ಮಹಾರಾಷ್ಟ್ರ ಮೂಲದ ಉದಗೀರ್ ತಾಲ್ಲೂಕಿನ ತೊಂಡಚೀರ್ ಗ್ರಾಮದ ನಿವಾಸಿಯಾಗಿರುವ ಅವರು ಲಂಬಾಣಿ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದಾರೆ ಎನ್ನುವುದು ಸಾಬೀತಾಗಿದ್ದರೂ ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಮೂರು ಬಾರಿ ಶಾಸಕರಾಗಿದ್ದಾರೆ. ಆದ್ದರಿಂದ ಅವರನ್ನು ಕೂಡಲೇ ಸಚಿವ ಸಂಪುಟದಿಂದ ಕೈಬಿಟ್ಟು ಅವರ ದಾಖಲೆಗಳ ವಿಚಾರಣೆಯನ್ನು ಸಿಬಿಐ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.