<p><strong>ದೇವನಹಳ್ಳಿ</strong>: ದಾದಿಯರ ಮುಖದಲ್ಲಿ ನಗು ಇದ್ದರೆ ರೋಗಿಗಳ ಆರೋಗ್ಯ ಸ್ಥಿತಿ ಬೇಗ ಸುಧಾರಿಸುತ್ತದೆ. ಅವರು ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು ಇದ್ದಂತೆ ಎಂದು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ವೈಸಾಕ್ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ದಾದಿಯರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.</p>.<p>ಹುಟ್ಟಿನಿಂದ ಜೀವನದ ಕೊನೆಯ ಹಂತದವರೆಗೆ ವಿವಿಧ ಸಂದರ್ಭಗಳಲ್ಲಿ ದಾದಿಯರ ಸೇವೆ ಅಮೂಲ್ಯವಾದುದು. ಅವರ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ರೋಗಿಗಳ ಆರೈಕೆ, ಔಷಧಿಗಳ ಕುರಿತು ಮಾರ್ಗದರ್ಶನ, ಮಾನಸಿಕ ಧೈರ್ಯ ತುಂಬುವ ಕೆಲಸವನ್ನು ದಾದಿಯರು ಸಮರ್ಪಕವಾಗಿ ನಿರ್ವಹಿಸುತ್ತಾರೆ ಎಂದು ಹೇಳಿದರು.</p>.<p>ವೈದ್ಯರು ಚಿಕಿತ್ಸೆ ನೀಡಿದ ಬಳಿಕ ದಾದಿಯರು ರೋಗಿಗಳ ಆರೈಕೆಯ ಸಂಪೂರ್ಣ ಹೊಣೆ ಹೊರುತ್ತಾರೆ. ಹಲವು ಒತ್ತಡಗಳ ನಡುವೆಯೂ ಅವರು ತಾಯಿಯ ಹೃದಯದಿಂದ ಸೇವೆ ಸಲ್ಲಿಸುತ್ತಾರೆ. ರೋಗಿಗಳ ವಿಶ್ವಾಸ ಗಳಿಸಿ ಆತ್ಮಸ್ಥೈರ್ಯ ತುಂಬುವಲ್ಲಿ ದಾದಿಯರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.</p>.<p>ವಿಶ್ವಮಟ್ಟದಲ್ಲಿ ಆಧುನಿಕ ಶುಶ್ರೂಷಾ ಸೇವೆಯ ಸಂಸ್ಥಾಪಕಿ ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಅಂಗವಾಗಿ ಪ್ರತಿವರ್ಷ ವಿಶ್ವ ದಾದಿಯರ ದಿನಾಚರಣೆ ಆಚರಿಸಲಾಗುತ್ತದೆ ಎಂದು ಹೇಳಿದರು.</p>.<p>ರೋಗಿಗಳ ಚೇತರಿಕೆಗೆ ವೈದ್ಯರ ಚಿಕಿತ್ಸೆ ಮತ್ತು ಔಷಧಿಗಳಷ್ಟೇ ದಾದಿಯರ ಆರೈಕೆ ಕೂಡ ಮುಖ್ಯ. ಹಗಲು-ರಾತ್ರಿ ಎನ್ನದೆ ಸೇವೆ ಸಲ್ಲಿಸುವ ದಾದಿಯರು ಆರೋಗ್ಯ ವ್ಯವಸ್ಥೆಯ ಬೆನ್ನೆಲುಬಾಗಿದ್ದಾರೆ. ಆಸ್ಪತ್ರೆಯ ಯಾವುದೇ ವಿಭಾಗದಲ್ಲಿ ಅವರ ಸೇವೆ ಅನಿವಾರ್ಯ ಎಂದು ಹೇಳಿದರು.</p>.<p>ರೋಗಿಗಳ ಮೊದಲ ವೈದ್ಯರೆಂದೇ ದಾದಿಯರನ್ನು ಕರೆಯಬಹುದು. ಬೆಳಗ್ಗೆಯಿಂದ ರಾತ್ರಿ ತನಕ ರೋಗಿಗಳ ಸೇವೆಗೆ ಸನ್ನದ್ಧರಾಗಿರುವ ಅವರು ಮಾನವೀಯ ಮೌಲ್ಯಗಳನ್ನು ಉಳಿಸಿಕೊಂಡು ಸೇವೆ ಸಲ್ಲಿಸುತ್ತಿದ್ದಾರೆ. ಮದರ್ ತೆರೆಸಾ ಹಾಗೂ ನೈಟಿಂಗೇಲ್ ಅವರ ಆದರ್ಶಗಳನ್ನು ಅಳವಡಿಸಿಕೊಂಡು ಸೇವೆ ಸಲ್ಲಿಸಬೇಕು ಎಂದು ಕಿವಿಮಾತು ಹೇಳಿದರು.</p>.