ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದ್ಮ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Published 22 ಜೂನ್ 2023, 14:22 IST
Last Updated 22 ಜೂನ್ 2023, 14:22 IST
ಅಕ್ಷರ ಗಾತ್ರ

ದೇವನಹಳ್ಳಿ: ಸಮಾಜದಲ್ಲಿ ಅತ್ಯತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2024ನೇ ಸಾಲಿನ ಪ್ರದ್ಮಶ್ರೇಣಿಯ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮ ಭೂಷಣ, ಪದ್ಮಶ್ರೀ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರು ನಿಗದಿತ ನಮೂನೆಯಲ್ಲಿ ಇಂಗ್ಲಿಷ್‌ ಮತ್ತು ಕನ್ನಡ ಭಾಷೆಯಲ್ಲಿ ವಿವರಗಳೊಂದಿಗೆ ದಿನಾಂಕ ಜೂನ್ 27 ರೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು ಇಲ್ಲಿಗೆ ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿ ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT