<p><strong>ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ):</strong> ಇಲ್ಲಿನ ಖಾಸಗಿ ವಸತಿ ಶಾಲೆಯಲ್ಲಿ ಓದುತ್ತಿದ್ದ ಅಕ್ಕ–ತಂಗಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅಡಿ ಶಾಲೆಯ ಮಾಲೀಕ ಹಾಗೂ ಪ್ರಾಂಶುಪಾಲೆಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.</p><p>ಮಾಲೀಕ ಧನಂಜಯ್ ಹಾಗೂ ಪ್ರಾಂಶುಪಾಲೆ ಶೈಲಜಾ ಬಂಧಿತರು. ಇಬ್ಬರ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p><p>ದೇವನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಪಿಗಳ ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಘಟನೆ ಬೆಳಕಿಗೆ ಬಂದ ನಂತರ ಶಾಲೆಗೆ ತಾತ್ಕಾಲಿಕ ರಜೆ ಘೋಷಿಸಲಾಗಿದೆ. </p><p>ಅಕ್ಕ,ತಂಗಿ ಇಬ್ಬರೂ ವಸತಿಶಾಲೆ ಯಲ್ಲಿ ಓದುತ್ತಿದ್ದರು. ಧನಂಜಯ್ ಈಚೆಗೆ ಅಕ್ಕನನ್ನು ಶಾಲೆಯ ಕೊಠಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿ ಸಲಾಗಿದೆ. ಗರ್ಭಧಾರಣೆ ತಪ್ಪಿಸಲು ಆಹಾರದಲ್ಲಿ ಔಷಧಿ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. </p><p>ಬಳಿಕ ಆಕೆಯ ತಂಗಿಯ ಮೇಲೂ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ. ಆದರೆ, ಆಕೆ ಶೌಚಾಲಯದಲ್ಲಿ ಅಡಗಿ ತಪ್ಪಿಸಿಕೊಂಡಿ ರುವುದಾಗಿ ತಿಳಿದು ಬಂದಿದೆ.</p><p>ಪ್ರಾಂಶುಪಾಲೆ ಶೈಲಜಾ, ಈ ವಿಷಯವನ್ನು ಯಾರಿಗೂ ತಿಳಿಸದಂತೆ ವಿದ್ಯಾರ್ಥಿನಿಯರಿಗೆ ಬೆದರಿಸಿದ್ದರು. ಹೆಚ್ಚಿನ ಅಂಕ, ಉಚಿತ ಶಿಕ್ಷಣದ ಆಮಿಷ ಒಡ್ಡಿದ್ದರು. ವಿಷಯ ಬಹಿರಂಗ ಪಡಿಸಿದರೆ ಪರೀಕ್ಷೆಯಲ್ಲಿ ಅನುತ್ತೀರ್ಣಗೊಳಿಸುವು ದಾಗಿ ಬೆದರಿಕೆ ಹಾಕಲಾಗಿತ್ತು ಎಂದು ಪೋಷಕರು ಆರೋಪಿಸಿದ್ದಾರೆ.</p><p>ಘಟನೆ ಬಳಿಕ ಪೋಷಕರಿಗೆ ಮಕ್ಕಳ ಭೇಟಿಗೆ ಅವಕಾಶ ನೀಡಿಲ್ಲ. ದೂರವಾಣಿ ಸಂಪರ್ಕ ಕಡಿತಗೊಳಿಸ<br>ಲಾಗಿತ್ತು. ‘ಪ್ರವಾಸಕ್ಕೆ ಕಳುಹಿಸಿದ್ದೇವೆ ಅಥವಾ ಓದುತ್ತಿದ್ದಾರೆ’ ಎಂಬ ನೆಪ ಹೇಳಲಾಗಿತ್ತು. ಪೋಷಕರು ಒತ್ತಾಯಿಸಿದ ಬಳಿಕ ಕೆಲವೇ ನಿಮಿಷದ ಮಾತುಕತೆಯಲ್ಲಿ ಬಾಲಕಿಯರು ನಡೆದ ಘಟನೆಯನ್ನು ತಿಳಿಸಿದ್ದಾರೆ.