<p>ವೈದ್ಯರಾದ ಡಾ. ಶ್ರೀನಿವಾಸ, ಡಾ. ಜ್ಞಾತ್ ಕುಮಾರ್ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ಹಾಗೂ ದಾದಿಯರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-15-628462686</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ</strong>: ದಾದಿಯರ ಮುಖದಲ್ಲಿ ನಗು ಇದ್ದರೆ ರೋಗಿಗಳ ಆರೋಗ್ಯ ಸ್ಥಿತಿ ಬೇಗ ಸುಧಾರಿಸುತ್ತದೆ. ಅವರು ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು ಇದ್ದಂತೆ ಎಂದು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ವೈಸಾಕ್ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ದಾದಿಯರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.</p>.<p>ಹುಟ್ಟಿನಿಂದ ಜೀವನದ ಕೊನೆಯ ಹಂತದವರೆಗೆ ವಿವಿಧ ಸಂದರ್ಭಗಳಲ್ಲಿ ದಾದಿಯರ ಸೇವೆ ಅಮೂಲ್ಯವಾದುದು. ಅವರ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ರೋಗಿಗಳ ಆರೈಕೆ, ಔಷಧಿಗಳ ಕುರಿತು ಮಾರ್ಗದರ್ಶನ, ಮಾನಸಿಕ ಧೈರ್ಯ ತುಂಬುವ ಕೆಲಸವನ್ನು ದಾದಿಯರು ಸಮರ್ಪಕವಾಗಿ ನಿರ್ವಹಿಸುತ್ತಾರೆ ಎಂದು ಹೇಳಿದರು.</p>.<p>ವೈದ್ಯರು ಚಿಕಿತ್ಸೆ ನೀಡಿದ ಬಳಿಕ ದಾದಿಯರು ರೋಗಿಗಳ ಆರೈಕೆಯ ಸಂಪೂರ್ಣ ಹೊಣೆ ಹೊರುತ್ತಾರೆ. ಹಲವು ಒತ್ತಡಗಳ ನಡುವೆಯೂ ಅವರು ತಾಯಿಯ ಹೃದಯದಿಂದ ಸೇವೆ ಸಲ್ಲಿಸುತ್ತಾರೆ. ರೋಗಿಗಳ ವಿಶ್ವಾಸ ಗಳಿಸಿ ಆತ್ಮಸ್ಥೈರ್ಯ ತುಂಬುವಲ್ಲಿ ದಾದಿಯರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.</p>.<p>ವಿಶ್ವಮಟ್ಟದಲ್ಲಿ ಆಧುನಿಕ ಶುಶ್ರೂಷಾ ಸೇವೆಯ ಸಂಸ್ಥಾಪಕಿ ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಅಂಗವಾಗಿ ಪ್ರತಿವರ್ಷ ವಿಶ್ವ ದಾದಿಯರ ದಿನಾಚರಣೆ ಆಚರಿಸಲಾಗುತ್ತದೆ ಎಂದು ಹೇಳಿದರು.</p>.<p>ರೋಗಿಗಳ ಚೇತರಿಕೆಗೆ ವೈದ್ಯರ ಚಿಕಿತ್ಸೆ ಮತ್ತು ಔಷಧಿಗಳಷ್ಟೇ ದಾದಿಯರ ಆರೈಕೆ ಕೂಡ ಮುಖ್ಯ. ಹಗಲು-ರಾತ್ರಿ ಎನ್ನದೆ ಸೇವೆ ಸಲ್ಲಿಸುವ ದಾದಿಯರು ಆರೋಗ್ಯ ವ್ಯವಸ್ಥೆಯ ಬೆನ್ನೆಲುಬಾಗಿದ್ದಾರೆ. ಆಸ್ಪತ್ರೆಯ ಯಾವುದೇ ವಿಭಾಗದಲ್ಲಿ ಅವರ ಸೇವೆ ಅನಿವಾರ್ಯ ಎಂದು ಹೇಳಿದರು.</p>.<p>ರೋಗಿಗಳ ಮೊದಲ ವೈದ್ಯರೆಂದೇ ದಾದಿಯರನ್ನು ಕರೆಯಬಹುದು. ಬೆಳಗ್ಗೆಯಿಂದ ರಾತ್ರಿ ತನಕ ರೋಗಿಗಳ ಸೇವೆಗೆ ಸನ್ನದ್ಧರಾಗಿರುವ ಅವರು ಮಾನವೀಯ ಮೌಲ್ಯಗಳನ್ನು ಉಳಿಸಿಕೊಂಡು ಸೇವೆ ಸಲ್ಲಿಸುತ್ತಿದ್ದಾರೆ. ಮದರ್ ತೆರೆಸಾ ಹಾಗೂ ನೈಟಿಂಗೇಲ್ ಅವರ ಆದರ್ಶಗಳನ್ನು ಅಳವಡಿಸಿಕೊಂಡು ಸೇವೆ ಸಲ್ಲಿಸಬೇಕು ಎಂದು ಕಿವಿಮಾತು ಹೇಳಿದರು.</p>.<p>ವೈದ್ಯರಾದ ಡಾ. ಶ್ರೀನಿವಾಸ, ಡಾ. ಜ್ಞಾತ್ ಕುಮಾರ್ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ಹಾಗೂ ದಾದಿಯರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-15-628462686</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>