<p><strong>ದೇವನಹಳ್ಳಿ</strong>: ಒಳ ಮೀಸಲು ಜಾರಿಗೆ ಸುಪ್ರೀಂ ಕೋರ್ಟ್ ಆದೇಶ ಮಾಡಿ ವರ್ಷ ಪೂರ್ಣಗೊಳ್ಳುತ್ತಿದ್ದು, ಆಗಸ್ಟ್ 15ರೊಳಗೆ ಮೀಸಲಾತಿ ಅನುಷ್ಠಾನ ಮಾಡಬೇಕು. ಇಲ್ಲದಿದ್ದರೆ ರಾಜ್ಯ ಬಂದ್ ಮಾಡಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಕರ್ನಾಟಕ ರಾಜ್ಯ ಮಾದಿಗ ದಂಡೋರ ಪ್ರಚಾರ ಸಮಿತಿ ಎಚ್ಚರಿಸಿದೆ.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ಬುಳ್ಳಹಳ್ಳಿ ಎಂ ರಾಜಪ್ಪ ಮಾತನಾಡಿ, ಆಗಸ್ಟ್ 1 ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಆಗಸ್ಟ್ 15ರ ಗಡುವು ಕೊಡುತ್ತಿದ್ದೇವೆ. ಒಂದು ವೇಳೆ ರಾಜ್ಯ ಸರ್ಕಾರ, ಈಗಲೂ ಎಚ್ಚೆತ್ತುಕೊಳ್ಳದಿದ್ದರೆ, 15 ರ ನಂತರ ರಾಜ್ಯ ಬಂದ್ ಮಾಡುವ ಮೂಲಕ ಹೋರಾಟವನ್ನು ತೀವ್ರ ಸ್ವರೂಪಕ್ಕೆ ಕೊಂಡೊಯ್ಯುವುದು ಅನಿವಾರ್ಯವಾಗಲಿದೆ. ಮುಂದೆ ಆಗುವಂತಹ ಅನಾಹುತಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದರು.</p>.<p>ಆಗಸ್ಟ್ 1 ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಕರ್ನಾಟಕ ಮಾದಿಗ ದಂಡೋರ ರಾಜ್ಯಾಧ್ಯಕ್ಷ ಶಂಕರಪ್ಪ ಸೇರಿದಂತೆ ಜಿಲ್ಲೆಯ ನಾಲ್ಕೂ ತಾಲ್ಲೂಕುಗಳಿಂದ ಸಾವಿರಾರು ಸಂಖ್ಯೆಯಲ್ಲಿ ಮಾದಿಗ ಸಮುದಾಯದವರು ಭಾಗವಹಿಸಲಿದ್ದಾರೆ ಎಂದರು.</p>.<p>ಒಳ ಮೀಸಲಾತಿ ಜಾರಿಗೆ ಸುಪ್ರೀಂ ಕೋರ್ಟ್ ಆದೇಶ ಮಾಡಿದ್ದರೂ, ರಾಜ್ಯ ಸರ್ಕಾರ, ಪ್ರಭಾವಿತ ಸಮುದಾಯಗಳ ಕಪಿಮುಷ್ಠಿಯಲ್ಲಿ ಸಿಲುಕಿ, ವಿನಾಕಾರಣ, ಜಾತಿ ಸಮೀಕ್ಷೆಯ ಹೆಸರಿನಲ್ಲಿ ವರದಿ ಅನುಷ್ಠಾನ ಮಾಡದೆ ಮೀನಾಮೇಷ ಅನುಸರಿಸುತ್ತಿದೆ ಎಂದು ದೂರಿದರು.</p>.<p>ಸರ್ಕಾರವೇ ನಡೆಸುತ್ತಿರುವ ಸಮೀಕ್ಷೆಯ ವರದಿಯನ್ನು ತರಿಸಿಕೊಳ್ಳಲು ನೆಪ ಹೇಳುವುದು ಸರಿಯಲ್ಲ. 60 ದಿನಗಳಲ್ಲಿ ವರದಿ ತಯಾರಿಸಲು ಸಮಿತಿ ರಚಿಸಿದೆಯಾದರೂ, ಇದುವರೆಗೂ ವರದಿ ಸಮಿತಿಯ ಕೈ ಸೇರದಿರುವುದು ವಿಪರ್ಯಾಸ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಿಸಿದರು.</p>.