<p><strong>ದೇವನಹಳ್ಳಿ</strong>: ಪಟ್ಟಣದ ರಾಣಿ ಸರ್ಕಲ್ ಬಳಿ ಇರುವ ಬುದ್ಧ, ಬಸವ, ಅಂಬೆಡ್ಕರ್ ಪ್ರತಿಮೆಗಳನ್ನು ಶನಿವಾರ ತಡರಾತ್ರಿ ವಿರೂಪಗೊಳಿಸಲು ಕಿಡಿಗೇಡಿಗಳು ಯತ್ನಿಸಿದ್ದಾರೆ ಎಂದು ಆರೋಪಿಸಿ ಅಂಬೇಡ್ಕರ್ ಸೇನೆ ಪದಾಧಿಕಾರಿಗಳು ಭಾನುವಾರ ಪ್ರತಿಭಟನೆ ನಡೆಸಿದರು.</p>.<p>ಸಂಘಟನೆ ರಾಜ್ಯಾಧ್ಯಕ್ಷ ಪಿ.ಮೂರ್ತಿ ಮಾತನಾಡಿ, 'ದಲಿತರಿಗೆ ಸೇರಿದ ಭೂಮಿಯಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಿ ಪೂಜಿಸುತ್ತಿದ್ದು, ವ್ಯವಸಾಯ ಮಾಡುತ್ತಿದ್ದಾರೆ. ಇದು ಬಹುಕೋಟಿ ಮೌಲ್ಯದ ಭೂಮಿಯಾಗಿರುವುದರಿಂದ ಭೂಮಿ ಸ್ವಾಧೀನದಾರರಿಗೆ ತೊಂದರೆ ನೀಡಲು ಈ ರೀತಿಯ ಕೃತ್ಯ ಎಸೆಗಿರುವ ಶಂಕೆ ಇದೆ' ಎಂದರು.</p>.<p>ಶನಿವಾರ ರಾತ್ರಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದಿರುವ ಕಿಡಿಗೇಡಿಗಳ ತಂಡ ಪ್ರತಿಮೆಗಳನ್ನು ಧ್ವಂಸ ಮಾಡಲು ಯತ್ನಿಸಿದೆ. ಅಲ್ಲಿಯೇ ಇದ್ದ ಹೂವಿನ ಕುಂಡಗಳನ್ನು ಹೊಡೆದು ಹಾಕಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಬಂಧಿಸುವಂತೆ ಒತ್ತಾಯಿಸಿದರು.</p>.<p>ನಾರಾಯಣಪ್ಪ ಮಾತನಾಡಿ, 'ಹತ್ತಾರು ವರ್ಷದಿಂದ ಈ ಭೂಮಿಯಲ್ಲಿದ್ದೇವೆ. ಜಮೀನಿನಲ್ಲಿ ವ್ಯಾಜ್ಯ ಸೃಷ್ಟಿಸಲು ಸಾಕಷ್ಟು ಜನರು ಬೆದರಿಕೆ ಹಾಕುತ್ತಿದ್ದಾರೆ. ಪದೇ ಪದೇ ಸಮಸ್ಯೆ ಉಂಟು ಮಾಡುತ್ತಿದ್ದಾರೆ. ಕುಟುಂಬಕ್ಕೆ ಪ್ರಾಣ ಭಯ ಎದುರಾಗಿದೆ. ರಕ್ಷಣೆ ನೀಡಬೇಕೆಂದು‘ ಮನವಿ ಮಾಡಿದರು.</p>.<p>ಅಂಬೇಡ್ಕರ್ ಸೇನೆ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಮಹಾಲಕ್ಷ್ಮಿ, ತಾಲ್ಲೂಕು ಘಟಕದ ಅಧ್ಯಕ್ಷ ರಾಯಸಂದ್ರ ಸೋಮು, ಚಿಕ್ಕಬಳ್ಳಾಪುರ ಜಿಲ್ಲಾ ಘಟಕದ ಅಧ್ಯಕ್ಷ ಪಿಳ್ಳಾಂಜಿನಪ್ಪ, ಚಿಕ್ಕಬಳ್ಳಾಪುರ ತಾಲ್ಲೂಕು ಅಧ್ಯಕ್ಷ ರಾಮಾಂಜಿನಪ್ಪ, ಶಿಢ್ಲಘಟ್ಟ ತಾಲ್ಲೂಕು ಅಧ್ಯಕ್ಷ ಕೃಷ್ಣಮೂರ್ತಿ, ಕೆಇಬಿ ನಂಜುಂಡಪ್ಪ, ವೆಂಕಟಲಕ್ಷ್ಮ್ಮಮ್ಮ ನಾರಾಯಣಮ್ಮ, ಶಿವಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ</strong>: ಪಟ್ಟಣದ ರಾಣಿ ಸರ್ಕಲ್ ಬಳಿ ಇರುವ ಬುದ್ಧ, ಬಸವ, ಅಂಬೆಡ್ಕರ್ ಪ್ರತಿಮೆಗಳನ್ನು ಶನಿವಾರ ತಡರಾತ್ರಿ ವಿರೂಪಗೊಳಿಸಲು ಕಿಡಿಗೇಡಿಗಳು ಯತ್ನಿಸಿದ್ದಾರೆ ಎಂದು ಆರೋಪಿಸಿ ಅಂಬೇಡ್ಕರ್ ಸೇನೆ ಪದಾಧಿಕಾರಿಗಳು ಭಾನುವಾರ ಪ್ರತಿಭಟನೆ ನಡೆಸಿದರು.</p>.<p>ಸಂಘಟನೆ ರಾಜ್ಯಾಧ್ಯಕ್ಷ ಪಿ.ಮೂರ್ತಿ ಮಾತನಾಡಿ, 'ದಲಿತರಿಗೆ ಸೇರಿದ ಭೂಮಿಯಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಿ ಪೂಜಿಸುತ್ತಿದ್ದು, ವ್ಯವಸಾಯ ಮಾಡುತ್ತಿದ್ದಾರೆ. ಇದು ಬಹುಕೋಟಿ ಮೌಲ್ಯದ ಭೂಮಿಯಾಗಿರುವುದರಿಂದ ಭೂಮಿ ಸ್ವಾಧೀನದಾರರಿಗೆ ತೊಂದರೆ ನೀಡಲು ಈ ರೀತಿಯ ಕೃತ್ಯ ಎಸೆಗಿರುವ ಶಂಕೆ ಇದೆ' ಎಂದರು.</p>.<p>ಶನಿವಾರ ರಾತ್ರಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದಿರುವ ಕಿಡಿಗೇಡಿಗಳ ತಂಡ ಪ್ರತಿಮೆಗಳನ್ನು ಧ್ವಂಸ ಮಾಡಲು ಯತ್ನಿಸಿದೆ. ಅಲ್ಲಿಯೇ ಇದ್ದ ಹೂವಿನ ಕುಂಡಗಳನ್ನು ಹೊಡೆದು ಹಾಕಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಬಂಧಿಸುವಂತೆ ಒತ್ತಾಯಿಸಿದರು.</p>.<p>ನಾರಾಯಣಪ್ಪ ಮಾತನಾಡಿ, 'ಹತ್ತಾರು ವರ್ಷದಿಂದ ಈ ಭೂಮಿಯಲ್ಲಿದ್ದೇವೆ. ಜಮೀನಿನಲ್ಲಿ ವ್ಯಾಜ್ಯ ಸೃಷ್ಟಿಸಲು ಸಾಕಷ್ಟು ಜನರು ಬೆದರಿಕೆ ಹಾಕುತ್ತಿದ್ದಾರೆ. ಪದೇ ಪದೇ ಸಮಸ್ಯೆ ಉಂಟು ಮಾಡುತ್ತಿದ್ದಾರೆ. ಕುಟುಂಬಕ್ಕೆ ಪ್ರಾಣ ಭಯ ಎದುರಾಗಿದೆ. ರಕ್ಷಣೆ ನೀಡಬೇಕೆಂದು‘ ಮನವಿ ಮಾಡಿದರು.</p>.<p>ಅಂಬೇಡ್ಕರ್ ಸೇನೆ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಮಹಾಲಕ್ಷ್ಮಿ, ತಾಲ್ಲೂಕು ಘಟಕದ ಅಧ್ಯಕ್ಷ ರಾಯಸಂದ್ರ ಸೋಮು, ಚಿಕ್ಕಬಳ್ಳಾಪುರ ಜಿಲ್ಲಾ ಘಟಕದ ಅಧ್ಯಕ್ಷ ಪಿಳ್ಳಾಂಜಿನಪ್ಪ, ಚಿಕ್ಕಬಳ್ಳಾಪುರ ತಾಲ್ಲೂಕು ಅಧ್ಯಕ್ಷ ರಾಮಾಂಜಿನಪ್ಪ, ಶಿಢ್ಲಘಟ್ಟ ತಾಲ್ಲೂಕು ಅಧ್ಯಕ್ಷ ಕೃಷ್ಣಮೂರ್ತಿ, ಕೆಇಬಿ ನಂಜುಂಡಪ್ಪ, ವೆಂಕಟಲಕ್ಷ್ಮ್ಮಮ್ಮ ನಾರಾಯಣಮ್ಮ, ಶಿವಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>