<p><strong>ದೇವನಹಳ್ಳಿ</strong>: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ನೀಡುವ ಸಮಯದಲ್ಲಿ 2017ರಲ್ಲಿ ರೂಪಿಸಿರುವ ನಿಯಮವನ್ನು 2016ಕ್ಕೂ ಮುನ್ನ ನೇಮಕಗೊಂಡ ಶಿಕ್ಷಕರಿಗೆ ಅನ್ವಯಿಸಬಾರದು ಎಂದು ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಆದರ್ಶ್ ಒತ್ತಾಯಿಸಿದರು.</p>.<p>ಸೋಮವಾರ ಪಟ್ಟಣದಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಹೋರಾಟಕ್ಕೆ ತೆರಳುವ ಮುನ್ನ ಮಾತನಾಡಿದ ಅವರು, ಪ್ರೌಢಶಾಲೆಗಳಿಗೆ ಬಡ್ತಿ ನೀಡುವಾಗ ವಿದ್ಯಾರ್ಹತೆಯನ್ನೇ ಪರಿಗಣಿಸಬೇಕು ಎಂದು ಆಗ್ರಹಿಸಿದರು.</p>.<p>2017ರಲ್ಲಿ ರೂಪಿಸಿರುವ ನಿಯಮದಿಂದ 2016ಕ್ಕೂ ಮುನ್ನವೇ ನೇಮಕ ಆಗಿರುವ ಶಿಕ್ಷಕರಿಗೆ ಅನ್ಯಾಯವಾಗುತ್ತದೆ. ಶಿಕ್ಷಣ ಇಲಾಖೆಯೂ ಹೊರಡಿಸಿರುವ ಆದೇಶ ಹಿಂಪಡೆಯಬೇಕು ಎಂದರು.</p>.<p>ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ನಾಗೇಶ್.ಎಚ್.ಎನ್, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಖಜಾಂಚಿ ಎಲ್.ಎಸ್. ಯತೀಶ್ ಕುಮಾರ್, ಸಹ ಕಾರ್ಯದರ್ಶಿ ಎ. ಮಂಜುನಾಥ, ಪದಾಧಿಕಾರಿಗಳಾದ ಕೆ.ಹರೀಶ್, ಪದ್ಮಾವತಿ, ಜಿ.ಗೀತಾ, ಎಚ್.ಕೆ ಸುಜಾತಾ , ಚಂದ್ರಪ್ಪ, ಆಂಜಿನಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ</strong>: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ನೀಡುವ ಸಮಯದಲ್ಲಿ 2017ರಲ್ಲಿ ರೂಪಿಸಿರುವ ನಿಯಮವನ್ನು 2016ಕ್ಕೂ ಮುನ್ನ ನೇಮಕಗೊಂಡ ಶಿಕ್ಷಕರಿಗೆ ಅನ್ವಯಿಸಬಾರದು ಎಂದು ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಆದರ್ಶ್ ಒತ್ತಾಯಿಸಿದರು.</p>.<p>ಸೋಮವಾರ ಪಟ್ಟಣದಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಹೋರಾಟಕ್ಕೆ ತೆರಳುವ ಮುನ್ನ ಮಾತನಾಡಿದ ಅವರು, ಪ್ರೌಢಶಾಲೆಗಳಿಗೆ ಬಡ್ತಿ ನೀಡುವಾಗ ವಿದ್ಯಾರ್ಹತೆಯನ್ನೇ ಪರಿಗಣಿಸಬೇಕು ಎಂದು ಆಗ್ರಹಿಸಿದರು.</p>.<p>2017ರಲ್ಲಿ ರೂಪಿಸಿರುವ ನಿಯಮದಿಂದ 2016ಕ್ಕೂ ಮುನ್ನವೇ ನೇಮಕ ಆಗಿರುವ ಶಿಕ್ಷಕರಿಗೆ ಅನ್ಯಾಯವಾಗುತ್ತದೆ. ಶಿಕ್ಷಣ ಇಲಾಖೆಯೂ ಹೊರಡಿಸಿರುವ ಆದೇಶ ಹಿಂಪಡೆಯಬೇಕು ಎಂದರು.</p>.<p>ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ನಾಗೇಶ್.ಎಚ್.ಎನ್, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಖಜಾಂಚಿ ಎಲ್.ಎಸ್. ಯತೀಶ್ ಕುಮಾರ್, ಸಹ ಕಾರ್ಯದರ್ಶಿ ಎ. ಮಂಜುನಾಥ, ಪದಾಧಿಕಾರಿಗಳಾದ ಕೆ.ಹರೀಶ್, ಪದ್ಮಾವತಿ, ಜಿ.ಗೀತಾ, ಎಚ್.ಕೆ ಸುಜಾತಾ , ಚಂದ್ರಪ್ಪ, ಆಂಜಿನಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>