ತಾಲ್ಲೂಕು ವೈದ್ಯಾಧಿಕಾರಿಗಳು ಹಾಗೂ ಸರ್ಕಾರಿ ಆಸ್ಪತ್ರೆಯ ವೈದ್ಯರು ರೋಗಿಗಳ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ. ರಕ್ತ ಮತ್ತು ಮೂತ್ರ ಪರೀಕ್ಷೆಗೆ ಕಳುಹಿಸಲಾಗಿದೆ. ಕಂಪನಿಯ ಆಹಾರ ಮಾದರಿಗಳನ್ನು ಕೂಡ ಪರಿಶೀಲನೆಗೆ ಕಳುಹಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಲಕ್ಕಾ ಕೃಷ್ಣ ರೆಡ್ಡಿ ತಿಳಿಸಿದ್ದಾರೆ.