ಅಪಘಾತದಿಂದ ಮರಣಹೊಂದಿದಲ್ಲಿ ₹2 ಲಕ್ಷ, ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ₹2 ಲಕ್ಷ ಹಾಗೂ ಅಪಘಾತ, ಮಾರಣಾಂತಿಕ ಕಾಯಿಲೆ, ಗಂಭೀರ ಅನಾರೋಗ್ಯಕ್ಕೆ ತುತ್ತಾದರೆ ಆಸ್ಪತ್ರೆ ವೆಚ್ಚ ಮರುಪಾವತಿ ₹ 1ಲಕ್ಷದವರೆಗೆ ಸೌಲಭ್ಯ ಇರುತ್ತದೆ. ಎಲ್ಲಾ ಪತ್ರಿಕಾ ವಿತರಕರು ಇ-ಶ್ರಮ್ ಪೋರ್ಟಲ್ www.eshram.gov.in ರಲ್ಲಿ ಸ್ವಯಂ ಆಗಿ ಅಥವಾ ಹತ್ತಿರದ ಸೇವಾ ಕೇಂದ್ರಗಳಲ್ಲಿ ‘ನ್ಯೂಸ್ ಪೇಪರ್ ಬಾಯ್’ ಎಂದು ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನೆ ಪಡೆಯಬಹುದು ಎಂದು ಇಲಾಖೆ ಕೋರಿದೆ.