<p>ದೇವನಹಳ್ಳಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ನೌಕರರು ಶುಕ್ರವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.</p>.<p>ರಾಜ್ಯ ಸರ್ಕಾರ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ನೌಕರರು, ಹಲವು ತಿಂಗಳಿಂದ ಬಾಕಿ ಉಳಿದಿರುವ ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕು ಎಂದು ಆಗ್ರಹಿಸಿದರು. ಬಳಿಕ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಕಳೆದ ಡಿಸೆಂಬರ್ 20ರಿಂದ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ ನಡೆಸಿದ ಸಂದರ್ಭದಲ್ಲಿ ಅಧಿಕಾರಿಗಳು ನೀಡಿದ ಭರವಸೆಗಳನ್ನು ಇನ್ನೂ ಈಡೇರಿಸಿಲ್ಲ. 19 ಬೇಡಿಕೆಗಳಲ್ಲಿ ಪ್ರಮುಖವಾದ 7 ಬೇಡಿಕೆಗಳನ್ನು ಶೀಘ್ರ ಪರಿಹರಿಸುವುದಾಗಿ ಹೇಳಿದ್ದರೂ, ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಷಾದನೀಯ ಎಂದು ಹೇಳಿದರು.</p>.<p>ಮುಖ್ಯ ಬೇಡಿಕೆಗಳಲ್ಲಿ ಎಲ್ಲಾ ನೌಕರರಿಗೆ ₹5,000 ವೇತನ ಹೆಚ್ಚಳ, ನಿವೃತ್ತಿ ಅಥವಾ ನಿಧನ ಹೊಂದಿದ ನೌಕರರ ಕುಟುಂಬಕ್ಕೆ ₹6 ಲಕ್ಷ ಪರಿಹಾರ, ಸೇವಾ ಹಿರಿತನ ಆಧಾರಿತ ವೇತನ, ಸ್ವಚ್ಛವಾಹಿನಿ ನೌಕರರ ಸಮಸ್ಯೆಗಳ ಪರಿಹಾರ, ಪ್ರತಿ ಪಂಚಾಯತಿಗೆ ಲೆಕ್ಕ ಸಹಾಯಕ ಹುದ್ದೆ ಭರ್ತಿ, ದೀರ್ಘಕಾಲ ಸೇವೆ ಸಲ್ಲಿಸಿರುವ ಡೇಟಾ ಎಂಟ್ರಿ ಆಪರೇಟರ್ಗಳಿಗೆ ಮಾನ್ಯತೆ ಹಾಗೂ ಹೆಚ್ಚುವರಿ ನೇಮಕಾತಿ ಸೇರಿವೆ. ಈ ಮನವಿಗೂ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ‘ಬೆಂಗಳೂರು ಚಲೋ’ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.</p>.<p>ರಾಜ್ಯ ಗ್ರಾಪಂ ನೌಕರರ ಸಂಘದ ದ ಟಿ.ಎಂ. ನಟರಾಜು, ಗೋಪಾಲಕೃಷ್ಣ ಹರಳಹಳ್ಳಿ, ಎಂ.ಶ್ರೀನಿವಾಸ್, ಮೋಹನ್ ಬಾಬು ಎಚ್.ಎನ್., ವಿಶ್ವನಾಥ್, ಮುರಳೀಶ್, ಮುನಿರಾಜು, ಪಿ.ಎ. ವೆಂಕಟೇಶ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-15-168066568</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇವನಹಳ್ಳಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ನೌಕರರು ಶುಕ್ರವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.</p>.<p>ರಾಜ್ಯ ಸರ್ಕಾರ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ನೌಕರರು, ಹಲವು ತಿಂಗಳಿಂದ ಬಾಕಿ ಉಳಿದಿರುವ ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕು ಎಂದು ಆಗ್ರಹಿಸಿದರು. ಬಳಿಕ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಕಳೆದ ಡಿಸೆಂಬರ್ 20ರಿಂದ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ ನಡೆಸಿದ ಸಂದರ್ಭದಲ್ಲಿ ಅಧಿಕಾರಿಗಳು ನೀಡಿದ ಭರವಸೆಗಳನ್ನು ಇನ್ನೂ ಈಡೇರಿಸಿಲ್ಲ. 19 ಬೇಡಿಕೆಗಳಲ್ಲಿ ಪ್ರಮುಖವಾದ 7 ಬೇಡಿಕೆಗಳನ್ನು ಶೀಘ್ರ ಪರಿಹರಿಸುವುದಾಗಿ ಹೇಳಿದ್ದರೂ, ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಷಾದನೀಯ ಎಂದು ಹೇಳಿದರು.</p>.<p>ಮುಖ್ಯ ಬೇಡಿಕೆಗಳಲ್ಲಿ ಎಲ್ಲಾ ನೌಕರರಿಗೆ ₹5,000 ವೇತನ ಹೆಚ್ಚಳ, ನಿವೃತ್ತಿ ಅಥವಾ ನಿಧನ ಹೊಂದಿದ ನೌಕರರ ಕುಟುಂಬಕ್ಕೆ ₹6 ಲಕ್ಷ ಪರಿಹಾರ, ಸೇವಾ ಹಿರಿತನ ಆಧಾರಿತ ವೇತನ, ಸ್ವಚ್ಛವಾಹಿನಿ ನೌಕರರ ಸಮಸ್ಯೆಗಳ ಪರಿಹಾರ, ಪ್ರತಿ ಪಂಚಾಯತಿಗೆ ಲೆಕ್ಕ ಸಹಾಯಕ ಹುದ್ದೆ ಭರ್ತಿ, ದೀರ್ಘಕಾಲ ಸೇವೆ ಸಲ್ಲಿಸಿರುವ ಡೇಟಾ ಎಂಟ್ರಿ ಆಪರೇಟರ್ಗಳಿಗೆ ಮಾನ್ಯತೆ ಹಾಗೂ ಹೆಚ್ಚುವರಿ ನೇಮಕಾತಿ ಸೇರಿವೆ. ಈ ಮನವಿಗೂ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ‘ಬೆಂಗಳೂರು ಚಲೋ’ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.</p>.<p>ರಾಜ್ಯ ಗ್ರಾಪಂ ನೌಕರರ ಸಂಘದ ದ ಟಿ.ಎಂ. ನಟರಾಜು, ಗೋಪಾಲಕೃಷ್ಣ ಹರಳಹಳ್ಳಿ, ಎಂ.ಶ್ರೀನಿವಾಸ್, ಮೋಹನ್ ಬಾಬು ಎಚ್.ಎನ್., ವಿಶ್ವನಾಥ್, ಮುರಳೀಶ್, ಮುನಿರಾಜು, ಪಿ.ಎ. ವೆಂಕಟೇಶ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-15-168066568</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>