<p><strong>ದೇವನಹಳ್ಳಿ</strong>: ತಾಲ್ಲೂಕಿನ ಬಿದಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆ ರಣರಂಗವಾಗಿ ಮಾರ್ಪಟ್ಟಿತ್ತು.</p><p>ಅಧ್ಯಕ್ಷಗಾದಿ ಹಿಡಿಯಲು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಎಲ್ಲ ಸದಸ್ಯರನ್ನು ಬಸ್ ಮೂಲಕ ಕರೆತಂದು ಮತದಾನ ಮಾಡಿಸಿದರು.</p><p>ಜಿದ್ದಾಜಿದ್ದಿಯಾಗಿ ನಡೆದ ಚುನಾವಣೆಯ ಫಲಿತಾಂಶ ಇನ್ನೇನು ಪ್ರಕಟವಾಗಬೇಕು ಎನ್ನುವಷ್ಟರಲ್ಲಿ ಬಿಗುವಿನ ವಾತಾವರಣ ಸೃಷ್ಟಿ ಆಯಿತು.</p><p>ಚುನಾವಣೆ ನಡೆಯುವ ವೇಳೆ ಮೊಬೈಲ್ ಪೋನ್ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಉಪಾಧ್ಯಕ್ಷೆ ಆಕಾಂಕ್ಷಿಯಾಗಿದ್ದ ಪರಾಜಿತ ಅಭ್ಯರ್ಥಿ ವರಲಕ್ಷ್ಮೀ ಅವರು ಫಲಿತಾಂಶ ಘೋಷಣೆಗೂ ಮೊದಲೆ ಗ್ರಾ.ಪಂ. ಕಚೇರಿಯಿಂದ ಹೊರಬಂದು ರಂಪಾಟ ಮಾಡಿದರು.</p><p>ತಮ್ಮ ಭಾವಚಿತ್ರವನ್ನು ಕಿಡಿಗೇಡಿಗಳು ಅಶ್ಲೀಲವಾಗಿ ಚಿತ್ರಿಸಿ ವ್ಯಾಟ್ಸ್ಆ್ಯಪ್ ಮೂಲಕ ಹರಿ ಬಿಟ್ಟಿದ್ದಾರೆ. ಈ ಮೂಲಕ ತಮ್ಮ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಚುನಾವಣಾ ಹಿಂದಿನ ದಿನ ಈ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ಪೊಲೀಸರ ಮುಂದೆ ಅಭ್ಯರ್ಥಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಇದರಿಂದ ಪಂಚಾಯಿತಿ ಆವರಣದಲ್ಲಿ ಬಿಗುವಿನ ವಾತಾವರಣ ಸೃಷ್ಟಿ ಆಯಿತು.</p><p>ಪಂಚಾಯಿತಿ ಕಚೇರಿ ಆವರಣದಲ್ಲಿ ಜನರು ಜಮಾವಣೆಯಾದರು. ಎಚ್ಚೆತ್ತ ಪೊಲೀಸರು ಜನರ ಗುಂಪು ಚದುರಿಸಿ, ಪರಿಸ್ಥಿತಿ ತಿಳಿಗೊಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ</strong>: ತಾಲ್ಲೂಕಿನ ಬಿದಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆ ರಣರಂಗವಾಗಿ ಮಾರ್ಪಟ್ಟಿತ್ತು.</p><p>ಅಧ್ಯಕ್ಷಗಾದಿ ಹಿಡಿಯಲು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಎಲ್ಲ ಸದಸ್ಯರನ್ನು ಬಸ್ ಮೂಲಕ ಕರೆತಂದು ಮತದಾನ ಮಾಡಿಸಿದರು.</p><p>ಜಿದ್ದಾಜಿದ್ದಿಯಾಗಿ ನಡೆದ ಚುನಾವಣೆಯ ಫಲಿತಾಂಶ ಇನ್ನೇನು ಪ್ರಕಟವಾಗಬೇಕು ಎನ್ನುವಷ್ಟರಲ್ಲಿ ಬಿಗುವಿನ ವಾತಾವರಣ ಸೃಷ್ಟಿ ಆಯಿತು.</p><p>ಚುನಾವಣೆ ನಡೆಯುವ ವೇಳೆ ಮೊಬೈಲ್ ಪೋನ್ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಉಪಾಧ್ಯಕ್ಷೆ ಆಕಾಂಕ್ಷಿಯಾಗಿದ್ದ ಪರಾಜಿತ ಅಭ್ಯರ್ಥಿ ವರಲಕ್ಷ್ಮೀ ಅವರು ಫಲಿತಾಂಶ ಘೋಷಣೆಗೂ ಮೊದಲೆ ಗ್ರಾ.ಪಂ. ಕಚೇರಿಯಿಂದ ಹೊರಬಂದು ರಂಪಾಟ ಮಾಡಿದರು.</p><p>ತಮ್ಮ ಭಾವಚಿತ್ರವನ್ನು ಕಿಡಿಗೇಡಿಗಳು ಅಶ್ಲೀಲವಾಗಿ ಚಿತ್ರಿಸಿ ವ್ಯಾಟ್ಸ್ಆ್ಯಪ್ ಮೂಲಕ ಹರಿ ಬಿಟ್ಟಿದ್ದಾರೆ. ಈ ಮೂಲಕ ತಮ್ಮ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಚುನಾವಣಾ ಹಿಂದಿನ ದಿನ ಈ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ಪೊಲೀಸರ ಮುಂದೆ ಅಭ್ಯರ್ಥಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಇದರಿಂದ ಪಂಚಾಯಿತಿ ಆವರಣದಲ್ಲಿ ಬಿಗುವಿನ ವಾತಾವರಣ ಸೃಷ್ಟಿ ಆಯಿತು.</p><p>ಪಂಚಾಯಿತಿ ಕಚೇರಿ ಆವರಣದಲ್ಲಿ ಜನರು ಜಮಾವಣೆಯಾದರು. ಎಚ್ಚೆತ್ತ ಪೊಲೀಸರು ಜನರ ಗುಂಪು ಚದುರಿಸಿ, ಪರಿಸ್ಥಿತಿ ತಿಳಿಗೊಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>