<p><strong>ಬೆಟ್ಟೇನಹಳ್ಳಿ(ದೇವನಹಳ್ಳಿ):</strong> ತಾಲ್ಲೂಕಿನ ಕುಂದಾಣ ಹೋಬಳಿಯ ಬೆಟ್ಟೇನಹಳ್ಳಿಯಲ್ಲಿ ರಾಮನವಮಿ ಪ್ರಸಾದ ಸೇವಿಸಿದ 400ಕ್ಕೂ ಹೆಚ್ಚು ಗ್ರಾಮಸ್ಥರ ಆರೋಗ್ಯ ಏರುಪೇರಾಗಿದೆ. ಅಸ್ವಸ್ಥರಾದ ನೂರಕ್ಕೂ ಹೆಚ್ಚು ಗ್ರಾಮಸ್ಥರನ್ನು ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ರಾಮನವಮಿ ಪ್ರಯುಕ್ತ ಶನಿವಾರ ಅನ್ನ ಪ್ರಸಾದ ವಿತರಿಸಲಾಗಿತ್ತು. ಪ್ರಸಾದ ಸೇವಿಸಿದ ಬಳಿಕ ರಾತ್ರಿಯೇ ಕೆಲವರಿಗೆ ಹೊಟ್ಟೆನೋವು, ವಾಂತಿ, ಬೇಧಿ ಶುರುವಾಗಿ ಸುಸ್ತಾಗಿದ್ದಾರೆ.</p>.<p>ಹಲವರನ್ನು ಸಮೀಪದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಂಭೀರವಾಗಿ ಅಸ್ವಸ್ಥರಾದವರನ್ನು ಆಂಬುಲೆನ್ಸ್ನಲ್ಲಿ ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಗ್ರಾಮದಲ್ಲಿ ಬೀಡುಬಿಟ್ಟಿರುವ ಆರೋಗ್ಯ ಸಿಬ್ಬಂದಿ ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ.</p>.<p>ಅನ್ನಪ್ರಸಾದ ಹಾಗೂ ಬಳಸಿದ ನೀರಿನ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿ ಶೀಘ್ರ ಲಭ್ಯವಾಗಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣರೆಡ್ಡಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಟ್ಟೇನಹಳ್ಳಿ(ದೇವನಹಳ್ಳಿ):</strong> ತಾಲ್ಲೂಕಿನ ಕುಂದಾಣ ಹೋಬಳಿಯ ಬೆಟ್ಟೇನಹಳ್ಳಿಯಲ್ಲಿ ರಾಮನವಮಿ ಪ್ರಸಾದ ಸೇವಿಸಿದ 400ಕ್ಕೂ ಹೆಚ್ಚು ಗ್ರಾಮಸ್ಥರ ಆರೋಗ್ಯ ಏರುಪೇರಾಗಿದೆ. ಅಸ್ವಸ್ಥರಾದ ನೂರಕ್ಕೂ ಹೆಚ್ಚು ಗ್ರಾಮಸ್ಥರನ್ನು ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ರಾಮನವಮಿ ಪ್ರಯುಕ್ತ ಶನಿವಾರ ಅನ್ನ ಪ್ರಸಾದ ವಿತರಿಸಲಾಗಿತ್ತು. ಪ್ರಸಾದ ಸೇವಿಸಿದ ಬಳಿಕ ರಾತ್ರಿಯೇ ಕೆಲವರಿಗೆ ಹೊಟ್ಟೆನೋವು, ವಾಂತಿ, ಬೇಧಿ ಶುರುವಾಗಿ ಸುಸ್ತಾಗಿದ್ದಾರೆ.</p>.<p>ಹಲವರನ್ನು ಸಮೀಪದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಂಭೀರವಾಗಿ ಅಸ್ವಸ್ಥರಾದವರನ್ನು ಆಂಬುಲೆನ್ಸ್ನಲ್ಲಿ ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಗ್ರಾಮದಲ್ಲಿ ಬೀಡುಬಿಟ್ಟಿರುವ ಆರೋಗ್ಯ ಸಿಬ್ಬಂದಿ ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ.</p>.<p>ಅನ್ನಪ್ರಸಾದ ಹಾಗೂ ಬಳಸಿದ ನೀರಿನ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿ ಶೀಘ್ರ ಲಭ್ಯವಾಗಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣರೆಡ್ಡಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>