಜೀನಾಮೆಗೆ ಆಗ್ರಹ

Last Updated 7 ಜೂನ್ 2020, 15:00 IST
ಅಕ್ಷರ ಗಾತ್ರ

ವಿಜಯಪುರ:ನಕಲಿ ದಾಖಲೆ ಸಲ್ಲಿಸಿ ಜಾತಿ ಪ್ರಮಾಣಪತ್ರ ಪಡೆದ ಆರೋಪ ಹೊಂದಿರುವ ಪಶುಸಂಗೋಪನೆ ಸಚಿವ ಪ್ರಭು ಚವಾಣ್‌ ರಾಜೀನಾಮೆ ನೀಡಬೇಕು ಎಂದುಭಾರತ ಜನಜಾಗೃತಿ ಸೇನೆ ರಾಜ್ಯ ಘಟಕದ ಅಧ್ಯಕ್ಷ ಸಿ.ಮುನಿಯಪ್ಪ ಒತ್ತಾಯಿಸಿದ್ದಾರೆ.

ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಸ್ಥಾನವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿದ ಪ್ರಭು ಚವಾಣ್‌ ಪ್ರತಿನಿಧಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಇದು ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪ‍ಡಿಸಿದ್ದಾರೆ.

ಮಹಾರಾಷ್ಟ್ರ ಮೂಲದ ಉದಗೀರ್ ತಾಲ್ಲೂಕಿನ ತೊಂಡಚೀರ್ ಗ್ರಾಮದ ನಿವಾಸಿಯಾಗಿರುವ ಅವರು ಲಂಬಾಣಿ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದಾರೆ ಎನ್ನುವುದು ಸಾಬೀತಾಗಿದ್ದರೂ ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಮೂರು ಬಾರಿ ಶಾಸಕರಾಗಿದ್ದಾರೆ. ಆದ್ದರಿಂದ ಅವರನ್ನು ಕೂಡಲೇ ಸಚಿವ ಸಂಪುಟದಿಂದ ಕೈಬಿಟ್ಟು ಅವರ ದಾಖಲೆಗಳ ವಿಚಾರಣೆಯನ್ನು ಸಿಬಿಐ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT