<p>ದೇವನಹಳ್ಳಿ: ದೇಶದ ಭವಿಷ್ಯ ಯುವ ಸಮುದಾಯದಲ್ಲಿ ಶ್ರಮದಲ್ಲಿ ಅಡಗಿದ್ದು, ಅವರಲ್ಲಿ ದೇಶಭಕ್ತಿ, ರಾಷ್ಟ್ರೀಯ ಭಾವೈಕ್ಯತೆ ಭಾವನೆ ಮೂಡಿಸುವ ಕೆಲಸಗಳು ನಡೆಯಬೇಕು ಎಂದು ಸಂಸದ ಬಿ.ಎನ್.ಬಚ್ಚೇಗೌಡ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಜಿಲ್ಲಾ ಯುವ ಉತ್ಸವ’ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಯುವಕರ ಪ್ರತಿಭೆ ಅನಾವರಣಕ್ಕೆ ಈ ಉತ್ಸವವೂ ವೇದಿಕೆಯಾಗಿದ್ದು, ಪ್ರತಿಭಾ ಪ್ರದರ್ಶನಗಳಿಂದ ವಿಶ್ವ ಮಟ್ಟಕ್ಕೆ ಹೆಸರುವಾಸಿಯಾಗಿ, ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡಿ ನಿಮ್ಮ ಅಡಗಿರುವ ಸೂಪ್ತ ಪ್ರತಿಭೆ ಅನಾವರಣಗೊಳ್ಳಲಿ ಎಂದು ಆಶಿಸಿದರು.</p>.<p>ರಾಜ್ಯಸಭಾ ಸದಸ್ಯ ಡಾ.ಎಲ್ ಹನುಮಂತಯ್ಯ ಮಾತನಾಡಿ, ಯುವಕರಲ್ಲಿರುವ ಸಾಮರ್ಥ್ಯವನ್ನು ಹೆಚ್ಚಿಸಿದರೇ ದೇಶ ಕಟ್ಟುವ ಕೆಲಸ ಸುಲಭವಾಗುತ್ತದೆ. ಸಾಂಸ್ಕೃತಿಕತೆ ಹೆಚ್ಚಾದರೇ ವೈವಿಧ್ಯಮಯವಾಗಿ ಸಮಾಜದಲ್ಲಿ ಸಾಧನೆ ಮಾಡಲು ರಹದಾರಿಯಾಗುತ್ತದೆ. ವಿದ್ಯಾರ್ಥಿದೆಸೆಯಿಂದಲೇ ಪಠ್ಯೇತರ ಚಟುವಟಿಕೆಯಲ್ಲಿ ಭಾಗಿಯಾಗಿ ಎಂದು ಸಲಹೆ ನೀಡಿದರು.</p>.<p>ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.</p>.<p>ಕ್ರೀಡಾ ಸಚಿವಾಲಯದ ಅಧಿಕಾರಿ ಎಂ.ಎನ್.ನಟರಾಜ್, ಗಾಂಧಿ ಸ್ಮಾರಕ ನಿಧಿಯ ಇಂದಿರಾ ಕೃಷ್ಣಪ್ಪ, ಕಾಲೇಜಿನ ಪ್ರಾಂಶುಪಾಲ ಡಿ.ಮಂಜಯ್ಯ, ದೈಹಿಕ ಶಿಕ್ಷಕ ಕೆ.ಕೆ.ರವಿಚಂದ್ರ, ಜಿಲ್ಲಾ ಯುವ ಅಧಿಕಾರಿ ಎ.ನಾಗಲಕ್ಷ್ಮೀ, ಸುಂದರಮ್ಮ, ವಿ.ಪ್ರಶಾಂತ್, ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇವನಹಳ್ಳಿ: ದೇಶದ ಭವಿಷ್ಯ ಯುವ ಸಮುದಾಯದಲ್ಲಿ ಶ್ರಮದಲ್ಲಿ ಅಡಗಿದ್ದು, ಅವರಲ್ಲಿ ದೇಶಭಕ್ತಿ, ರಾಷ್ಟ್ರೀಯ ಭಾವೈಕ್ಯತೆ ಭಾವನೆ ಮೂಡಿಸುವ ಕೆಲಸಗಳು ನಡೆಯಬೇಕು ಎಂದು ಸಂಸದ ಬಿ.ಎನ್.ಬಚ್ಚೇಗೌಡ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಜಿಲ್ಲಾ ಯುವ ಉತ್ಸವ’ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಯುವಕರ ಪ್ರತಿಭೆ ಅನಾವರಣಕ್ಕೆ ಈ ಉತ್ಸವವೂ ವೇದಿಕೆಯಾಗಿದ್ದು, ಪ್ರತಿಭಾ ಪ್ರದರ್ಶನಗಳಿಂದ ವಿಶ್ವ ಮಟ್ಟಕ್ಕೆ ಹೆಸರುವಾಸಿಯಾಗಿ, ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡಿ ನಿಮ್ಮ ಅಡಗಿರುವ ಸೂಪ್ತ ಪ್ರತಿಭೆ ಅನಾವರಣಗೊಳ್ಳಲಿ ಎಂದು ಆಶಿಸಿದರು.</p>.<p>ರಾಜ್ಯಸಭಾ ಸದಸ್ಯ ಡಾ.ಎಲ್ ಹನುಮಂತಯ್ಯ ಮಾತನಾಡಿ, ಯುವಕರಲ್ಲಿರುವ ಸಾಮರ್ಥ್ಯವನ್ನು ಹೆಚ್ಚಿಸಿದರೇ ದೇಶ ಕಟ್ಟುವ ಕೆಲಸ ಸುಲಭವಾಗುತ್ತದೆ. ಸಾಂಸ್ಕೃತಿಕತೆ ಹೆಚ್ಚಾದರೇ ವೈವಿಧ್ಯಮಯವಾಗಿ ಸಮಾಜದಲ್ಲಿ ಸಾಧನೆ ಮಾಡಲು ರಹದಾರಿಯಾಗುತ್ತದೆ. ವಿದ್ಯಾರ್ಥಿದೆಸೆಯಿಂದಲೇ ಪಠ್ಯೇತರ ಚಟುವಟಿಕೆಯಲ್ಲಿ ಭಾಗಿಯಾಗಿ ಎಂದು ಸಲಹೆ ನೀಡಿದರು.</p>.<p>ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.</p>.<p>ಕ್ರೀಡಾ ಸಚಿವಾಲಯದ ಅಧಿಕಾರಿ ಎಂ.ಎನ್.ನಟರಾಜ್, ಗಾಂಧಿ ಸ್ಮಾರಕ ನಿಧಿಯ ಇಂದಿರಾ ಕೃಷ್ಣಪ್ಪ, ಕಾಲೇಜಿನ ಪ್ರಾಂಶುಪಾಲ ಡಿ.ಮಂಜಯ್ಯ, ದೈಹಿಕ ಶಿಕ್ಷಕ ಕೆ.ಕೆ.ರವಿಚಂದ್ರ, ಜಿಲ್ಲಾ ಯುವ ಅಧಿಕಾರಿ ಎ.ನಾಗಲಕ್ಷ್ಮೀ, ಸುಂದರಮ್ಮ, ವಿ.ಪ್ರಶಾಂತ್, ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>