ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಪ ನಿರ್ದೇಶಕರಾದ ಹನುಮಂತರಾಯಪ್ಪ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡುತ್ತಾ, ‘ವಾಲ್ಮೀಕಿ ಭವನ ನಮ್ಮ ಇಲಾಖೆಗೆ ಹಸ್ತಾಂತರವಾಗಿಲ್ಲ. ಭವನದ ಮುಖ್ಯದ್ವಾರ ಶೀಘ್ರವಾಗಿ ಹಾಕಿಸಲಾಗುವುದು ಹಾಗೂ ಭವನ ನಿರ್ಮಾಣ ಕಾಮಗಾರಿಯನ್ನು ವಹಿಸಿಕೊಂಡಿರುವ ಏಜೆನ್ಸಿ ಅಥವಾ ಗುತ್ತಿಗೆದಾರರಿಗೆ ನೋಟಿಸ್ ಜಾರಿ ಮಾಡುತ್ತೇವೆ’ ಎಂದರು.