</p><p>ವಿದ್ಯಾರ್ಥಿನಿಯರು ಮಲಗುತ್ತಿದ್ದ ವಸತಿ ನಿಲಯದ ಕೊಠಡಿಗೆ ಬೀಗ ಅಥವಾ ಬೋಲ್ಟ್ ವ್ಯವಸ್ಥೆ ಇರಲಿಲ್ಲ. ಕೃತ್ಯ ನಡೆದ ದಿನ ವಾರ್ಡನ್ನನ್ನು ಮನೆಗೆ ಕಳುಹಿಸಲಾಗಿತ್ತು ಎಂಬ ಮಾಹಿತಿ ಪೊಲೀಸರಿಗೆ<br>ಲಭ್ಯವಾಗಿದೆ. </p><p>ವಸತಿ ನಿಲಯದಲ್ಲಿರುವ ವಿದ್ಯಾರ್ಥಿ ನಿಯರ ಸುರಕ್ಷತೆಗೆ ಜಿಲ್ಲಾಡಳಿತ ಕ್ರಮ ವಹಿಸಿದ್ದು, 300ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ಮಾಹಿತಿ ಸಂಗ್ರಹಿಸ<br>ಲಾಗುತ್ತಿದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<div><blockquote>ಡಿವಿಆರ್ನಲ್ಲಿ ಸಂಗ್ರಹವಾಗಿದ್ದ ಚಿತ್ರಗಳು ಡಿಲೀಟ್ ಆಗಿರುವ ಮಾಹಿತಿ ಬಂದಿದೆ. ಸಮಗ್ರ ಮತ್ತುನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು</blockquote><span class="attribution"> ಶಶಿಧರ್ ಕೋಸುಂಬೆ, ಅಧ್ಯಕ್ಷ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ</span></div>.<h2>ವಸತಿ ಶಾಲೆ ಮಕ್ಕಳ ಸುರಕ್ಷತೆಗೆ ಕ್ರಮ</h2><p>ದೇವನಹಳ್ಳಿ: ವಸತಿ ಶಾಲೆಯ ಘಟನೆ ಆಯೋಗದ ಗಮನಕ್ಕೆ ಬಂದಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜತೆ ಚರ್ಚೆ ನಡೆಸಲಾಗಿದೆ. ಜಿಲ್ಲಾಡಳಿತ ಈ ಪ್ರಕರಣದ ಸಂಪೂರ್ಣ ಜವಾಬ್ದಾರಿ ತೆಗೆದುಕೊಳ್ಳಬೇಕು. ಶಾಲೆಯ ಮೇಲ್ವಿಚಾರಣೆಗೆ ತಕ್ಷಣ ಆಡಳಿತಾಧಿಕಾರಿ ನೇಮಕ ಮಾಡುವಂತೆ ಸೂಚಿಸಲಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಶಶಿಧರ್ ಕೋಸುಂಬೆ ತಿಳಿಸಿದ್ದಾರೆ. </p><p>ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳಿಗೆ ಮನೆ ನಂತರ ಅತ್ಯಂತ ಸುರಕ್ಷಿತ ಸ್ಥಳವೆಂದರೆ ಶಾಲೆ. ವಸತಿಶಾಲೆ ವಿದ್ಯಾರ್ಥಿನಿಯರಿಗೆ ಧೈರ್ಯ ತುಂಬುವ ಕೆಲಸ ನಡೆಯಬೇಕು. ಅವರ ಮಾನಸಿಕ ಸ್ಥಿತಿ ಹಾಗೂ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದರು. </p><p>ಡಿವಿಆರ್ನಲ್ಲಿ ಸಂಗ್ರಹವಾಗಿದ್ದ ಚಿತ್ರಗಳು ಡಿಲೀಟ್ ಆಗಿರುವ ಮಾಹಿತಿ ಬಂದಿದೆ. ಇದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಈ ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೆ ಎಂದು ಪೋಲೀಸ್ ಇಲಾಖೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ):</strong> ಇಲ್ಲಿನ ಖಾಸಗಿ ವಸತಿ ಶಾಲೆಯಲ್ಲಿ ಓದುತ್ತಿದ್ದ ಅಕ್ಕ–ತಂಗಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅಡಿ ಶಾಲೆಯ ಮಾಲೀಕ ಹಾಗೂ ಪ್ರಾಂಶುಪಾಲೆಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.</p><p>ಮಾಲೀಕ ಧನಂಜಯ್ ಹಾಗೂ ಪ್ರಾಂಶುಪಾಲೆ ಶೈಲಜಾ ಬಂಧಿತರು. ಇಬ್ಬರ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p><p>ದೇವನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಪಿಗಳ ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಘಟನೆ ಬೆಳಕಿಗೆ ಬಂದ ನಂತರ ಶಾಲೆಗೆ ತಾತ್ಕಾಲಿಕ ರಜೆ ಘೋಷಿಸಲಾಗಿದೆ. </p><p>ಅಕ್ಕ,ತಂಗಿ ಇಬ್ಬರೂ ವಸತಿಶಾಲೆ ಯಲ್ಲಿ ಓದುತ್ತಿದ್ದರು. ಧನಂಜಯ್ ಈಚೆಗೆ ಅಕ್ಕನನ್ನು ಶಾಲೆಯ ಕೊಠಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿ ಸಲಾಗಿದೆ. ಗರ್ಭಧಾರಣೆ ತಪ್ಪಿಸಲು ಆಹಾರದಲ್ಲಿ ಔಷಧಿ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. </p><p>ಬಳಿಕ ಆಕೆಯ ತಂಗಿಯ ಮೇಲೂ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ. ಆದರೆ, ಆಕೆ ಶೌಚಾಲಯದಲ್ಲಿ ಅಡಗಿ ತಪ್ಪಿಸಿಕೊಂಡಿ ರುವುದಾಗಿ ತಿಳಿದು ಬಂದಿದೆ.</p><p>ಪ್ರಾಂಶುಪಾಲೆ ಶೈಲಜಾ, ಈ ವಿಷಯವನ್ನು ಯಾರಿಗೂ ತಿಳಿಸದಂತೆ ವಿದ್ಯಾರ್ಥಿನಿಯರಿಗೆ ಬೆದರಿಸಿದ್ದರು. ಹೆಚ್ಚಿನ ಅಂಕ, ಉಚಿತ ಶಿಕ್ಷಣದ ಆಮಿಷ ಒಡ್ಡಿದ್ದರು. ವಿಷಯ ಬಹಿರಂಗ ಪಡಿಸಿದರೆ ಪರೀಕ್ಷೆಯಲ್ಲಿ ಅನುತ್ತೀರ್ಣಗೊಳಿಸುವು ದಾಗಿ ಬೆದರಿಕೆ ಹಾಕಲಾಗಿತ್ತು ಎಂದು ಪೋಷಕರು ಆರೋಪಿಸಿದ್ದಾರೆ.</p><p>ಘಟನೆ ಬಳಿಕ ಪೋಷಕರಿಗೆ ಮಕ್ಕಳ ಭೇಟಿಗೆ ಅವಕಾಶ ನೀಡಿಲ್ಲ. ದೂರವಾಣಿ ಸಂಪರ್ಕ ಕಡಿತಗೊಳಿಸ<br>ಲಾಗಿತ್ತು. ‘ಪ್ರವಾಸಕ್ಕೆ ಕಳುಹಿಸಿದ್ದೇವೆ ಅಥವಾ ಓದುತ್ತಿದ್ದಾರೆ’ ಎಂಬ ನೆಪ ಹೇಳಲಾಗಿತ್ತು. ಪೋಷಕರು ಒತ್ತಾಯಿಸಿದ ಬಳಿಕ ಕೆಲವೇ ನಿಮಿಷದ ಮಾತುಕತೆಯಲ್ಲಿ ಬಾಲಕಿಯರು ನಡೆದ ಘಟನೆಯನ್ನು ತಿಳಿಸಿದ್ದಾರೆ.