<p><strong>ದೇವನಹಳ್ಳಿ:</strong> ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಸಾವಿರ ದಿನ ಪೂರೈಸಿದೆ. ಆದರೆ ಅಭಿವೃದ್ಧಿಯ ವಿಚಾರದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಂಸದ ಎಸ್. ಮುನಿಸ್ವಾಮಿ ಆರೋಪಿಸಿದರು.</p>.<p>ಸಾವಿರ ದಿನಗಳ ಸಂಭ್ರಮ ಆಚರಿಸುತ್ತಿರುವ ಸರ್ಕಾರ ಪಂಚ ಗ್ಯಾರಂಟಿಗಳನ್ನು ಹೊರತುಪಡಿಸಿ ಯಾವುದೇ ಮಹತ್ವದ ಹೊಸ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಘೋಷಿತ ಯೋಜನೆಗಳೂ ಸಮರ್ಪಕವಾಗಿ ಜನರಿಗೆ ತಲುಪುತ್ತಿಲ್ಲ. ರಾಜ್ಯದ ಅಭಿವೃದ್ಧಿ ಕನಸಿನ ಮಾತಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದರು.</p>.<p>ಬೆಲೆ ಏರಿಕೆ ನಿಯಂತ್ರಣದಲ್ಲಿ ಸರ್ಕಾರ ವಿಫಲವಾಗಿದೆ. ಆಡಳಿತದಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮಗಳೇ ಹೆಚ್ಚಾಗಿವೆ ಎಂಬ ಆರೋಪವನ್ನೂ ಅವರು ಮಾಡಿದರು. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ದುರ್ಬಲಗೊಂಡಿದೆ ಎಂದು ಹೇಳಿದರು.</p>.<p>ಸರ್ಕಾರಿ ಇಲಾಖೆಗಳಲ್ಲಿರುವ ಎರಡು ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದರೂ ಅವುಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿಲ್ಲ. ವಿವಿಧ ಅನುಮತಿಗಳ ಹೆಸರಿನಲ್ಲಿ ಜನರನ್ನು ಕಚೇರಿಗಳ ಸುತ್ತಾಟಕ್ಕೆ ತಳ್ಳಲಾಗುತ್ತಿದೆ ಎಂದು ಆರೋಪಿಸಿದರು. ಧಾರ್ಮಿಕ ವಿಚಾರಗಳಲ್ಲಿ ಸರ್ಕಾರದ ನಡೆ ಪಕ್ಷಪಾತಪೂರ್ಣವಾಗಿದೆ ಎಂದು ಅವರು ಹೇಳಿದರು.</p>.<p>ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ಆಡಳಿತ ವ್ಯವಸ್ಥೆಯಲ್ಲಿ ಕಾರ್ಯಕ್ಷಮತೆ ಕಾಣುತ್ತಿಲ್ಲ. ಸರ್ವೇ, ಖಾತೆ, ಇಸ್ವತ್ತು ಸೇರಿದಂತೆ ವಿವಿಧ ಕಚೇರಿಗಳಲ್ಲಿ ಕೆಲಸಗಳು ವಿಳಂಬವಾಗುತ್ತಿವೆ. ಲಂಚ-ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಬಿಜೆಪಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಎಂ. ರವಿಕುಮಾರ್, ತಾಲೂಕು ಮಂಡಲ ಅಧ್ಯಕ್ಷ ಅಂಬರೀಶ್ ಗೌಡ ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಸಾವಿರ ದಿನ ಪೂರೈಸಿದೆ. ಆದರೆ ಅಭಿವೃದ್ಧಿಯ ವಿಚಾರದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಂಸದ ಎಸ್. ಮುನಿಸ್ವಾಮಿ ಆರೋಪಿಸಿದರು.</p>.<p>ಸಾವಿರ ದಿನಗಳ ಸಂಭ್ರಮ ಆಚರಿಸುತ್ತಿರುವ ಸರ್ಕಾರ ಪಂಚ ಗ್ಯಾರಂಟಿಗಳನ್ನು ಹೊರತುಪಡಿಸಿ ಯಾವುದೇ ಮಹತ್ವದ ಹೊಸ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಘೋಷಿತ ಯೋಜನೆಗಳೂ ಸಮರ್ಪಕವಾಗಿ ಜನರಿಗೆ ತಲುಪುತ್ತಿಲ್ಲ. ರಾಜ್ಯದ ಅಭಿವೃದ್ಧಿ ಕನಸಿನ ಮಾತಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದರು.</p>.<p>ಬೆಲೆ ಏರಿಕೆ ನಿಯಂತ್ರಣದಲ್ಲಿ ಸರ್ಕಾರ ವಿಫಲವಾಗಿದೆ. ಆಡಳಿತದಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮಗಳೇ ಹೆಚ್ಚಾಗಿವೆ ಎಂಬ ಆರೋಪವನ್ನೂ ಅವರು ಮಾಡಿದರು. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ದುರ್ಬಲಗೊಂಡಿದೆ ಎಂದು ಹೇಳಿದರು.</p>.<p>ಸರ್ಕಾರಿ ಇಲಾಖೆಗಳಲ್ಲಿರುವ ಎರಡು ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದರೂ ಅವುಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿಲ್ಲ. ವಿವಿಧ ಅನುಮತಿಗಳ ಹೆಸರಿನಲ್ಲಿ ಜನರನ್ನು ಕಚೇರಿಗಳ ಸುತ್ತಾಟಕ್ಕೆ ತಳ್ಳಲಾಗುತ್ತಿದೆ ಎಂದು ಆರೋಪಿಸಿದರು. ಧಾರ್ಮಿಕ ವಿಚಾರಗಳಲ್ಲಿ ಸರ್ಕಾರದ ನಡೆ ಪಕ್ಷಪಾತಪೂರ್ಣವಾಗಿದೆ ಎಂದು ಅವರು ಹೇಳಿದರು.</p>.<p>ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ಆಡಳಿತ ವ್ಯವಸ್ಥೆಯಲ್ಲಿ ಕಾರ್ಯಕ್ಷಮತೆ ಕಾಣುತ್ತಿಲ್ಲ. ಸರ್ವೇ, ಖಾತೆ, ಇಸ್ವತ್ತು ಸೇರಿದಂತೆ ವಿವಿಧ ಕಚೇರಿಗಳಲ್ಲಿ ಕೆಲಸಗಳು ವಿಳಂಬವಾಗುತ್ತಿವೆ. ಲಂಚ-ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಬಿಜೆಪಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಎಂ. ರವಿಕುಮಾರ್, ತಾಲೂಕು ಮಂಡಲ ಅಧ್ಯಕ್ಷ ಅಂಬರೀಶ್ ಗೌಡ ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>