ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಿಂಗಪುರದಿಂದ ಆಗಮಿಸಿದ್ದ ಪ್ರಯಾಣಿಕನೊಬ್ಬ ಪೆಸ್ಟ್ ರೂಪದ ಚಿನ್ನವನ್ನು ಕಳ್ಳ ಸಾಗಣೆ ಮಾಡುವಾಗ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಹಿಂದಿನ ಪ್ರಕರಣದ ಆಧಾರದಲ್ಲಿ ತೀವ್ರ ತಪಾಸಣೆಗೆ ಒಳಪಡಿಸಿದಾಗ ಸಿಂಗಪುರದಿಂದ ಕಳೆದ ಗುರುವಾರ (ಏ.25)ರಂದು ಆಗಮಿಸಿದ್ದ ಪ್ರಯಾಣಿಕನೊಬ್ಬ 799.37 ಗ್ರಾಂ ಚಿನ್ನವನ್ನು ಕಳ್ಳ ಸಾಗಣೆ ಮಾಡಲು ಯತ್ನಿಸಿದ್ದಾರೆ.
ಆರೋಪಿ ಪೆಸ್ಟ್ ರೂಪದ ಚಿನ್ನವನ್ನು ಒಳ ಉಡುಪಿನಲ್ಲಿ ಇರಿಸಿಕೊಂಡು ಸಾಗಣೆ ಮಾಡಲು ಯತ್ನಿಸಿದ್ದು ಶೋಧನೆ ವೇಳೆಯಲ್ಲಿ ಪತ್ತೆಯಾಗಿದೆ. ಜಪ್ತಿ ಮಾಡಿದ ಚಿನ್ನದ ಮೌಲ್ಯ ₹ 55.15 ಲಕ್ಷ ಎಂದು ತಿಳಿದು ಬಂದಿದೆ. ಹೆಚ್ಚಿನ ತನಿಖೆಗಾಗಿ ಚಿನ್ನ ಕಳ್ಳಸಾಗಣೆ ಆರೋಪದಡಿ ಪ್ರಯಾಣಿಕನನ್ನು ಬಂಧಿಸಲಾಗಿದೆ.