<p><strong>ದೇವನಹಳ್ಳಿ:</strong> ಪಟ್ಟಣದ ಹಲವೆಡೆ ರಸ್ತೆ ಬದಿಗಳಲ್ಲಿ ಇದ್ದ ಕಸ, ಗಿಡ ಗಂಟಿ ತೆರವು ಹಾಗೂ ಸ್ವಚ್ಛತೆ ಕಾರ್ಯ ಮಾಡಲು ಹಿಂಜರಿಯುತ್ತಿದದ ದೇವನಹಳ್ಳಿ ಪುರಸಭೆ ಸಿಬ್ಬಂದಿಯೂ ಶುಕ್ರವಾರ ಏಕಾಏಕಿ ಪಟ್ಟಣದ ಸೂಲಿಬೆಲೆ ರಸ್ತೆಯ ಇಕ್ಕೆಲಗಳನ್ನು ಸ್ವಚ್ಛ ಮಾಡಿರುವುದು ಸ್ಥಳೀಯರಲ್ಲಿ ಆಶ್ಚರ್ಯ ಉಂಟು ಮಾಡಿದೆ.</p>.<p>ಶನಿವಾರ ಸೂಲಿಬೆಲೆ ರಸ್ತೆಯಲ್ಲಿ ಬೆಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ (ಬಯಪ್ಪ)ದ ನೂತನ ಕಚೇರಿಯನ್ನು ಉದ್ಘಾಟನೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸುತ್ತಿರುವ ಕಾರಣ ಅವಸರದಲ್ಲಿ ಸ್ವಚ್ಛತಾ ಕಾರ್ಯಗಳು ನಡೆದಿವೆ.</p>.<p>ಡಿ.ಕೆ.ಶಿವಕುಮಾರ್ ಪಟ್ಟಣಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡರು ಸೇರಿದಂತೆ ಬೈಯಪ್ಪ ಅಧ್ಯಕ್ಷ ವಿ.ಶಾಂತಕುಮಾರ್ ಹಾಗೂ ಅವರ ಬೆಂಬಲಿಗರು ಸೂಲಿಬೆಲೆ ರಸ್ತೆಯ ತುಂಬೆಲ್ಲಾ ಬ್ಯಾನರ್, ಬಂಟಿಂಗ್ಸ್ ಹಾಕಿ ಸ್ವಾಗತ ಕೋರಿದ್ದಾರೆ.</p>.<p>ರಸ್ತೆಯ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ಚರಂಡಿ, ರಸ್ತೆಯ ಬದಿಯ ಕಸ, ಅನಧಿಕೃತವಾಗಿ ಇದ್ದ ರಸ್ತೆ ಬದಿಯ ಅಂಗಡಿ ಮುಂಗಟ್ಟುಗಳಿಂದ ಉಂಟಾಗುತ್ತಿದ್ದ ಸಮಸ್ಯೆಗಳ ಕುರಿತು ಸಾಮಾಜಿಕ ಜಾಲತಾಣ, ದಿನಪತ್ರಿಕೆಗಳಲ್ಲಿ ಸಾಲು ಸಾಲು ಸುದ್ದಿ ಬಿತ್ತರವಾದರೂ ಎಚ್ಚೆತ್ತುಕೊಳ್ಳದ ಪುರಸಭೆಯೂ ಶುಕ್ರವಾರ ದಿನವಿಡಿ ರಸ್ತೆಯನ್ನು ಅಚ್ಚುಕಟ್ಟು ಮಾಡಿದೆ.</p>.<p>ಪಟ್ಟಣದ ತುಂಬೆಲ್ಲಾ ಹಾಕಲಾಗಿರುವ ಬ್ಯಾನರ್, ಬಂಟಿಂಗ್ಸ್ಗಳಿಗೆ ಅನುಮಾತಿ ನೀಡಿದರಾ? ನಿಷೇಧಿತ ಪ್ಲಾಸ್ಟಿಕ್ ಬಳಸಿ ಫ್ಲೆಕ್ಸ್ಗಳನ್ನು ಹಾಕಲು ಅನುಮತಿ ನೀಡಿದವರು ಯಾರು? ಎಂಬುದಕ್ಕೆ ಪುರಸಭೆಯೇ ಉತ್ತರ ನೀಡಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ಪಟ್ಟಣದ ಹಲವೆಡೆ ರಸ್ತೆ ಬದಿಗಳಲ್ಲಿ ಇದ್ದ ಕಸ, ಗಿಡ ಗಂಟಿ ತೆರವು ಹಾಗೂ ಸ್ವಚ್ಛತೆ ಕಾರ್ಯ ಮಾಡಲು ಹಿಂಜರಿಯುತ್ತಿದದ ದೇವನಹಳ್ಳಿ ಪುರಸಭೆ ಸಿಬ್ಬಂದಿಯೂ ಶುಕ್ರವಾರ ಏಕಾಏಕಿ ಪಟ್ಟಣದ ಸೂಲಿಬೆಲೆ ರಸ್ತೆಯ ಇಕ್ಕೆಲಗಳನ್ನು ಸ್ವಚ್ಛ ಮಾಡಿರುವುದು ಸ್ಥಳೀಯರಲ್ಲಿ ಆಶ್ಚರ್ಯ ಉಂಟು ಮಾಡಿದೆ.</p>.<p>ಶನಿವಾರ ಸೂಲಿಬೆಲೆ ರಸ್ತೆಯಲ್ಲಿ ಬೆಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ (ಬಯಪ್ಪ)ದ ನೂತನ ಕಚೇರಿಯನ್ನು ಉದ್ಘಾಟನೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸುತ್ತಿರುವ ಕಾರಣ ಅವಸರದಲ್ಲಿ ಸ್ವಚ್ಛತಾ ಕಾರ್ಯಗಳು ನಡೆದಿವೆ.</p>.<p>ಡಿ.ಕೆ.ಶಿವಕುಮಾರ್ ಪಟ್ಟಣಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡರು ಸೇರಿದಂತೆ ಬೈಯಪ್ಪ ಅಧ್ಯಕ್ಷ ವಿ.ಶಾಂತಕುಮಾರ್ ಹಾಗೂ ಅವರ ಬೆಂಬಲಿಗರು ಸೂಲಿಬೆಲೆ ರಸ್ತೆಯ ತುಂಬೆಲ್ಲಾ ಬ್ಯಾನರ್, ಬಂಟಿಂಗ್ಸ್ ಹಾಕಿ ಸ್ವಾಗತ ಕೋರಿದ್ದಾರೆ.</p>.<p>ರಸ್ತೆಯ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ಚರಂಡಿ, ರಸ್ತೆಯ ಬದಿಯ ಕಸ, ಅನಧಿಕೃತವಾಗಿ ಇದ್ದ ರಸ್ತೆ ಬದಿಯ ಅಂಗಡಿ ಮುಂಗಟ್ಟುಗಳಿಂದ ಉಂಟಾಗುತ್ತಿದ್ದ ಸಮಸ್ಯೆಗಳ ಕುರಿತು ಸಾಮಾಜಿಕ ಜಾಲತಾಣ, ದಿನಪತ್ರಿಕೆಗಳಲ್ಲಿ ಸಾಲು ಸಾಲು ಸುದ್ದಿ ಬಿತ್ತರವಾದರೂ ಎಚ್ಚೆತ್ತುಕೊಳ್ಳದ ಪುರಸಭೆಯೂ ಶುಕ್ರವಾರ ದಿನವಿಡಿ ರಸ್ತೆಯನ್ನು ಅಚ್ಚುಕಟ್ಟು ಮಾಡಿದೆ.</p>.<p>ಪಟ್ಟಣದ ತುಂಬೆಲ್ಲಾ ಹಾಕಲಾಗಿರುವ ಬ್ಯಾನರ್, ಬಂಟಿಂಗ್ಸ್ಗಳಿಗೆ ಅನುಮಾತಿ ನೀಡಿದರಾ? ನಿಷೇಧಿತ ಪ್ಲಾಸ್ಟಿಕ್ ಬಳಸಿ ಫ್ಲೆಕ್ಸ್ಗಳನ್ನು ಹಾಕಲು ಅನುಮತಿ ನೀಡಿದವರು ಯಾರು? ಎಂಬುದಕ್ಕೆ ಪುರಸಭೆಯೇ ಉತ್ತರ ನೀಡಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>