<p>ದೇವನಹಳ್ಳಿ: ವಿದೇಶಗಳಿಂದ ಅಕ್ರಮವಾಗಿ ನಕಲಿ ಸಿಗರೇಟ್ ಸಾಗಾಣಿಕೆ ಮಾಡುತ್ತಿದ್ದ ಜಾಲವನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಪತ್ತೆಹಚ್ಚಿ ತಂದೆ, ಮಗ ಸೇರಿ ಐವರನ್ನು ಬಂಧಿಸಿದ್ದಾರೆ.</p>.<p>ಆರೋಪಿಗಳಿಂದ ಸುಮಾರು ₹50 ಲಕ್ಷ ಮೌಲ್ಯದ 20 ಕಾರ್ಟನ್ ನಕಲಿ ಸಿಗರೇಟ್ ವಶಪಡಿಸಿಕೊಂಡಿದ್ದಾರೆ. ಐಟಿಸಿ ಮತ್ತು ಇತರ ಪ್ರಸಿದ್ಧ ಕಂಪನಿಗಳ ಬ್ರ್ಯಾಂಡ್ ನಕಲಿ ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತಿತ್ತು ಎಂದು ತನಿಖೆಯಿಂದ ಬಹಿರಂಗವಾಗಿದೆ.</p>.<p>ಬೆಂಗಳೂರಿನ ಅಬ್ದುಲ್ ಬಷೀದ್, ಇವರ ಪುತ್ರ ಮೊಹಮ್ಮದ್ ಆಶೀಕ್, ಮಹಮ್ಮದ್ ಅನ್ವರ್, ಮಹಮ್ಮದ್ ಅನ್ಸಾರಿ ಹಾಗೂ ಗುಲಾಮ್ ಹುಸೇನ್ ಖಾನ್ ಬಂಧಿತರು. ಅಕ್ರಮ ದಂಧೆಯನ್ನು ತಂದೆ, ಮಗನೇ ಸಂಘಟಿತವಾಗಿ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕಾಂಬೋಡಿಯಾದಲ್ಲಿ ಕಡಿಮೆ ದರದಲ್ಲಿ ಖರೀದಿಸಿದ ನಕಲಿ ಬ್ರಾಂಡ್ನ ಸಿಗರೇಟ್ಗಳನ್ನ ಹಾಂಗ್ಕಾಂಗ್, ಕ್ವಾಲಾಂಲಪುರ ಹಾಗೂ ಸಿಂಗಪುರದಿಂದ ಅಕ್ರಮವಾಗಿ ಬೆಂಗಳೂರಿಗೆ ತರಲಾಗುತ್ತಿತ್ತು. ಆರೋಪಿಗಳು ಇಲ್ಲಿ ಹೆಚ್ಚಿನ ಬೆಲೆಗೆ ನಕಲಿ ಸಿಗರೇಟ್ ಮಾರಾಟ ಮಾಡಿ ಲಾಭ ಗಳಿಸುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.</p>.<p>ಈ ಅಕ್ರಮ ಜಾಲದ ಕುರಿತು ಖಾಸಗಿ ಸಂಸ್ಥೆ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಆರಂಭಿಸಿದ್ದರು. ಖಚಿತ ಮಾಹಿತಿಯ ಆಧಾರದ ಮೇಲೆ ಆರೋಪಿಗಳನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ದಂಧೆಯ ಜಾಲ ಬಯಲಾಯಿತು.</p>.<p>ಈ ಸಂಬಂಧ ಕೆಂಪೇಗೌಡ ವಿಮಾನ ನಿಲ್ದಾಣದ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪೊಲೀಸರು ಇನ್ನಷ್ಟು ಮಾಹಿತಿ ಸಂಗ್ರಹಿಸುತ್ತಿದ್ದು, ಜಾಲದ ವ್ಯಾಪ್ತಿ ಕುರಿತು ತನಿಖೆ ಮುಂದುವರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇವನಹಳ್ಳಿ: ವಿದೇಶಗಳಿಂದ ಅಕ್ರಮವಾಗಿ ನಕಲಿ ಸಿಗರೇಟ್ ಸಾಗಾಣಿಕೆ ಮಾಡುತ್ತಿದ್ದ ಜಾಲವನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಪತ್ತೆಹಚ್ಚಿ ತಂದೆ, ಮಗ ಸೇರಿ ಐವರನ್ನು ಬಂಧಿಸಿದ್ದಾರೆ.