<p>ಮುಖಂಡರಾದ ಮುದುಗುರ್ಕಿ ನರಸಿಂಹಮೂರ್ತಿ, ಮುನಿರಾಜು, ಪ್ರಕಾಶ್, ಕೇಶವ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ</strong>: ಒಳ ಮೀಸಲು ಜಾರಿಗೆ ಸುಪ್ರೀಂ ಕೋರ್ಟ್ ಆದೇಶ ಮಾಡಿ ವರ್ಷ ಪೂರ್ಣಗೊಳ್ಳುತ್ತಿದ್ದು, ಆಗಸ್ಟ್ 15ರೊಳಗೆ ಮೀಸಲಾತಿ ಅನುಷ್ಠಾನ ಮಾಡಬೇಕು. ಇಲ್ಲದಿದ್ದರೆ ರಾಜ್ಯ ಬಂದ್ ಮಾಡಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಕರ್ನಾಟಕ ರಾಜ್ಯ ಮಾದಿಗ ದಂಡೋರ ಪ್ರಚಾರ ಸಮಿತಿ ಎಚ್ಚರಿಸಿದೆ.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ಬುಳ್ಳಹಳ್ಳಿ ಎಂ ರಾಜಪ್ಪ ಮಾತನಾಡಿ, ಆಗಸ್ಟ್ 1 ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಆಗಸ್ಟ್ 15ರ ಗಡುವು ಕೊಡುತ್ತಿದ್ದೇವೆ. ಒಂದು ವೇಳೆ ರಾಜ್ಯ ಸರ್ಕಾರ, ಈಗಲೂ ಎಚ್ಚೆತ್ತುಕೊಳ್ಳದಿದ್ದರೆ, 15 ರ ನಂತರ ರಾಜ್ಯ ಬಂದ್ ಮಾಡುವ ಮೂಲಕ ಹೋರಾಟವನ್ನು ತೀವ್ರ ಸ್ವರೂಪಕ್ಕೆ ಕೊಂಡೊಯ್ಯುವುದು ಅನಿವಾರ್ಯವಾಗಲಿದೆ. ಮುಂದೆ ಆಗುವಂತಹ ಅನಾಹುತಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದರು.</p>.<p>ಆಗಸ್ಟ್ 1 ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಕರ್ನಾಟಕ ಮಾದಿಗ ದಂಡೋರ ರಾಜ್ಯಾಧ್ಯಕ್ಷ ಶಂಕರಪ್ಪ ಸೇರಿದಂತೆ ಜಿಲ್ಲೆಯ ನಾಲ್ಕೂ ತಾಲ್ಲೂಕುಗಳಿಂದ ಸಾವಿರಾರು ಸಂಖ್ಯೆಯಲ್ಲಿ ಮಾದಿಗ ಸಮುದಾಯದವರು ಭಾಗವಹಿಸಲಿದ್ದಾರೆ ಎಂದರು.</p>.<p>ಒಳ ಮೀಸಲಾತಿ ಜಾರಿಗೆ ಸುಪ್ರೀಂ ಕೋರ್ಟ್ ಆದೇಶ ಮಾಡಿದ್ದರೂ, ರಾಜ್ಯ ಸರ್ಕಾರ, ಪ್ರಭಾವಿತ ಸಮುದಾಯಗಳ ಕಪಿಮುಷ್ಠಿಯಲ್ಲಿ ಸಿಲುಕಿ, ವಿನಾಕಾರಣ, ಜಾತಿ ಸಮೀಕ್ಷೆಯ ಹೆಸರಿನಲ್ಲಿ ವರದಿ ಅನುಷ್ಠಾನ ಮಾಡದೆ ಮೀನಾಮೇಷ ಅನುಸರಿಸುತ್ತಿದೆ ಎಂದು ದೂರಿದರು.</p>.<p>ಸರ್ಕಾರವೇ ನಡೆಸುತ್ತಿರುವ ಸಮೀಕ್ಷೆಯ ವರದಿಯನ್ನು ತರಿಸಿಕೊಳ್ಳಲು ನೆಪ ಹೇಳುವುದು ಸರಿಯಲ್ಲ. 60 ದಿನಗಳಲ್ಲಿ ವರದಿ ತಯಾರಿಸಲು ಸಮಿತಿ ರಚಿಸಿದೆಯಾದರೂ, ಇದುವರೆಗೂ ವರದಿ ಸಮಿತಿಯ ಕೈ ಸೇರದಿರುವುದು ವಿಪರ್ಯಾಸ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಿಸಿದರು.</p>.<p>ಮುಖಂಡರಾದ ಮುದುಗುರ್ಕಿ ನರಸಿಂಹಮೂರ್ತಿ, ಮುನಿರಾಜು, ಪ್ರಕಾಶ್, ಕೇಶವ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>