ಬಂಧಿತ ಕೈದಿಯನ್ನು ಅಡವಯ್ಯ ಉರುಫ್ ಸ್ವಾಮಿ ಕುಂಬಯ್ಯ ಎಂದು ಗುರುತಿಸಲಾಗಿದೆ. ಕೈದಿ ಮೂಲತಃ ಬೆಳಗಾವಿ ಜಿಲ್ಲೆ ಮಾರಿಹಾಳ ಗ್ರಾಮದವರು. ಕೊಲೆ ಆರೋಪದ ಹಿನ್ನೆಲೆಯಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಗೋವಾ ರಾಜ್ಯದ ಕೊಲವಳೆ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು. ಪೆರೋಲ್ ರಜೆ ಮುಕ್ತಾಯವಾದರೂ ಜೈಲಿಗೆ ತೆರಳದೆ ಜಿಗಣಿಯಲ್ಲಿ ತಲೆಮರೆಸಿಕೊಂಡಿದ್ದರು. ಬೆಳಗಾವಿ ಪೊಲೀಸರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಜಿಗಣಿ ಪೊಲೀಸರು ಕಾರ್ಯಾಚರಣೆ ನಡೆಸಿ ಕೈದಿಯನ್ನು ಪತ್ತೆ ಹಚ್ಚಿ ಬೆಳಗಾವಿ ಪೊಲೀಸರ ವಶಕ್ಕೆ ನೀಡಿದ್ದಾರೆ ಎಂದು ಜಿಗಣಿ ಸರ್ಕಲ್ ಇನ್ಸ್ಪೆಕ್ಟರ್ ಕೆ.ವಿಶ್ವನಾಥ್ ತಿಳಿಸಿದರು.