<p>ದೇವನಹಳ್ಳಿ: ಗ್ರಾಮೀಣ ಹಾಗೂ ದುರ್ಗಮ ಪ್ರದೇಶಗಳ ಜನರಿಗೆ ತ್ವರಿತ ಆರೋಗ್ಯ ಸೇವೆ ತಲುಪಿಸಲು ಸಂಚಾರಿ ಇ-ಬೈಕ್ಗಳು ಸಹಕಾರಿ ಆಗಲಿವೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸಂತಿ ಅಮರ್ ಹೇಳಿದರು.</p>.<p>‘ಆಪ್ಟಮ್ ಇಂಡಿಯಾ’, ‘ಯುನೈಟೆಡ್ ವೇ ಬೆಂಗಳೂರು’ ಸಂಸ್ಥೆಗಳ ಸಿಎಸ್ಆರ್ ಅನುದಾನದಡಿ ನೀಡಿರುವ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 45 ಇ-ಬೈಕ್ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ರಾಜ್ಯ ಸರ್ಕಾರ ಈಗಾಗಲೇ ‘ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕ’ ಯೋಜನೆಯನ್ನು ಜಾರಿಗೊಳಿಸಿದ್ದು, ಅದಕ್ಕೆ ಪೂರಕವಾಗಿ ಇ-ಬೈಕ್ಗಳ ವಿತರಣೆ ಗ್ರಾಮೀಣ ಆರೋಗ್ಯ ಸೇವೆಗಳಿಗೆ ಮತ್ತಷ್ಟು ಬಲ ನೀಡಲಿದೆ ಎಂದರು.</p>.<p>ಗ್ರಾಮೀಣ ಭಾಗಗಳಲ್ಲಿ ಸಾರಿಗೆ ಸೌಲಭ್ಯಗಳ ಕೊರತೆಯಿಂದ ತುರ್ತು ಆರೋಗ್ಯ ಸೇವೆಗಳಲ್ಲಿ ವಿಳಂಬ ಉಂಟಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಆರೋಗ್ಯ ಸಿಬ್ಬಂದಿಗೆ ಇ-ಬೈಕ್ಗಳು ಪರಿಣಾಮಕಾರಿಯಾಗಿ ನೆರವಾಗಲಿವೆ. ಆಸ್ಪತ್ರೆಗೆ ತೆರಳಲು ಸಾಧ್ಯವಾಗದ ರೋಗಿಗಳಿಗೆ ಮನೆಮನೆಗೆ ತೆರಳಿ ಚಿಕಿತ್ಸೆ, ಔಷಧಿ ವಿತರಣೆ ಹಾಗೂ ಆರೋಗ್ಯ ಸೇವೆಗಳನ್ನು ಒದಗಿಸಲು ಇವು ಮಹತ್ವದ ಪಾತ್ರವಹಿಸಲಿವೆ ಎಂದು ಹೇಳಿದರು.</p>.<p>ಇ-ಬೈಕ್ಗಳು ಪರಿಸರ ಸ್ನೇಹಿಯಾಗಿದ್ದು, ವಾಯುಮಾಲಿನ್ಯ ನಿಯಂತ್ರಣಕ್ಕೂ ಸಹಕಾರಿಯಾಗಲಿವೆ.ವಾಹನಗಳನ್ನು ಸಮರ್ಪಕವಾಗಿ ನಿರ್ವಹಿಸಿ, ಅಗತ್ಯವಿರುವ ಪ್ರದೇಶಗಳಲ್ಲಿ ಸಮಯೋಚಿತವಾಗಿ ಆರೋಗ್ಯ ಸೇವೆ ನೀಡಬೇಕು ಎಂದು ಆರೋಗ್ಯ ಸಿಬ್ಬಂದಿಗೆ ಸಲಹೆನೀಡಿದರು.</p>.<p>ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ತಾಲ್ಲೂಕುಗಳ ಗ್ರಾಮೀಣ ಜನರಿಗೆ ಈ ಸೇವೆಯಿಂದ ಅನುಕೂಲವಾಗಲಿದೆ. ವಿಶೇಷವಾಗಿ ಬಡವರು, ಮಧ್ಯಮ ವರ್ಗದವರು ಮತ್ತು ಆಸ್ಪತ್ರೆಗೆ ತೆರಳಲು ಸಾಧ್ಯವಾಗದವರಿಗೆ ತುರ್ತು ಆರೋಗ್ಯ ಸೇವೆ ಸುಲಭವಾಗಿ ದೊರೆಯಲಿದೆ ಎಂದು ತಿಳಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಿವಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಲಕ್ಕಾ ಕೃಷ್ಣ ರೆಡ್ಡಿ, ಆಪ್ಟಮ್ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಉಮಾ ರತ್ನಮ್ ಕೃಷ್ಣ, ಯುನೈಟೆಡ್ ವೇ ಬೆಂಗಳೂರು ಸಂಸ್ಥೆಯ ಸಿಇಒ ರಾಜೇಶ್ ಕೃಷ್ಣನ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-15-947386321</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇವನಹಳ್ಳಿ: ಗ್ರಾಮೀಣ ಹಾಗೂ ದುರ್ಗಮ ಪ್ರದೇಶಗಳ ಜನರಿಗೆ ತ್ವರಿತ ಆರೋಗ್ಯ ಸೇವೆ ತಲುಪಿಸಲು ಸಂಚಾರಿ ಇ-ಬೈಕ್ಗಳು ಸಹಕಾರಿ ಆಗಲಿವೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸಂತಿ ಅಮರ್ ಹೇಳಿದರು.</p>.<p>‘ಆಪ್ಟಮ್ ಇಂಡಿಯಾ’, ‘ಯುನೈಟೆಡ್ ವೇ ಬೆಂಗಳೂರು’ ಸಂಸ್ಥೆಗಳ ಸಿಎಸ್ಆರ್ ಅನುದಾನದಡಿ ನೀಡಿರುವ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 45 ಇ-ಬೈಕ್ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ರಾಜ್ಯ ಸರ್ಕಾರ ಈಗಾಗಲೇ ‘ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕ’ ಯೋಜನೆಯನ್ನು ಜಾರಿಗೊಳಿಸಿದ್ದು, ಅದಕ್ಕೆ ಪೂರಕವಾಗಿ ಇ-ಬೈಕ್ಗಳ ವಿತರಣೆ ಗ್ರಾಮೀಣ ಆರೋಗ್ಯ ಸೇವೆಗಳಿಗೆ ಮತ್ತಷ್ಟು ಬಲ ನೀಡಲಿದೆ ಎಂದರು.</p>.<p>ಗ್ರಾಮೀಣ ಭಾಗಗಳಲ್ಲಿ ಸಾರಿಗೆ ಸೌಲಭ್ಯಗಳ ಕೊರತೆಯಿಂದ ತುರ್ತು ಆರೋಗ್ಯ ಸೇವೆಗಳಲ್ಲಿ ವಿಳಂಬ ಉಂಟಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಆರೋಗ್ಯ ಸಿಬ್ಬಂದಿಗೆ ಇ-ಬೈಕ್ಗಳು ಪರಿಣಾಮಕಾರಿಯಾಗಿ ನೆರವಾಗಲಿವೆ. ಆಸ್ಪತ್ರೆಗೆ ತೆರಳಲು ಸಾಧ್ಯವಾಗದ ರೋಗಿಗಳಿಗೆ ಮನೆಮನೆಗೆ ತೆರಳಿ ಚಿಕಿತ್ಸೆ, ಔಷಧಿ ವಿತರಣೆ ಹಾಗೂ ಆರೋಗ್ಯ ಸೇವೆಗಳನ್ನು ಒದಗಿಸಲು ಇವು ಮಹತ್ವದ ಪಾತ್ರವಹಿಸಲಿವೆ ಎಂದು ಹೇಳಿದರು.</p>.<p>ಇ-ಬೈಕ್ಗಳು ಪರಿಸರ ಸ್ನೇಹಿಯಾಗಿದ್ದು, ವಾಯುಮಾಲಿನ್ಯ ನಿಯಂತ್ರಣಕ್ಕೂ ಸಹಕಾರಿಯಾಗಲಿವೆ.ವಾಹನಗಳನ್ನು ಸಮರ್ಪಕವಾಗಿ ನಿರ್ವಹಿಸಿ, ಅಗತ್ಯವಿರುವ ಪ್ರದೇಶಗಳಲ್ಲಿ ಸಮಯೋಚಿತವಾಗಿ ಆರೋಗ್ಯ ಸೇವೆ ನೀಡಬೇಕು ಎಂದು ಆರೋಗ್ಯ ಸಿಬ್ಬಂದಿಗೆ ಸಲಹೆನೀಡಿದರು.</p>.<p>ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ತಾಲ್ಲೂಕುಗಳ ಗ್ರಾಮೀಣ ಜನರಿಗೆ ಈ ಸೇವೆಯಿಂದ ಅನುಕೂಲವಾಗಲಿದೆ. ವಿಶೇಷವಾಗಿ ಬಡವರು, ಮಧ್ಯಮ ವರ್ಗದವರು ಮತ್ತು ಆಸ್ಪತ್ರೆಗೆ ತೆರಳಲು ಸಾಧ್ಯವಾಗದವರಿಗೆ ತುರ್ತು ಆರೋಗ್ಯ ಸೇವೆ ಸುಲಭವಾಗಿ ದೊರೆಯಲಿದೆ ಎಂದು ತಿಳಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಿವಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಲಕ್ಕಾ ಕೃಷ್ಣ ರೆಡ್ಡಿ, ಆಪ್ಟಮ್ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಉಮಾ ರತ್ನಮ್ ಕೃಷ್ಣ, ಯುನೈಟೆಡ್ ವೇ ಬೆಂಗಳೂರು ಸಂಸ್ಥೆಯ ಸಿಇಒ ರಾಜೇಶ್ ಕೃಷ್ಣನ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-15-947386321</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>