<p><strong>ದೇವನಹಳ್ಳಿ:</strong> ಪಟ್ಟಣದ ಹಲವು ಕಡೆ ಪ್ಲಾಸ್ಟಿಕ್ ಮಾರಾಟ ಮಳಿಗೆ ಹಾಗೂ ಗೋದಾಮುಗಳ ಮೇಲೆ ಪುರಸಭೆ ಅಧಿಕಾರಿಗಳ ತಂಡ ಮುಖ್ಯಾಧಿಕಾರಿ ಶಿವಮೂರ್ತಿ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಿತು.</p>.<p>ಪ್ಲಾಸ್ಟಿಕ್ ಮಾರಾಟ ಮಳಿಗೆಗಳ ಮೇಲೆ ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಶ್ರೀದೇವಿ ಹಾಗೂ ಸಿಬ್ಬಂದಿ ವರ್ಗ ಭೇಟಿ ನಿಷೇಧಿತ ಪ್ಲಾಸ್ಟಿಕ್ಗಳನ್ನು ವಶಕ್ಕೆ ಪಡೆದರು.</p>.<p>‘ಪಟ್ಟಣವನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ಚಿಂತನೆ ಹೊಂದಿದ್ದೇವೆ. ಪರಿಸರಕ್ಕೆ ಹಾನಿಕರ ಮತ್ತು 70 ಮೈಕ್ರಾನ್ ಗಿಂತಲೂ ಕಡಿಮೆ ಗುಣಮಟ್ಟದ 350 ಕೆ.ಜಿಗೂ ಹೆಚ್ಚಿನ ಪ್ಲಾಸ್ಟಿಕ್ ಉತ್ಪನ್ನ ವಶಕ್ಕೆ ಪಡೆದಿದ್ದೇವೆ. ದಾಳಿಯಲ್ಲಿ ₹20 ಸಾವಿರ ದಂಡ ವಸೂಲಿ ಮಾಡಲಾಗಿದೆ. ಮೂರು ಬಾರಿ ದಂಡ ವಿಧಿಸಿದ ನಂತರವೂ ಪ್ಲಾಸ್ಟಿಕ್ ಮಾರಾಟ ಮಾಡುವವರ ಮೇಲೆ ಕಠಿಣ ಕ್ರಮಕ್ಕೆ ಕೈಗೊಳ್ಳಲಾಗುತ್ತಿದೆ’ ಎಂದು ಪುರಸಭಾ ಮುಖ್ಯಾಧಿಕಾರಿ ಶಿವಮೂರ್ತಿ ತಿಳಿಸಿದರು.</p>.<p>ಸಾರ್ವಜನಿಕರು ಅಂಗಡಿಗಳಿಗೆ ಹೋಗುವಾಗ ಕಡ್ಡಾಯವಾಗಿ ಬಟ್ಟೆ ಬ್ಯಾಗ್ ತೆಗೆದುಕೊಂಡು ಹೋಗಬೇಕು. ಆಗ ಮಾತ್ರ ಪ್ಲಾಸ್ಟಿಕ್ ನಿಷೇಧ ಸಂಪೂರ್ಣವಾಗಿ ಜಾರಿಗೆ ಬಂದಂತೆ ಆಗುತ್ತದ ಎಂದರು.</p>.<p>ಪುರಸಭೆ ಉಪಾಧ್ಯಕ್ಷ ಜಿ.ಎ.ರವೀಂದ್ರ, ಸಿಬ್ಬಂದಿ ಆದರ್ಶ, ಗೋಪಾಲ, ಅನಿಲ, ಮುನಿರಾಜು, ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ಪಟ್ಟಣದ ಹಲವು ಕಡೆ ಪ್ಲಾಸ್ಟಿಕ್ ಮಾರಾಟ ಮಳಿಗೆ ಹಾಗೂ ಗೋದಾಮುಗಳ ಮೇಲೆ ಪುರಸಭೆ ಅಧಿಕಾರಿಗಳ ತಂಡ ಮುಖ್ಯಾಧಿಕಾರಿ ಶಿವಮೂರ್ತಿ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಿತು.</p>.<p>ಪ್ಲಾಸ್ಟಿಕ್ ಮಾರಾಟ ಮಳಿಗೆಗಳ ಮೇಲೆ ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಶ್ರೀದೇವಿ ಹಾಗೂ ಸಿಬ್ಬಂದಿ ವರ್ಗ ಭೇಟಿ ನಿಷೇಧಿತ ಪ್ಲಾಸ್ಟಿಕ್ಗಳನ್ನು ವಶಕ್ಕೆ ಪಡೆದರು.</p>.<p>‘ಪಟ್ಟಣವನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ಚಿಂತನೆ ಹೊಂದಿದ್ದೇವೆ. ಪರಿಸರಕ್ಕೆ ಹಾನಿಕರ ಮತ್ತು 70 ಮೈಕ್ರಾನ್ ಗಿಂತಲೂ ಕಡಿಮೆ ಗುಣಮಟ್ಟದ 350 ಕೆ.ಜಿಗೂ ಹೆಚ್ಚಿನ ಪ್ಲಾಸ್ಟಿಕ್ ಉತ್ಪನ್ನ ವಶಕ್ಕೆ ಪಡೆದಿದ್ದೇವೆ. ದಾಳಿಯಲ್ಲಿ ₹20 ಸಾವಿರ ದಂಡ ವಸೂಲಿ ಮಾಡಲಾಗಿದೆ. ಮೂರು ಬಾರಿ ದಂಡ ವಿಧಿಸಿದ ನಂತರವೂ ಪ್ಲಾಸ್ಟಿಕ್ ಮಾರಾಟ ಮಾಡುವವರ ಮೇಲೆ ಕಠಿಣ ಕ್ರಮಕ್ಕೆ ಕೈಗೊಳ್ಳಲಾಗುತ್ತಿದೆ’ ಎಂದು ಪುರಸಭಾ ಮುಖ್ಯಾಧಿಕಾರಿ ಶಿವಮೂರ್ತಿ ತಿಳಿಸಿದರು.</p>.<p>ಸಾರ್ವಜನಿಕರು ಅಂಗಡಿಗಳಿಗೆ ಹೋಗುವಾಗ ಕಡ್ಡಾಯವಾಗಿ ಬಟ್ಟೆ ಬ್ಯಾಗ್ ತೆಗೆದುಕೊಂಡು ಹೋಗಬೇಕು. ಆಗ ಮಾತ್ರ ಪ್ಲಾಸ್ಟಿಕ್ ನಿಷೇಧ ಸಂಪೂರ್ಣವಾಗಿ ಜಾರಿಗೆ ಬಂದಂತೆ ಆಗುತ್ತದ ಎಂದರು.</p>.<p>ಪುರಸಭೆ ಉಪಾಧ್ಯಕ್ಷ ಜಿ.ಎ.ರವೀಂದ್ರ, ಸಿಬ್ಬಂದಿ ಆದರ್ಶ, ಗೋಪಾಲ, ಅನಿಲ, ಮುನಿರಾಜು, ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>