</p>.<p>ಆರೋಪಿಗಳಿಂದ ಸುಮಾರು ₹50 ಲಕ್ಷ ಮೌಲ್ಯದ 20 ಕಾರ್ಟನ್ ನಕಲಿ ಸಿಗರೇಟ್ ವಶಪಡಿಸಿಕೊಂಡಿದ್ದಾರೆ. ಐಟಿಸಿ ಮತ್ತು ಇತರ ಪ್ರಸಿದ್ಧ ಕಂಪನಿಗಳ ಬ್ರ್ಯಾಂಡ್ ನಕಲಿ ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತಿತ್ತು ಎಂದು ತನಿಖೆಯಿಂದ ಬಹಿರಂಗವಾಗಿದೆ.</p>.<p>ಬೆಂಗಳೂರಿನ ಅಬ್ದುಲ್ ಬಷೀದ್, ಇವರ ಪುತ್ರ ಮೊಹಮ್ಮದ್ ಆಶೀಕ್, ಮಹಮ್ಮದ್ ಅನ್ವರ್, ಮಹಮ್ಮದ್ ಅನ್ಸಾರಿ ಹಾಗೂ ಗುಲಾಮ್ ಹುಸೇನ್ ಖಾನ್ ಬಂಧಿತರು. ಅಕ್ರಮ ದಂಧೆಯನ್ನು ತಂದೆ, ಮಗನೇ ಸಂಘಟಿತವಾಗಿ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕಾಂಬೋಡಿಯಾದಲ್ಲಿ ಕಡಿಮೆ ದರದಲ್ಲಿ ಖರೀದಿಸಿದ ನಕಲಿ ಬ್ರಾಂಡ್ನ ಸಿಗರೇಟ್ಗಳನ್ನ ಹಾಂಗ್ಕಾಂಗ್, ಕ್ವಾಲಾಂಲಪುರ ಹಾಗೂ ಸಿಂಗಪುರದಿಂದ ಅಕ್ರಮವಾಗಿ ಬೆಂಗಳೂರಿಗೆ ತರಲಾಗುತ್ತಿತ್ತು. ಆರೋಪಿಗಳು ಇಲ್ಲಿ ಹೆಚ್ಚಿನ ಬೆಲೆಗೆ ನಕಲಿ ಸಿಗರೇಟ್ ಮಾರಾಟ ಮಾಡಿ ಲಾಭ ಗಳಿಸುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.</p>.<p>ಈ ಅಕ್ರಮ ಜಾಲದ ಕುರಿತು ಖಾಸಗಿ ಸಂಸ್ಥೆ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಆರಂಭಿಸಿದ್ದರು. ಖಚಿತ ಮಾಹಿತಿಯ ಆಧಾರದ ಮೇಲೆ ಆರೋಪಿಗಳನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ದಂಧೆಯ ಜಾಲ ಬಯಲಾಯಿತು.</p>.<p>ಈ ಸಂಬಂಧ ಕೆಂಪೇಗೌಡ ವಿಮಾನ ನಿಲ್ದಾಣದ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪೊಲೀಸರು ಇನ್ನಷ್ಟು ಮಾಹಿತಿ ಸಂಗ್ರಹಿಸುತ್ತಿದ್ದು, ಜಾಲದ ವ್ಯಾಪ್ತಿ ಕುರಿತು ತನಿಖೆ ಮುಂದುವರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>