ದೇವನಹಳ್ಳಿ ಟೌನ್, ಚಿಕ್ಕಜಾಲ, ವಿಮಾನ ನಿಲ್ದಾಣ ಠಾಣೆಗಳು ಬೆಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಕಂದಾಯ ಇಲಾಖೆ ಅನ್ವಯ ಇವುಗಳು ಗ್ರಾಮಾಂತರ ಜಿಲ್ಲೆಗೆ ಸೇರಿವೆ. ಇದರಿಂದ ಇಲಾಖೆಯು ಸಿಬ್ಬಂದಿಗೆ ನೀಡಲಾಗುತ್ತಿದ್ದ ಮನೆ ಬಾಡಿಗೆ ಭತ್ಯೆ, ನಗರ ಪರಿಹಾರ ಭತ್ಯೆಯನ್ನು ಗ್ರಾಮಾಂತರ ವ್ಯಾಪ್ತಿಗೆ ಸೀಮಿತಗೊಳಿಸಿ ಪ್ರಸ್ತುತ ನೀಡಲಾಗುತ್ತಿದ್ದ ಭತ್ಯೆಗಳಿಗೆ ಕತ್ತರಿ ಹಾಕಲಾಗಿದೆ.