<p><strong>ಚನ್ನರಾಯಪಟ್ಟಣ (ದೇವನಹಳ್ಳಿ):</strong> ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಯಲಿಯೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಬಿದಿದ್ದ ರಾಶಿ ಕಸವನ್ನು ಯಲಿಯೂರು ಗ್ರಾಮ ಪಂಚಾಯಿತಿ ಸಿಬ್ಬಂದಿ ಭಾನುವಾರ ಮುಂಜಾನೆ ತೆರವುಗೊಳಿಸಿದರು.</p>.<p>ಜ.19 ರಂದು ‘ಯಲಿಯೂರು ರಸ್ತೆ ಬದಿ ಕಸ’ ಎಂಬ ಶೀರ್ಷಿಕೆ ಅಡಿ ‘ಪ್ರಜಾವಾಣಿ’ ಸುದ್ದಿ ಪ್ರಕಟಿಸಿತ್ತು. ಇದರಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು, ಕಸ ವಿಲೇವಾರಿ ಕಾರ್ಯವೂ ಸಮರೋಪಾದಿಯಲ್ಲಿ ಭಾನುವಾರ ಮುಂಜಾನೆಯಲ್ಲಿಯೇ ಆರಂಭಿಸಿದ್ದಾರೆ.</p>.<p>ಯಲಿಯೂರು ಪಂಚಾಯಿತಿಯ ಕಸ ವಿಲೇವಾರಿ ಸಿಬ್ಬಂದಿ ವಾಹನದೊಂದಿಗೆ ಆಗಮಿಸಿ ಮುಖ್ಯರಸ್ತೆಯ ಇಕ್ಕೆಲಗಳಲ್ಲಿ ಬಿದಿದ್ದ ಕಸವನ್ನು ವಿಲೇವಾರಿ ಮಾಡಿದ್ದಾರೆ. ಸಾರ್ವಜನಿಕರು ಕಸ ಸಂಗ್ರಹ ವಾಹಕ್ಕೆ ಕಸವನ್ನು ನೀಡಬೇಕು ರಸ್ತೆಯ ಬದಿಗಳಲ್ಲಿ ಕಸವನ್ನು ತಂದು ಸುರಿಯಬಾರದು ಎಂದು ಮನವಿ ಮಾಡಿದ್ದಾರೆ.</p>.<p>ನಿಯಮಮೀರಿ ಕಸವನ್ನು ರಸ್ತೆಯ ಇಕ್ಕೆಲ್ಲಗಳನ್ನು ಹಾಕುವವರಿಗೆ ಕಾನೂನಾತ್ಮಕವಾಗಿ ದಂಡ ವಿಧಿಸಲಾಗುತ್ತದೆ ಎಂದು ಯಲಿಯೂರು ಪಂಚಾಯಿತಿ ಎಚ್ಚರಿಕೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನರಾಯಪಟ್ಟಣ (ದೇವನಹಳ್ಳಿ):</strong> ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಯಲಿಯೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಬಿದಿದ್ದ ರಾಶಿ ಕಸವನ್ನು ಯಲಿಯೂರು ಗ್ರಾಮ ಪಂಚಾಯಿತಿ ಸಿಬ್ಬಂದಿ ಭಾನುವಾರ ಮುಂಜಾನೆ ತೆರವುಗೊಳಿಸಿದರು.</p>.<p>ಜ.19 ರಂದು ‘ಯಲಿಯೂರು ರಸ್ತೆ ಬದಿ ಕಸ’ ಎಂಬ ಶೀರ್ಷಿಕೆ ಅಡಿ ‘ಪ್ರಜಾವಾಣಿ’ ಸುದ್ದಿ ಪ್ರಕಟಿಸಿತ್ತು. ಇದರಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು, ಕಸ ವಿಲೇವಾರಿ ಕಾರ್ಯವೂ ಸಮರೋಪಾದಿಯಲ್ಲಿ ಭಾನುವಾರ ಮುಂಜಾನೆಯಲ್ಲಿಯೇ ಆರಂಭಿಸಿದ್ದಾರೆ.</p>.<p>ಯಲಿಯೂರು ಪಂಚಾಯಿತಿಯ ಕಸ ವಿಲೇವಾರಿ ಸಿಬ್ಬಂದಿ ವಾಹನದೊಂದಿಗೆ ಆಗಮಿಸಿ ಮುಖ್ಯರಸ್ತೆಯ ಇಕ್ಕೆಲಗಳಲ್ಲಿ ಬಿದಿದ್ದ ಕಸವನ್ನು ವಿಲೇವಾರಿ ಮಾಡಿದ್ದಾರೆ. ಸಾರ್ವಜನಿಕರು ಕಸ ಸಂಗ್ರಹ ವಾಹಕ್ಕೆ ಕಸವನ್ನು ನೀಡಬೇಕು ರಸ್ತೆಯ ಬದಿಗಳಲ್ಲಿ ಕಸವನ್ನು ತಂದು ಸುರಿಯಬಾರದು ಎಂದು ಮನವಿ ಮಾಡಿದ್ದಾರೆ.</p>.<p>ನಿಯಮಮೀರಿ ಕಸವನ್ನು ರಸ್ತೆಯ ಇಕ್ಕೆಲ್ಲಗಳನ್ನು ಹಾಕುವವರಿಗೆ ಕಾನೂನಾತ್ಮಕವಾಗಿ ದಂಡ ವಿಧಿಸಲಾಗುತ್ತದೆ ಎಂದು ಯಲಿಯೂರು ಪಂಚಾಯಿತಿ ಎಚ್ಚರಿಕೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>