<p><strong>ದೇವನಹಳ್ಳಿ</strong>: ಸಮುದಾಯ ಜೀವನ ಶಿಬಿರ ಆಯೋಜಿಸುವುದರಿಂದ ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನ ಶೈಲಿ ಅರಿವಿಗೆ ಬರಲಿದೆ ಎಂದು ತಹಶೀಲ್ದಾರ್ ಎಚ್.ಬಾಲಕೃಷ್ಣ ತಿಳಿಸಿದರು.</p>.<p>ತಾಲ್ಲೂಕಿನ ಕೋಡಗುರ್ಕಿ ಬಳಿ ಇರುವ ಕತ್ತಿಮಾರಮ್ಮ ದೇವಾಲಯದ ಸಮುದಾಯ ಭವನದಲ್ಲಿ ನಳಂದ ಶಿಕ್ಷಣ ಮಹಾವಿದ್ಯಾಲದಿಂದ ಹಮ್ಮಿಕೊಂಡಿದ್ದ ಸಮುದಾಯ ಜೀವನ ಶಿಬಿರವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.</p>.<p>ಯುವ ಪೀಳಿಗೆ ಪಟ್ಟಣದ ವಾತಾವರಣಕ್ಕೆ ಹೊಂದಿಕೊಂಡಿದ್ದು ಹಳ್ಳಿ ವಾತಾವರಣವನ್ನೇ ಮರೆಯುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು. </p>.<p>ವಾತಾವರಣ, ಶುಚಿತ್ವ, ಶಿಕ್ಷಣ ಸೇರಿದಂತೆ ಅನೇಕ ವಿಷಯ ಕಲಿಯುವುದರ ಜತೆಗೆ ನಿತ್ಯ ಸ್ವಚ್ಛತಾ ಕಾರ್ಯ ಮಾಡುವುದರಿಂದ ವಿದ್ಯಾರ್ಥಿಗಳು ದೈಹಿಕ, ಮಾನಸಿಕವಾಗಿ ಆರೋಗ್ಯವಂತರಾಗಿರುತ್ತಾರೆ ಎಂದರು.</p>.<p>ಚಿಕ್ಕಬಳ್ಳಾಪುರ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಕೊಡಿರಂಗಪ್ಪ ಮಾತನಾಡಿ, ಶಿಬಿರದಲ್ಲಿ ಭಾಗವಹಿಸಿರುವ ಪ್ರತಿಕ್ಷಣಾರ್ಥಿಗಳೇ ಮುಂದೆ ಶಿಕ್ಷಕರಾಗಲಿದ್ದಾರೆ. ಹಳ್ಳಿಯ ಜೀವನ ಶೈಲಿ ಕುರಿತು ತಿಳಿದುಕೊಳ್ಳುವುದರಿಂದ ಮುಂದೆ ಮಕ್ಕಳಿಗೆ ಮೌಲ್ಯೌಯುತ ಶಿಕ್ಷಣ ನೀಡಲು ಸಾಧ್ಯವಾಗಲಿದೆ ಎಂದರು.</p>.<p>ನಳಂದ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಟಿ.ಸಿ.ವೆಂಕಟೇಶ್ಗೌಡ, ಶಿಕ್ಷಕ ರಮೇಶ್, ಕತ್ತಿಮಾರಮ್ಮ ದೇವಾಲಯದ ಪ್ರಧಾನ ಅರ್ಚಕ ಶ್ರೀಧರ್ ದೀಕ್ಷಿತ್, ಬಿದಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ್.ಎ, ಮಕ್ಕಳ ತಜ್ಞ ಡಾ.ಎಸ್.ಸಂತೋಷ್, ಉಪನ್ಯಾಸಕರಾದ ಈಶ್ವರಪ್ಪ, ಪಾರ್ವತಮ್ಮ, ಪ್ರತಾಪ್ ರೆಡ್ದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ</strong>: ಸಮುದಾಯ ಜೀವನ ಶಿಬಿರ ಆಯೋಜಿಸುವುದರಿಂದ ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನ ಶೈಲಿ ಅರಿವಿಗೆ ಬರಲಿದೆ ಎಂದು ತಹಶೀಲ್ದಾರ್ ಎಚ್.ಬಾಲಕೃಷ್ಣ ತಿಳಿಸಿದರು.</p>.<p>ತಾಲ್ಲೂಕಿನ ಕೋಡಗುರ್ಕಿ ಬಳಿ ಇರುವ ಕತ್ತಿಮಾರಮ್ಮ ದೇವಾಲಯದ ಸಮುದಾಯ ಭವನದಲ್ಲಿ ನಳಂದ ಶಿಕ್ಷಣ ಮಹಾವಿದ್ಯಾಲದಿಂದ ಹಮ್ಮಿಕೊಂಡಿದ್ದ ಸಮುದಾಯ ಜೀವನ ಶಿಬಿರವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.</p>.<p>ಯುವ ಪೀಳಿಗೆ ಪಟ್ಟಣದ ವಾತಾವರಣಕ್ಕೆ ಹೊಂದಿಕೊಂಡಿದ್ದು ಹಳ್ಳಿ ವಾತಾವರಣವನ್ನೇ ಮರೆಯುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು. </p>.<p>ವಾತಾವರಣ, ಶುಚಿತ್ವ, ಶಿಕ್ಷಣ ಸೇರಿದಂತೆ ಅನೇಕ ವಿಷಯ ಕಲಿಯುವುದರ ಜತೆಗೆ ನಿತ್ಯ ಸ್ವಚ್ಛತಾ ಕಾರ್ಯ ಮಾಡುವುದರಿಂದ ವಿದ್ಯಾರ್ಥಿಗಳು ದೈಹಿಕ, ಮಾನಸಿಕವಾಗಿ ಆರೋಗ್ಯವಂತರಾಗಿರುತ್ತಾರೆ ಎಂದರು.</p>.<p>ಚಿಕ್ಕಬಳ್ಳಾಪುರ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಕೊಡಿರಂಗಪ್ಪ ಮಾತನಾಡಿ, ಶಿಬಿರದಲ್ಲಿ ಭಾಗವಹಿಸಿರುವ ಪ್ರತಿಕ್ಷಣಾರ್ಥಿಗಳೇ ಮುಂದೆ ಶಿಕ್ಷಕರಾಗಲಿದ್ದಾರೆ. ಹಳ್ಳಿಯ ಜೀವನ ಶೈಲಿ ಕುರಿತು ತಿಳಿದುಕೊಳ್ಳುವುದರಿಂದ ಮುಂದೆ ಮಕ್ಕಳಿಗೆ ಮೌಲ್ಯೌಯುತ ಶಿಕ್ಷಣ ನೀಡಲು ಸಾಧ್ಯವಾಗಲಿದೆ ಎಂದರು.</p>.<p>ನಳಂದ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಟಿ.ಸಿ.ವೆಂಕಟೇಶ್ಗೌಡ, ಶಿಕ್ಷಕ ರಮೇಶ್, ಕತ್ತಿಮಾರಮ್ಮ ದೇವಾಲಯದ ಪ್ರಧಾನ ಅರ್ಚಕ ಶ್ರೀಧರ್ ದೀಕ್ಷಿತ್, ಬಿದಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ್.ಎ, ಮಕ್ಕಳ ತಜ್ಞ ಡಾ.ಎಸ್.ಸಂತೋಷ್, ಉಪನ್ಯಾಸಕರಾದ ಈಶ್ವರಪ್ಪ, ಪಾರ್ವತಮ್ಮ, ಪ್ರತಾಪ್ ರೆಡ್ದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>