</p><p>ವಿದ್ಯಾರ್ಥಿನಿಯರು ಮಲಗುತ್ತಿದ್ದ ವಸತಿ ನಿಲಯದ ಕೊಠಡಿಗೆ ಬೀಗ ಅಥವಾ ಬೋಲ್ಟ್ ವ್ಯವಸ್ಥೆ ಇರಲಿಲ್ಲ. ಕೃತ್ಯ ನಡೆದ ದಿನ ವಾರ್ಡನ್ನನ್ನು ಮನೆಗೆ ಕಳುಹಿಸಲಾಗಿತ್ತು ಎಂಬ ಮಾಹಿತಿ ಪೊಲೀಸರಿಗೆ<br>ಲಭ್ಯವಾಗಿದೆ. </p><p>ವಸತಿ ನಿಲಯದಲ್ಲಿರುವ ವಿದ್ಯಾರ್ಥಿ ನಿಯರ ಸುರಕ್ಷತೆಗೆ ಜಿಲ್ಲಾಡಳಿತ ಕ್ರಮ ವಹಿಸಿದ್ದು, 300ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ಮಾಹಿತಿ ಸಂಗ್ರಹಿಸ<br>ಲಾಗುತ್ತಿದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<div><blockquote>ಡಿವಿಆರ್ನಲ್ಲಿ ಸಂಗ್ರಹವಾಗಿದ್ದ ಚಿತ್ರಗಳು ಡಿಲೀಟ್ ಆಗಿರುವ ಮಾಹಿತಿ ಬಂದಿದೆ. ಸಮಗ್ರ ಮತ್ತುನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು</blockquote><span class="attribution"> ಶಶಿಧರ್ ಕೋಸುಂಬೆ, ಅಧ್ಯಕ್ಷ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ</span></div>.<h2>ವಸತಿ ಶಾಲೆ ಮಕ್ಕಳ ಸುರಕ್ಷತೆಗೆ ಕ್ರಮ</h2><p>ದೇವನಹಳ್ಳಿ: ವಸತಿ ಶಾಲೆಯ ಘಟನೆ ಆಯೋಗದ ಗಮನಕ್ಕೆ ಬಂದಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜತೆ ಚರ್ಚೆ ನಡೆಸಲಾಗಿದೆ. ಜಿಲ್ಲಾಡಳಿತ ಈ ಪ್ರಕರಣದ ಸಂಪೂರ್ಣ ಜವಾಬ್ದಾರಿ ತೆಗೆದುಕೊಳ್ಳಬೇಕು. ಶಾಲೆಯ ಮೇಲ್ವಿಚಾರಣೆಗೆ ತಕ್ಷಣ ಆಡಳಿತಾಧಿಕಾರಿ ನೇಮಕ ಮಾಡುವಂತೆ ಸೂಚಿಸಲಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಶಶಿಧರ್ ಕೋಸುಂಬೆ ತಿಳಿಸಿದ್ದಾರೆ. </p><p>ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳಿಗೆ ಮನೆ ನಂತರ ಅತ್ಯಂತ ಸುರಕ್ಷಿತ ಸ್ಥಳವೆಂದರೆ ಶಾಲೆ. ವಸತಿಶಾಲೆ ವಿದ್ಯಾರ್ಥಿನಿಯರಿಗೆ ಧೈರ್ಯ ತುಂಬುವ ಕೆಲಸ ನಡೆಯಬೇಕು. ಅವರ ಮಾನಸಿಕ ಸ್ಥಿತಿ ಹಾಗೂ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದರು. </p><p>ಡಿವಿಆರ್ನಲ್ಲಿ ಸಂಗ್ರಹವಾಗಿದ್ದ ಚಿತ್ರಗಳು ಡಿಲೀಟ್ ಆಗಿರುವ ಮಾಹಿತಿ ಬಂದಿದೆ. ಇದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಈ ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೆ ಎಂದು ಪೋಲೀಸ್ ಇಲಾಖೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>